Home / ಲೇಖನ / ವಿಜ್ಞಾನ / ಈ ಮಾನವ ಹುಟ್ಟಿ ೨ ದಶಲಕ್ಷ ವರ್ಷಗಳಾದವು

ಈ ಮಾನವ ಹುಟ್ಟಿ ೨ ದಶಲಕ್ಷ ವರ್ಷಗಳಾದವು

ಈ ಜಗತ್ತಿನಲ್ಲಿ ಅಸಂಖ್ಯ ಜೀವಕೋಶಗಳಿವೆ. ಪ್ರಾಣಿ, ಪಕ್ಷಿ ಕೀಟ, ಉರುಗಜಾತಿಯ ಕಸೇರಕುಗಳು, ಈ ಭೂಮಿಯ ಮೇಲೆ ಹುಟ್ಟಿ ವರ್ಣವೈವಿಧ್ಯಮಯವಾಗಿ ಬದುಕುತ್ತಿವೆ. ಈ ಎಲ್ಲ ಜೀವಿಗಳಲ್ಲಿ ಅರಿವು ಹೊಂದಿದ, ಪಂಚೇಂದ್ರಿಯಗಳ ಸಾಕ್ಷಿಯುಳ್ಳ ಮಾನವನ ಉಗಮವು ೨ ದಶಲಕ್ಷ ವರ್ಷಗಳ ಹಿಂದೆ ಆಯಿತು ಮತ್ತು ಆಫ್ರಿಕಾ ಖಂಡವೇ ಈ ಮಾನವ ಜೀವಿಯ ಜನನ ಸ್ಥಳವಾಯಿತು! ಸುಮಾರು ೨೦೦೦ ದಶಲಕ್ಷ ವರ್ಷಗಳ ಹಿಂದೆ ಸಮುದ್ರದಲ್ಲಿ “ಸಣ್ಣ ಬ್ಯಾಕ್ಟೀರಿಯಾಗಳು ಕಾಣಿಸಿಕೊಂಡವು. ಇದೇ ಭೂಮಿಯ ಮೇಲೆ ಕಾಣಿಸಿಕೊಂಡು “ಪ್ರಥಮ ಜೀವಿಗಳು” ಎಂದು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.

ಕಾಲಾನುಕ್ರಮದಲ್ಲಿ ನೆಲದಮೇಲೆ ಸಸ್ಯಗಳು, ಪಾಚಿಗಳೂ, ನೀರಿನಲ್ಲಿ ಹುಳುಗಳೂ ಮತ್ತು ಅಂಬಲಿ ಮೀನಿನಂತಹ ಜೀವಿಗಳೂ ಕಂಡು ಬಂದವು. ಸಸ್ಯಗಳು ಆಮ್ಲಜನಕವನ್ನು ಬಿಡುಗಡೆ ಮಾಡುವುದರ ಮೂಲಕ “ಓಜೋನ್” ಪದರ ರಚನೆಯಾಯಿತು. ಈ ಪದರವು ಸೂರ್ಯನಿಂದ ಹೊರಹೊಮ್ಮಿದ ಅಪಾಯಕಾರಿ ಕಿರಣಗಳನ್ನು ಭೂಮಿಗೆ ತಲುಪದಂತೆ ತಡೆಯುವುದರ ಮೂಲಕ ಜೀವಿಗಳ ಏಳಿಗೆಗೆ ಅನುವು ಮಾಡಿಕೊಟ್ಟಿತು. ಸುಮಾರು ೪೫೦ ದಶಲಕ್ಷ ವರ್ಷಗಳ ಹಿಂದೆ ಜಲಾಂತರಾಳದಲ್ಲಿ ಚಿಪ್ಪನ್ನು ಹೊಂದಿದ “ಟ್ರೈಲೋಬೈಟ್ಸ್‌” ಎಂಬ ಪ್ರಾಣಿಗಳು ಹುಟ್ಟಿಕೊಂಡವು. ಮತ್ತೆ ದಶಲಕ್ಷ ವರ್ಷಗಳ ಹಿಂದೆ ನೀರಿನಲ್ಲಿ ಜೀವಿಗಳು ಅಭಿವೃದ್ಧಿ ಹೊಂದಿದವು. ಇದೇ ವೇಳೆ ನೀರಿನಲ್ಲಿ ಪ್ರಥಮ ಮೀನುಗಳು ಮತ್ತು ನೆಲದ ಮೇಲೆ ‘ಕುಕ್ ಸೋನಿಯಾ’ ಎಂಬ ನಿಜವಾದ ಅಧಿಕೃತ ಸಸ್ಯಗಳು ಹುಟ್ಟಿಕೊಂಡವು.

ಸುಮಾರು ೧೫೦ ದಶಲಕ್ಷ ವರ್ಷಗಳ ಹಿಂದೆ ಭೂಮಿಯ ಮೇಲೆ ‘ಡೈನೋಸಾರ್’ಗಳು ಕಾಣಿಸಿಕೊಂಡವು. ಈ ಪ್ರಾಣಿಗಳು ವಿವಿಧ ರೀತಿಯ ಸರಿಸೃಪಗಳನ್ನು ಮತ್ತು ಹಾರಬಲ್ಲ ಸಾಮರ್ಥ್ಯವನ್ನು ಹೊಂದಿದ ‘ಟೇರೊಸಾಸರ್’ಗಳನ್ನು ಒಳಗೊಂಡಿದ್ದವು. ಹೆಚ್ಚಿನ ಡೈನೋಸಾಗಳು ಬೃಹದಾಕಾರದ ದೇಹದೊಂದಿಗೆ ಹಾವಿನಂತಹ ತೆಳುವಾದ ಕತ್ತು ಸಣ್ಣ ತಲೆಗಳನ್ನು ಹೊಂದಲಾರಂಭಿಸಿದವು ಸುಮಾರು ೬೫ ದಶಲಕ್ಷವರ್ಷಗಳ ಹಿಂದೆ ‘ಡೈನೋಸಾರ್’ ಅವನತಿ ಹೊಂದುವರೆಗೂ ಭೂಮಿಯ ಮೇಲೆ ಪ್ರಾಣಿ ಮತ್ತು ಸಸ್ಯವರ್ಗಗಳೆರಡಲ್ಲೂ ಈ ಜೀವಿಗಳು ವಿಕಾಸ ಹೊಂದಿದವು. ಹೀಗೆ ಭೂಮಿಯ ಮೇಲೆ ಜೀವಿಗಳ ಜೀವವಿಕಾಸವಾದ
ಚರಿತ್ರೆ ವಿಜ್ಞಾನ ಜಗತ್ತಿನಲ್ಲಿ ಮೂಡಿಬಂದಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...