Home / ಲೇಖನ / ವಿಜ್ಞಾನ / ಯುದ್ಧಕ್ಕೆ ಬರಲಿದ್ದಾರೆ – ಅಜೇಯ ಸೈನಿಕರು

ಯುದ್ಧಕ್ಕೆ ಬರಲಿದ್ದಾರೆ – ಅಜೇಯ ಸೈನಿಕರು

ಚಿತ್ರ: ಮಥಿಯಸ್ ವೇವರಿಂಗ್
ಚಿತ್ರ: ಮಥಿಯಸ್ ವೇವರಿಂಗ್

ಐತಿಹಾಸಿಕ ಕಾಲದಿಂದ ಹಿಡಿದು ಇಂದಿನವರೆಗೂ ಸೋಲಿನ ಕಹಿಯನ್ನು ಅನುಭವಿಸಿದ ಆಥವಾ ದೂರದಿಂದ ಕಂಡು ಪಲಾಯನ ಗೈಯ್ಯುವ ಸೈನಿಕರು ಸರ್ವೇ ಸಾಮಾನ್ಯ. ಆದರೆ ಸೋಲನ್ನೇ ಆರಿಯದ ಸೈನಿಕರು ಕೆಲವೇ ವರ್ಷಗಳಲ್ಲಿ ರಣರಂಗಕ್ಕೆ ಧುಮುಕಲಿದ್ದಾರೆ ಎಂದರೆ ಆಶ್ಚರ್ಯ ಮತ್ತು ಸಂತೋಷದ ಸಂಗತಿಯೇ. ಮಾನವ ಸಹಜವಾದ ಸೋಲು ಗೆಲುವು ಭೂಮಿಯಲ್ಲಿ ಇದ್ದದ್ದೆ ಆದರೆ ಮಾನವರೇ ಅಲ್ಲದೆ ಮಾನವರಂತೆ ಯುದ್ಧ ವೈಖರಿಯಲ್ಲಿ ತೊಡಗುವ ಸೋಲನ್ನು ಅರಿಯದ ಸೈನಿಕರು ಸಿಕ್ಕುವುದೆಂದರೆ ಮನುಷ್ಯರಲ್ಲದೆ ರಾಕ್ಷಸರೆ!? ರಾಕ್ಷಸಿ ಶಕ್ತಿಯುಳ್ಳ ಮನುಷ್ಯರಲ್ಲದ ರೋಬಟ್ ಸೈನಿಕರಿಂದಲೇ ಈ ಸಾಧನೆ ನಿಜ, ಮಾನವ ಶಕ್ತಿಯ ಹತ್ತಾರುಪಟ್ಟು ಹೆಚ್ಚಿನ ಶಕ್ತಿಯನ್ನು ಹೊಂದಿದ ರೋಬಟ್ ಮಾನವರು ಈಗಾಗಲೇ ಫ್ಯಾಕ್ಟರಿಗಳಲ್ಲಿ ವಿದೇಶಿ ಅಡುಗೆ ಮನೆಗಳಲ್ಲಿ ಕೆಲಸ ನಿರ್ವಹಿಸುತ್ತಲಿವೆ. ಹತ್ತು ಜನ ಮಾಡುವ ಕೆಲಸವನ್ನು ಒಬ್ಬ ರೋಬಟ್ ಮನುಷ್ಯ ಕೆಲವೇ ಘಂಟೆಗಳಲ್ಲಿ ಮಾಡುವುದಾದರೆ ೧೦ ಜನ ಸೈನಿಕರಿಗೆ ತರಬೇತಿ ನೀಡಿ ಅವರ ಸಂಬಳ ಸಾರಿಗೆ, ಇತರೆ ಖರ್ಚುಗಳನ್ನೆಲ್ಲ ನಿಭಾಯಿಸುವುದಕ್ಕಿಂತಲೂ ಒಬ್ಬ ರೋಬನನ್ನು ಯುದ್ಧಕ್ಕೆ ತೊಡಗಿಸಿದರೆ ಎದುರಿಗಿದ್ದ ಮನುಷ್ಯ ಸೈನಿಕರಾಗಲಿ, ಮದ್ದು ಗುಂಡುಗಳಾಗಲಿ ಎಲ್ಲವೂ ಸಪಾಟ್ ಆಗುತ್ತದೆ!!

ಅಮೇರಿದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ನಾಸಾದ ಜೆಟ್ ಪ್ರೊಪುಲಶನ್ ಪ್ರಯೋಗಾಲಯ ಇದಕ್ಕಾಗಿ ಅಭಿವೃದ್ದಿ ಪಡಿಸಿದ ಯಂತ್ರಜ್ಞಾನವನ್ನು
ಬೆಳೆಸಿಕೊಂಡಿದೆ. ಮನೆಗೆಲಸಕ್ಕಾಗಿ ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುವಂತೆ ಯುದ್ಧದಲ್ಲಿಯೂ ಕೂಡ ಕೈಯಲ್ಲಿ ಪಿಸ್ತೂಲು, ರೈಫಲ್‌ಗಳ ಗುಂಡಿ ಅದುಮುವ, ಮುಂದೆ ಮುಂದೆ ನುಗ್ಗುವ, ಗಂಡು ಖಾಲಿಯಾದಾಗ ತುಂಬುವ, ಮತ್ತು ಗುರಿ ಇಟ್ಟು ಶತೃಸೈನ್ಯವನ್ನು ನಾಶಪಡಿಸುವ ಯಾಂತ್ರೀಕೃತ ಯಂತ್ರಗಳನ್ನಳವಡಿಸಿದ ರೋಬಟ್‌ಗಳನ್ನು ಸಿದ್ಧಗೊಳಿಸುತ್ತಿದೆ. ರೋಬಟ್ ಸೈನಿಕರು ಭಾರವಿರದೆ ಹಗುರವಾಗಿದ್ದು ಸುಲಭವಾಗಿ ಚಲಿಸುತ್ತವೆಯಂತೆ
ಇವುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸಬಹುದು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...