Home / ಲೇಖನ / ವಿಜ್ಞಾನ / ಅಣುಶಕ್ತಿಗಡಿಯಾರ

ಅಣುಶಕ್ತಿಗಡಿಯಾರ

ಮಾನವನ ನಾಗರೀಕತೆಯ ಪ್ರಾರಂಭದಿಂದಲೇ ಸಮಯವನ್ನು ಅಳೆಯುವ ಗಡಿಯಾರಗಳ ಉಪಯೋಗವಾಗುತ್ತಲಿವೆ. ಪುರಾತನ ಅಳತೆಯ ವಿಧಾನಗಳು ಅಷ್ಟೇನೂ
ಕರಾರುವಾಕ್ಕಾಗಿರಲಿಲ್ಲ. ಇದೀಗ ಸಮಯವನ್ನು ಕರಾರುವಾಕ್ಕಾಗಿ ತೋರಿಸುವ ಅತ್ಯಂತ ಸುಧಾರಿತ ಗಡಿಯಾರಗಳು ರಚನೆಯಾಗುತ್ತಲಿವೆ. ಕರಾರುವಾಕ್ಕಾಗಿ ಸಮಯ ತೋರಿಸುವ ಅದ್ಭುತ ಗಡಿಯಾರವೆಂದರೆ ಅಣುಶಕ್ತಿ ಗಡಿಯಾರಗಳು. ಕ್ರಿ.ಶ. ೧೯೪೬ರಲ್ಲಿ ಡಾ|| ವಿಲ್ಲರ್ಟ್ ಫ್ರಾಂಕ್ ಎಂಬ ಒಬ್ಬ ಅಮೇರಿಕದ ಭೌತವಿಜ್ಞಾನಿಯು ಈ ಗಡಿಯಾರವನ್ನು ಸಂಶೋಧಿಸಿದ ವಾಷಿಂಗ್‌ಟನ್ ಡಿ.ಸಿಯ ನ್ಯಾಶನಲ್ ಬ್ಯೂರೋ ಆಫ್ ಸ್ಟ್ಯಾಂಡರ್ಡ್‌ನಲ್ಲಿ ಇಂತಹ ಮೊದಲ ಗಡಿಯಾರವನ್ನು ತಯಾರಿಸಿ ಇಡಲಾಯಿತು.

೧೭,೦೦,೦೦೦ ವರ್ಷಗಳ ಆವಧಿಯವರೆಗೆ ಒಂದು ಸೆಕೆಂಡಿನಷ್ಟು ಕರಾರುವಾಕ್ಕಾಗಿ ಈ ಗಡಿಯಾರ ಇರುತ್ತದೆ. ಸಮಯದ ಅಳತೆಯ ಕ್ಷೇತ್ರದಲ್ಲಿ ಇದು ಈಗಾಗಲೇ ಕ್ರಾಂತಿಯನ್ನುಂಟು ಮಾಡಿದೆ. ಪರಮಾಣುಗಳ ಕೆಲವು ಆಣುಗಳು ಉತ್ಪಾದಿಸುವ ಕಂಪನಗಳನ್ನು ಈ ಅಣುಶಕ್ತಿ ಗಡಿಯಾರವು ಅಳೆಯುತ್ತದೆ. ತೂಗಾಡುವಿಕೆಗಳ ಸಂಖ್ಯೆಯನ್ನು ಲೆಕ್ಕಮಾಡುವುದರಿಂದ ಸಮಯವನ್ನು ಅಳೆಯಲಾಗುತ್ತದೆ. ಹೆಚ್ಚಿನ ಅಣುಶಕ್ತಿಗಡಿಯಾರಗಳು ೧,೪೦೦ ರಿಂದ ೪೦,೦೦೦MHzವರೆಗೆ ಸೂಕ್ಷ್ಮ ಅಲೆಗಳ ಪ್ರದೇಶದಲ್ಲಿ ಆಗುವ ತೂಗಾಡುವಿಕೆಗಳ ಸಂಖ್ಯೆಯನ್ನು ಅಳತೆಮಾಡಿ ಕಾಲವನ್ನು ಕಂಡು ಹಿಡಿಯಲಾಗುತ್ತದೆ.

ಈ ರೀತಿಯ ಅಣುಶಕ್ತಿ ಗಡಿಯಾರಗಳ ಅಭಿವೃದ್ದಿಯಿಂದಾಗಿ ಪ್ರಪಂಚವು ೧೯೭೨ರ ಪ್ರಾರಂಭದಿಂದಲೂ ಅಣುಶಕ್ತಿ ಸಮಯಕ್ಕೆ ಬದಲಾಯಿಸಿಕೊಂಡಿತು. ಈಗ ಅಂತರಾಷ್ಟ್ರೀಯ ಒಪ್ಪಿಗೆಯಾಗಿರುವ ಅತಿ ಚಿಕ್ಕ ಸಮಯ ಘಟಕವು ಅಣುಶಕ್ತಿಸೆಕೆಂಡ್ ಆಗಿದೆ.

ಈ ಗಡಿಯಾರಗಳ ಅನುಕೂಲ ಮತ್ತು ಉಪಯೋಗ: ವಾತಾವರಣದ ಚಂಚಲತೆಯಿಂದಾಗಲಿ ಅಥವಾ ಭೂಮಿಯ ಸುತ್ತುವಿಕೆಯ ವ್ಯತ್ಯಾಸಗಳಿಂದಾಗಲಿ ಇದರ ಮೇಲೆ ಯಾವುದೇ ಪರಿಣಾಮ ಬೀರಲಾರದು ಏಕೆಂದರೆ ಭೂಮಿಯು ಪ್ರತಿವರ್ಷವೂ ಒಂದು ಸೆಕೆಂಡಿನಷ್ಟು ತನ್ನ ಸುತ್ತುವಿಕೆಯಲ್ಲಿನಿಧಾನವಾಗುತ್ತಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...