Home / ಲೇಖನ / ವಿಜ್ಞಾನ / ತತ್‌ಕ್ಷಣವೇ ಛಾಯಾಚಿತ್ರ ನೀಡುವ ಕ್ಯಾಮರಾ

ತತ್‌ಕ್ಷಣವೇ ಛಾಯಾಚಿತ್ರ ನೀಡುವ ಕ್ಯಾಮರಾ

ಕಲಾಕಾರರಿಗೆ, ವಿಜ್ಞಾನಿಗಳಿಗೆ, ಇತಿಹಾಸಕಾರರಿಗೆ, ಬರಹಗಾರರಿಗೆ, ಚಲನಚಿತ್ರ ನಿರ್ಮಾಪಕರಿಗೆ ಈ ಕ್ಯಾಮರಾವು ಒಂದು ದೊಡ್ಡವರವಾಗಿದೆ. ಕ್ರಿ.ಶ. ೧೮೩೯ರಲ್ಲಿ ಮೊಟ್ಟಮೊದಲ ಬಾರಿ ಕ್ಯಾಮರವನ್ನು ಕಂಡುಹಿಡಿಯಲಾಯಿತಾದರೂ ಇದರಲ್ಲಿ ಅನೇಕ ಆವಿಷ್ಕಾರಗಳಾಗಿ ರೂಪಾಂತರಗಳಾಗಿ, ತಂತ್ರಗಳಾಗಿ ಹೊರಹೊಮ್ಮಿವೆ. ಅದರಲ್ಲೂ ೧೯೪೮ರಲ್ಲಿ “ಪೊಲರೈಯ್ಡ್ ಕ್ಯಾಮರಾ” ಎಂದು ಕರೆಯಲಾಗುವ ತಕ್ಷಣ ಚಿತ್ರ ಬಿಂಬವನ್ನು ತಯಾರಿಸಿಕೊಡುವ ಅದ್ಭುತ ಕ್ಯಾಮರ ಇದಾಗಿದೆ. ಇದು ವಿಜ್ಞಾನ ಜಗತ್ತಿಗೆ ನೂತನ ಕೊಡುಗೆಯಾಗಿದೆ. ಇದನ್ನು ಸಂಯುಕ್ತಸಂಸ್ಥಾನದ ‘ಎಡ್ವಿನ್ ಹರ್ಬರ್ಟ್’ ಎಂಬ ವಿಜ್ಞಾನಿ
ಕಂಡುಹಿಡಿದ. ಅಲ್ಲಿಯವರೆಗೆ “ಕಪ್ಪು-ಬಿಳುಪು ಕ್ಯಾಮರಾಗಳು ಸಾಕಷ್ಟು ಸಮಯದ ನಂತರ ಫಲಿತಾಂಶ ನೀಡುತ್ತಿದ್ದವು. ಆದರೆ ತತ್‌ಕ್ಷಣದಲ್ಲಿ ಅದು ಬಣ್ಣದಲ್ಲಿ ಫೋಟೋಗಳನ್ನು ನೀಡಬಲ್ಲ ಈ ಕ್ಯಾಮರಾ ದುಬಾರಿಯಾಗಿದ್ದರೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆದಿದೆ.

ಮುಂದುವರೆದಂತೆ ೧೯೭೨ರಲ್ಲಿ ಎಡ್ವಿನ್. ಹೆಚ್. ಲ್ಯಾಂಡ್ ಎಸ್.ಎಕ್ಷ್-೭೦ ಎಂದು ಕರೆಯಲ್ಪಡುವ ತನ್ನ ಕ್ಯಾಮರದ ಸುಧಾರಿತ ‘ಜೇಬು ಮಾದರಿ’ಯನ್ನು ಸೊಸೈಟಿ ಆಫ್
ಪೋಟೋಗ್ರಾಫಿಕ್ ಸೈಂಟಿಸ್ಟ್ ಅಂಡ್ ಇಂಜಿನಿಯರ್ಸ್‌ಗೆ ಪರಿಚಯಿಸಿದ. ಇದರಲ್ಲಿ ಛಾಯಾ ಚಿತ್ರಣ ಕ್ರಿಯೆಯು ಸೂಕ್ಷ್ಮ ಎಲೆಕ್ಟ್ರಾನಿಕ್ ಪರಿಧಿಗಳಿಂದ ತಮ್ಮಷ್ಟಕ್ಕೆ ತಾವೇ ನಿಯಂತ್ರಿಸಲ್ಪಡುತ್ತವೆ. ೧೯೪೮ರಲ್ಲಿ ಎಡ್ವಿನ್ ಲ್ಯಾಂಡನು “ಪೊಲಾರ್ ವಿಷನ್” ಎಂದು ಕರೆಯಲ್ಪಡುವ ಒಂದು ತಕ್ಷಣ ಗೃಹಚಲನ ಚಿತ್ರ ವ್ಯವಸ್ಥೆಯನ್ನು ಕಂಡುಹಿಡಿದು ಪರಿಚಯಿಸಿದ. ಇಂತಹ ಕ್ಯಾಮರಗಳು ಅದ್ಭುತವಾಗಿದ್ದು ಪ್ರಪಂಚದಾದ್ಯಂತ ಹವ್ಯಾಸಿ ಛಾಯಾ ಚಿತ್ರಗಾರರಿಂದ ಬಳಕೆಯಾಗಲ್ಪಡುತ್ತವೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...