ಸಹೋದರಿ ಮೊರೆ

ರಕ್ಷಿಸಿ… ಉಳಿಸಿ, ವಾತ್ಸಲ್ಯದ
ಓ… ನನ್ನ ಪ್ರೀತಿಯ ಸಹೋದರರೇ
ನನ್ನಿಹ ಉಳಿವು ಅಳಿವಾಗುತಿದೆ
ಶೋಷಣೆ ಎಲ್ಲೆಡೆ ನಡೆದಿದೆ

ಕೀಚಕ, ದುಶ್ಯಾಸನರು ತುಂಬಿಹರು
ಮಾತೆ-ಸಹೋದರಿಯ ಅರ್ಥ ಅರಿಯದ
ಲೈಂಗಿಕ ಲಾಲಸೆಯಲಿರುವರು

ಬಲಿಪಶುವಾಗಿಸಿ ಬಲಿಗೊಡುತಿಹರು
ಮಾನ ಹರಾಜುಗೊಳಿಸುತಲಿ
ನೋವು-ನರಳಾಟದಲಿ ನೂಕುತ
ಅಟ್ಟಹಾಸಗೈಯುತಿಹರು

ನನ್ನಯ ಆಸರೆಗೆ ನೀ ನೆರಳಾಗು
ತಂಗಿಯ ಕರುಳಿನ ಕೊರಳಾಗು
ಪ್ರೀತಿವಾತ್ಸಲ್ಯದ ಶಕ್ತಿಯಲಿ
ನನಗೆಂದೆಂದು… ಬದುಕಲಿ
ಬಾಂಧವ್ಯದ ಶಿಲ್ಪಿಯು ನೀನಾಗು…

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಮ ಇಲ್ಲದ ಮುಂಚೆ
Next post ಹಾಯಿಕು-ಹಂದರ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

cheap jordans|wholesale air max|wholesale jordans|wholesale jewelry|wholesale jerseys