Home / ಕವನ / ಕವಿತೆ / ಅವಳು ಯಾರು?

ಅವಳು ಯಾರು?

ಹಸುರು ಸೀರೆಯನುಟ್ಟು ರಂಗು ಬಳೆಗಳ ತೊಟ್ಟು
ತನ್ನ ಗೆಳತಿಯರೊಡನೆ ನಡೆದವಳು ಯಾರು?
ಅರಳಿಯಾ ಮರದಡೀ ಹೂಬುಟ್ಟಿ ಕೆಳಗಿರಿಸಿ
ಚೆಂಡು ಹೂಗಳ ಕೋದು ಹಾಡಿದಳು-ಯಾರು?

ಹಣೆಗೆ ತಿಲಕವನಚ್ಚಿ ಮುಡಿಗೆ ಹೂಗಳ ಮುಚ್ಚಿ
ಮೆಲ್ಲಡಿಯನಿಡುತಿಡುತ ಪೋದವಳು ಯಾರು?
ಜಾರುತಿಹ ಸೆರಗನ್ನು ಎದೆಯಾರೆ ನಿಲ್ಲಿಸುತ
ತನ್ನನ್ನು ತಾನಾಗಿ ನೋಡುವಳು-ಯಾರು?

ಕಡೆಗಣ್ಣು ಉರುಳಿಸುತ ತನುಲತೆಯ ಕೊಂಕಿಸುತ
ನಸುನಾಚುಗೆಯ ತೋರಿ ನಡೆದವಳು ಯಾರು?
ಕೆರೆ ಏರಿ ಕಟ್ಟೆಯಲಿ ಕಾಲ್ತೊಳೆದು ಜಾರಲು
ಬೆರಗಾಗಿ ಆಚೀಚೆ ನೋಡಿದಳು-ಯಾರು?

ಮಣಿಸಾಲು ಕೆಂಪೋಲೆ ಜುಂಜುಮುಕಿ ಕಿವಿಯೋಲೆ
ಮುಂಗುರಿಯ ಮೂಗುತ್ತಿ ಹಾಕಿದಳು-ಯಾರು?
ಕಾವೇರಿ ಜಾತ್ರೆಯಲಿ ಜವ್ವನಿಗ ತಂಡದಲಿ
ತಾನೊಲಿವನಾರೆಂದು ಹುಡುಕಿದಳು-ಯಾರು?

ಫಣಿವೇಣಿ ಆಚೀಚೆ ಒಂಟಿಸರ ಕೊರಳಾಚೆ
ಕಾಲ್ಬಳೆ ಕಿರುಗೆಜ್ಜೆ ಧರಿಸಿದಳು ಯಾರು?
ಕೇರಿ ಹೆಂಗಳ ಸಾಲು ಸರಸವಾಡುತ ತಾನು
ಊರ ಜಾತ್ರೆಗೆ ಅಂದು ಪೋದವಳು ಯಾರು?

ದನಮೇವ ಬಯಲಿನಲಿ ತನ್ನ ತಾಳದ ಹಾಡ
ತೂಗುಯ್ಯಾಲೆ ಹಾಡಿ, ಹಾಡಿದಳು-ಯಾರು?
ಕೆಂಬಕ್ಕಿ ಶುಕ ಪಿಕ ಮಲ್ಲಳಿಯ ಹಾಡುಗಳ
ಕೇಳುತಲೆ ತಾನಾಗಿ ನಲಿದವಳು ಯಾರು?

ಕೊಡಪಾನ ನೀರೊಡನೆ ಘುಳುಗುಳು ಮಾತಾಡಿ
ಮೆಟ್ಟಲಲಿ ರಂಗೋಲಿ ಬಿಡಿಸಿದಳು-ಯಾರು?
ಹಸುರಾಂತ ವನಶೋಭೆ ತಾನುಟ್ಟ ಹಸುರುಡಿಗೆ
ಒಂದಾಗಲಿಲ್ಲೆಂದು ಅಂದವಳು ಯಾರು?

ಪೂರ್ಣಚಂದ್ರನ ಚೆಲುವು ಕಂಡು ತನ್ನಯ ರೂಪು
ಅಂತಾಗಲಿಲ್ಲೆಂದು ಗೊಣಗಿದಳು-ಯಾರು?
ತನ್ನ ಅಪ್ಪನ ಮಾಂವ ಎಂದು ತಾ ಕರೆವವನು
ಯಾರಿರುವನೋ ಎಂದು ನೆನೆಸಿದಳು ಯಾರು?
*****

ಪುಸ್ತಕ: ಸೂರ್ಯ ಕಾಂತಿ

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...