ಸದಗುರುನಾಥ‍ನ್ಹೊರತು ಗತಿ ಬ್ಯಾರಿಹುದೆ?
ಮುಕ್ತಿದಾತನೆನ್ನುತಾ ಶ್ರುತಿ ಸಾರುತಿದೆ ||ಪ.||

ಕೌತಕದಿ ಕಲಿಯೊಳು ಕೂಡಿಸಿದಾ
ರೇತು ರಕ್ತದೊಳು ಮನಿ ಮಾಡಿಸಿದಾ
ಮಾತೆ ಕುಚದೊಳು ಆಮೃತರಸ ನೀಡಿಸಿದಾ ||೧||

ಏನು ಹೇಳಲಿ ಆತನ ದಯದಿಂದಾ
ದೇವ ಶಿಶುನಾಳೇಶನ ವರದಿಂದಾ
ತಾನು ತಾನೇ ಆದನು ಗುರುಗೋವಿಂದಾ ||೨||

****