Home / ಕವನ / ಕವಿತೆ / ಪುಣ್ಯಕೋಟಿಗೆ

ಪುಣ್ಯಕೋಟಿಗೆ

ಮುಂದೆ ಬಂದರೆ ಹಾಯಬೇಡ
ಹಿಂದೆ ಬಂದರೆ ಒದೆಯಬೇಡ
ಎಂದು ಕಂಡ ಕಂಡವರಿಗೆಲ್ಲ ಕೈ ಮುಗಿದು
ಕಂಬನಿಯ ಕೆಚ್ಚಲು ಕರೆಯಬೇಡ
ಹುಟ್ಟಿಸಿದ ದೇವರು ಹುಲ್ಲನ್ನ ಮೇಯಿಸುವ
ನನ್ನ ಭವಿಷ್ಯವ ನೀನೇ ಬರೆಯಬೇಡ

ಹೋಗು ನಿನಗಾಗಿ
ಹಾತೊರೆದ ಹುಲಿಯ ಎದುರೇ ನಿಲ್ಲು
ಒಡ್ಡು ಗುಂಡಿಗೆಯ ರಕ್ತ ಬಿಸಿ
ನನ್ನ ಮಗು ತರಳ ಇನ್ನೂ ಹಸಿ
ಕೊಡು ಅವನಿಗೂ ಸಾವು
ಕೂಡಿ ಬರುವೆವು ನಾವು
ನಿನ್ನ ಜೀವಾರಣ್ಯ ರೋದನದ
ಹಂಬಲ ಕಟ್ಟಿದ ಕೊಟ್ಟಿಗೆಯಲ್ಲಿ
ಉಳಿಯಗೊಡು ನನ್ನ
ಕರುವಿನ ಕಿರಿದೊಗಲು ನೆಕ್ಕಿ ಇಗೋ
ಉಣಿಸುತ್ತೇನೆ ಶ್ವಾಸ-ನಾನೇ ಸತ್ತರೂ
ನನ್ನನ್ನೇ ನಿನಗೇ ಇತ್ತರೂ

ಸಾವು ನಿನ್ನನ್ನು ಕರೆಯುವ ಹೊತ್ತು,
ಈ ರೀತಿ ನನ್ನನ್ನೂ ಹೊತ್ತು
ನಡೆ ಕೂಡಿ ಬದುಕೋಣ ಸಾವಿನಲ್ಲೂ
ಮತ್ತು ಹಾಗೆ ಇಲ್ಲೂ

ಹೆಬ್ಬುಲಿಯ ಬಾಯಲ್ಲಿ
ಬಾಯಾರಿ ನಡೆವಾಗ
ನಿನ್ನ ಕರುವಿನ ಕರುಳು ಕೀಳಬೇಡ
ಹೀಗೆ ಮುಂದೂ ಹಾದು
ಹಿಂದಿಂದಲೂ ಒದೆದು
ನನ್ನ ತಬ್ಬಲಿ ‘ಮಾಡಿ’ ಹೋಗಬೇಡ
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...