ಆಶಯ

ಇಹದ ಸುಖವನು ಬಯಸಿ, ಆತ್ಮಯೋಗದ ಬಲವು
ತನ್ನದೆಂಬುದ ನೆಚ್ಚಿ, ಮುಂಗುರಿಯ ದೃಷ್ಠಿಯನು
ನಂಬಿಕೆಯ ನೇತೃದಲಿ ನೋಡುತಲು, ಜೀವನದ
ಧ್ಯೇಯವನು ದಿಗ್ಭ್ರಾಂತ ತರಂಗದೊಳಾಡಿಸುತ,
ಕೋಟಿಮಾನವರಲ್ಲಿ ತನ್ನ ಪ್ರತಿಭೆಯ ಸಾಕ್ಷ್ಯ
ಸಾರುತಲಿ ಪಾಡುತಲಿ, ಮಾನವನು ತಾನ್ಪಡೆದ
ಜನ್ಮಸಾರ್ಥಕವೆಂದು ಜಡನಂತೆ ಮರುಳಾಗಿ
ವಿಶ್ವನಿಯಮದ ಎದುರು ಪಕ್ಕಮಿಲ್ಲದ ಪಾತೆ-
ಯಂತೆ ಸೇರ್ವನು ಸೋಲ ಸುರಂಗವನ್ನು!

ಕಾಲಪುರುಷನು ತಾಳ್ದ ಅನುಭವವೆ ಅದು ಚಿತ್ರ!
ಎಲ್ಲಿಂದೆಲಿಗೆ ಹಾಯ್ದು ಎಂತೆಂಥಾ ಭೀಕರದ
ನೋಟವನು, ಜನತೆಗಳ ಭಾಗ್ಯ ದೌರ್ಭಾಗ್ಯಗಳ
ಜೀವನವ ನೋಡಿ ಕನಿಕರಗೊಂಡು, ಮನಸಿನಾ
ಭಿತ್ತಿಯಲಿ ಆ ಹಾಳೂಬಾಳಿನಾ ಬೇಗುದಿಯ
ಚಿತ್ರವನು, ಆ ಕಾಲ ಮಹಿಮಾ ಮಹತ್ವವನು
ಒಂದಾಗಿ, ಗುರುಜನರ ನೃಪಜನದ ತತ್ವದಿಂ
ಆಳ್ಕೆಯಿಂ ಬಗೆ ಬಗೆಯ ಸೋಗನ್ನು ಜಗಪಡೆದ
ತೆರವನ್ನು ನೋಡುತೋಡುತ ಸಾರ್ವುದಾಹಾ!

ಎನ್ನೆದೆನ್ನದುವೆಂದು ಔತ್ಕೃಷ್ಟ್ಯವಾದದಲಿ,
ಒಲ್ಮೆ ನಲ್ಮೆಯ ಸುಖನು ಎಂಬ ವಿಚಾರದಲಿ,
ರಸಿಕ ಜೀವನ ತಾಳ್ವ ಮೋಹ ಸಂಘಟನೆಯಲಿ,
ಸಮರನಾದದಿ ಏಳ್ವ ಜನದ ತಳಮಳದಲ್ಲಿ,
ವೈರಾಗ್ಯ ಜೀವನವು ಪಡೆವ ಸಾರ್ಥಕದಲ್ಲಿ,
ಮನಕೆ ತೋರುವವೊಂದು ವಿಸ್ಮಯಾಂತಕವಾದ-
ಧ್ವನಿಯ ಲೋಕಕೆ ಸಾರ್ವ ಮಂಗಲಾಮಂಗಲವೊ
ಹೇಳ ಬಲ್ಲವರಾರು?  ಹೃದಯಾದಾವೇಶವನು
ಅನುಭವವೆ ಒಪ್ಪಿಸುವುದು ಕಾಣ್ಕೆಯಾಗಿ!

ಲೇಖನಿಯನುರುಳಿಸೆನು ಕವಿಯೆಂಬ ಹೆಮ್ಮೆಯಲಿ,
ಪಾಡ್ದನಿಯನೊಪ್ಪಿಸೆನು ಗಮಕಿಯೆಂಬರ್ಥದಲಿ,
ಜಗದಿರವ ಚಿತ್ರಿಸೆನು ಚಿತ್ರಿಕನ ರೀತಿಯಲಿ,
ತತ್ವಗಳ ನೊರೆಯೆನಾ ತಾತ್ವಿಕನ ಸೂಕ್ತಿಯಲಿ,
ಎಮ್ಮೆ ಜೀವದ ಛಾಯೆ ಪರರ ಬಾಳಿನ ಮಾಯೆ
ಹಾಸುಹೊಕ್ಕಾಗಿ ತರಂಗಗಳ ತಲ್ಪದಲಿ
ಬಿದ್ದುರುಳುವುದ ಕಂಡು ಮನವಾರೆ ಸೋಲುತಲಿ
ನೀಳ್ಗತೆಯ ಕಿರಿದಾಗಿ ವಿಷಯಗಳ ಲಘುವಾಗಿ
ಅಂಧ ಸಾಧಕನಂತೊರೆಯಲಿಳಿದೆನೊರ್ವ!

ಬ್ರಹ್ಮಾಂಡ ನೆಲಗಟ್ಟು ಪ್ರೇಮದಾಧಾರದಲಿ
ವಿಶ್ವನಿಯಮದ ಬಲವು ಪ್ರೇಮಸುಧೆ ಧಾರೆಯಲಿ,
ಮಾನವನ ವ್ಯವಹಾರ ಪ್ರೇಮ ಪೋಷಾಕಿನಲಿ,
ಜೀವಿಗಳ ಸ್ವಾತಂತ್ರ್‍ಯ ಪ್ರೇಮಪ್ರಲಾಪದಲಿ-
ಅಡಗಿರಲು, ಈರೇಳು ಲೋಕದಾ ಘಟನೆಯಲಿ
ಪ್ರೇಮಜಾಲದಿ ಏಳ್ವ ಪ್ರಣಯಧೂಮದ ರೂಪ
ಅದೆಂತು ವೈಚಿತ್ರ್‍ಯ!  ಎಂತು ಮನೋಹರವು!!
ಎನ್ನ ಸೊಲ್ಲನು ಇಲ್ಲಿ ತದ್ವಿಶೇಷದಿ ಚೆಲ್ಲಿ
ನೋಟಕರ ಹಾಯೆಣಿಸಲಸದಳವೊ!

ಮನಸಿಜನ ಮಾಯೆಯಲಿ ಜನದಲಿಹ ಮೋಹದಲಿ
ಕವಿಪಾಕವೊಸರುವುದು ಆತ್ಮರಸಬಟ್ಟಲಿಂ!
ಸುಖದ ದುಃಖದ ಬೇರೆ ಪಾಲು ಎರಡನು ಮಾಡಿ
ಸೋಗಿನನುಭವದಲ್ಲಿ ಸವಿದು ಸವಿಕಹಿಯನ್ನು
ನೋಡಿ ಲೋಕದ ಬಗೆಯ ಚಿತ್ರಿಸಿಡುತಲಿ ವಿಧವ-
ಹಾಹಾಕಾರದ ಕಾಣ್ಕೆ ಗುಣದ ದೋಷದ ಪೂಣ್ಕೆ
ಒಂದನೊಂದರಲಿಟ್ಟು, ತನ್ನ ಇರವನು ತನ್ನ
ಬುದ್ಧಿಬಲದಿಂ ಬೆಳಗಿ ಆದರ್ಶ ಜೀವನಕೆ
ಆಧಾರನಾಗಿರಲು ಸಲ್ವುದೆನಿತೊ!
*****

ಪುಸ್ತಕ: ಸೂರ್ಯ ಕಾಂತಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೊಡಗಿನ ಕರೆ
Next post ತೊರೆದು ಹೋಗದಿರೊ ಜೋಗಿ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys