Home / ಕವನ / ಕವಿತೆ / ಪುಣ್ಯಕೋಟಿಗೆ

ಪುಣ್ಯಕೋಟಿಗೆ

ಮುಂದೆ ಬಂದರೆ ಹಾಯಬೇಡ
ಹಿಂದೆ ಬಂದರೆ ಒದೆಯಬೇಡ
ಎಂದು ಕಂಡ ಕಂಡವರಿಗೆಲ್ಲ ಕೈ ಮುಗಿದು
ಕಂಬನಿಯ ಕೆಚ್ಚಲು ಕರೆಯಬೇಡ
ಹುಟ್ಟಿಸಿದ ದೇವರು ಹುಲ್ಲನ್ನ ಮೇಯಿಸುವ
ನನ್ನ ಭವಿಷ್ಯವ ನೀನೇ ಬರೆಯಬೇಡ

ಹೋಗು ನಿನಗಾಗಿ
ಹಾತೊರೆದ ಹುಲಿಯ ಎದುರೇ ನಿಲ್ಲು
ಒಡ್ಡು ಗುಂಡಿಗೆಯ ರಕ್ತ ಬಿಸಿ
ನನ್ನ ಮಗು ತರಳ ಇನ್ನೂ ಹಸಿ
ಕೊಡು ಅವನಿಗೂ ಸಾವು
ಕೂಡಿ ಬರುವೆವು ನಾವು
ನಿನ್ನ ಜೀವಾರಣ್ಯ ರೋದನದ
ಹಂಬಲ ಕಟ್ಟಿದ ಕೊಟ್ಟಿಗೆಯಲ್ಲಿ
ಉಳಿಯಗೊಡು ನನ್ನ
ಕರುವಿನ ಕಿರಿದೊಗಲು ನೆಕ್ಕಿ ಇಗೋ
ಉಣಿಸುತ್ತೇನೆ ಶ್ವಾಸ-ನಾನೇ ಸತ್ತರೂ
ನನ್ನನ್ನೇ ನಿನಗೇ ಇತ್ತರೂ

ಸಾವು ನಿನ್ನನ್ನು ಕರೆಯುವ ಹೊತ್ತು,
ಈ ರೀತಿ ನನ್ನನ್ನೂ ಹೊತ್ತು
ನಡೆ ಕೂಡಿ ಬದುಕೋಣ ಸಾವಿನಲ್ಲೂ
ಮತ್ತು ಹಾಗೆ ಇಲ್ಲೂ

ಹೆಬ್ಬುಲಿಯ ಬಾಯಲ್ಲಿ
ಬಾಯಾರಿ ನಡೆವಾಗ
ನಿನ್ನ ಕರುವಿನ ಕರುಳು ಕೀಳಬೇಡ
ಹೀಗೆ ಮುಂದೂ ಹಾದು
ಹಿಂದಿಂದಲೂ ಒದೆದು
ನನ್ನ ತಬ್ಬಲಿ ‘ಮಾಡಿ’ ಹೋಗಬೇಡ
*****

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...