Home / ಲೇಖನ / ಹಾಸ್ಯ / ಗಣೇಶ ಸಂಘ (ಸಂ.ರಂ)

ಗಣೇಶ ಸಂಘ (ಸಂ.ರಂ)

ಮಧ್ಯಾಹ್ನ ಎರಡು ಘಂಟೆಗೆ ಐದು ನಿಮಿಷ ಬಾಕಿ ಇತ್ತು. ನ್ಯೂಸ್ ಕೇಳೋಣವೆಂದು ಟಿ.ವಿ. ತಿರುಗಿಸಿದೆ. ಕಾಲಿಂಗ್ ಬೆಲ್ ಬಾರಿಸಿತು. ಇದೊಂದು `ನ್ಯೂಸೆನ್ಸ್’ ಆಯಿತಲ್ಲಾ ಎಂದುಕೊಂಡು ಬಾಗಿಲು ತೆರೆದೆ. ಐದಾರು ಹುಡುಗರು ನಾಯಿ ನಮ್ಮ ಮನೆಯಲ್ಲಿ ಇಲ್ಲವೆಂಬುದನ್ನು ಖಾತ್ರಿ ಮಾಡಿಕೊಂಡು, “ಅಂಕಲ್, ನಾವು ಪ್ರತಿವರ್ಷದಂತೆ ಈ ಸಲವೂ ಗಣೇಶನನ್ನು ನಮ್ಮ ಬಡಾವಣೆಯ ಪಾರ್‍ಕಿನಲ್ಲಿ ಕೂರಿಸುತ್ತಿದ್ದೇವೆ. ನೀವು ಏನಾದರೂ ಸಹಾಯ ಮಾಡಬೇಕು” ಒಬ್ಬ ವಿನಂತಿಸಿಕೊಂಡ. ಮತ್ತೊಬ್ಬ ಪ್ಯಾಂಪ್ಲೆಟ್ ಕೈಗೆ ತುರುಕಿದ. ನಾನು ಪಟ್ಟಿಯನ್ನು ಹಾಗೆಯೇ ಗಮನಿಸುತಾ “ಇದೇನ್ರಯ್ಯಾ, ಗಣೇಶ ಸಂಘ (ಸಂ.ರಂ.)’ ಎಂದು ಪ್ರಿಂಟ್ ಮಾಡಿಸಿದ್ದೀರಿ. ಇದು ಯಾವ ಸಂಘ? ಮಾಮೂಲು ಇಡುತ್ತಿರುವವರು ನೀವೇ ತಾನೇ? ಏಕೆಂದರೆ ಈ ಹಬ್ಬದ ಸೀಸನ್‌ನಲ್ಲಿ ಮೂರು ನಾಲ್ಕು ಗುಂಪುಗಳು ಬಂದು ನಮಗೆ ಚಂದಾ ಕೊಡಿ ನಮಗೆ ಚಂದಾ ಕೊಡಿ ಎಂದು ಪೀಡಿಸುತ್ತಾರೆ. ಯಾರು ಸಾಚಾ, ಯಾರೂ ನೀಚಾ ಒಂದು ತಿಳಿಯುವುದಿಲ್ಲ. ಅದೂ ಅಲ್ಲದೆ ಗಣೇಶ ಸಂಘ (ಸಂ.ರಂ) ಎಂಬುದನ್ನು ಈಗಲೇ ನಾನು ಕೇಳುತ್ತಿರುವುದು”, ಎಂದೆ. ಗುಂಪಿನ ನಾಯಕ ಮಾತಿಗೆ ಶುರುಮಾಡಿದ: “ನಿಜ, ಅಂಕಲ್ ನೀವು ಹೇಳೋದು, ಬೀದಿ ಬೀದಿಗೂ ಒಂದೊಂದು ಗಣೇಶ ಸಂಘ ಪ್ರತಿ ಸಲವೂ ಇರುತ್ತಿದ್ದವು. ಈ ಸಲ ಎಲ್ಲಾ ಸೇರಿ ಸಂಯುಕ್ತ ರಂಗವನ್ನು ರಚಿಸಿಕೊಂಡಿದ್ದೇವೆ”. “ಅಂದರೆ ಕೇಂದ್ರ ಸರ್‍ಕಾರದಲ್ಲಿರುವಂತೆ ಹತ್ತಾರು ರಾಜಕೀಯ ಪಕ್ಷಗಳು ಒಗ್ಗೂಡಿ ಸಂಯುಕ್ತರಂಗವನ್ನು ರಚಿಸಿರುವ ಮಾದರಿಯಲ್ಲಿ ಮಾಡಿಕೊಂಡಿದ್ದೀರಿ ಅಲ್ಲವೇ?” ನಾನು ಕೇಳಿದೆ. ಎಲ್ಲರೂ ಒಟ್ಟಾಗಿ “ನೀವು ಹೇಳಿದ್ದು, ಸೆಂಟ್ ಪರ್‌ಸೆಂಟ್ ಕರೆಕ್ಟ್ ಅಂಕಲ್. ಈ ನಮ್ಮ ಬಡಾಣೆಯಲ್ಲಿ ಎರಡೇ ಸಂಘಗಳು ಗಣೇಶನನ್ನು ಕೂರಿಸಿವುದು. ಬೇರೆಯ ಸಂಘ ವಿರೋಧ ಪಕ್ಷದವರದು. ಅಂದರೆ ನಮ್ಮ ಸಂಘಕ್ಕೆ ಸೇರದೇ ಇರುವವರು. ಅವರೇ ಪ್ರತ್ಯೇಕವಾಗಿ ಇಟ್ಟುಕೊಳ್ಳುತ್ತಾರೆ. ಅವರೂ ಚಂದಾಕ್ಕೆ ನಿಮ್ಮಲ್ಲಿಗೆ ಬಂದರೂ ಬರಬಹುದು. ಆದರೆ ನಮಗೇ ಕೊಡಿ ಪ್ಲೀಸ್” ಎಂದ ಅವರಲ್ಲಿ ಒಬ್ಬ. ಕೇಂದ್ರ ಪರಿಸ್ಥಿತಿಯಂತೆಯೇ ಈ ಸಂಘಗಳು ಎಂದು ಅರಿವಾಯಿತು.

“ಅದೆಲ್ಲಾ ಸರಿ ಎರಡು ಸಂಘಗಳು ಇರುವ ಒಂದೇ ಪಾರ್‍ಕಿನಲ್ಲಿ ಹೇಗೆ ಗಣೇಶನನ್ನು ಇಡುತ್ತೀರಾ?” “ಅದು ಬಹಳ ಸಿಂಪಲ್ ಅಂಕಲ್”, ಒಬ್ಬ ನುಡಿದ. “ಪಾರ್‍ಕಿನಲ್ಲಿ ಅವರು ಪೂರ್ವಕ್ಕೆ ಎದುರಾಗಿ ಗಣೇಶನನ್ನು ಕೂರಿಸಿದರೆ ನಾವು ಪಶ್ಚಿಮಕ್ಕೆ ಎದುರಾಗಿ ಕೂರಿಸುತ್ತೇವೆ” ಮುಂದುವರಿದು ಹೇಳಿದ. “ಹೌದಪ್ಪಾ, ಇಬ್ಬಿಬ್ಬರು ಮೈಕ್ ಸೆಟ್‌ಗಳನ್ನು ಹಾಕಿದರೆ ನಮ್ಮ ಗತಿ?” ನಾನು ಕೇಳಿದೆ. “ಹಾಗೇನಿಲ್ಲ; ಅವರ ಮೈಕೇ ನಮಗೂ ಅಡ್ಜಸ್ಟ್ ಆಗಿ ಬಿಡುತ್ತೆ. `ಟು ಇನ್ ಒನ್’ ಅಷ್ಟೆ. ಒಂದೇ ಪೆಂಡಾಲ್, ಲೈಟು ವ್ಯವಸ್ಥೆ ಎಲ್ಲಾ ಕಾಮನ್” ಎಂದೆಲ್ಲಾ ಹೇಳುತ್ತಿದ್ದ.

ಈ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ನನ್ನವಳು ದಿಢೀರ್‍ ಎಂದು ಬಂದವಳೇ ನನ್ನ ಕೈಲಿದ್ದ ಪಾಂಪ್ಲೆಟ್ ಕಿತ್ತುಕೊಂಡು ಓದಲು ಶುರು ಮಾಡಿದಳು. “ಗಣೇಶ ಸಂಘ (ಸಂ.ರಂ) – ಏನ್ರೀ ಇದು ಸಂ.ರಂ.? ನಿಮಗೆ ಮಾಡಲು ಇನ್ನೇನು ಬದುಕಿಲ್ಲವೆ? ನಿಮಗೆ ಚಂದಾ ಕೊಡುವುದಿಲ್ಲ ಹೊರಟುಬಿಡಿ” ಎಂದು ಪಕ್ಷದ ಹೈಕಮಾಂಡ್‌ನಂತೆ ಗುಡುಗಿದಳು. ಕೊನೆಗೆ `ಸಂ.ರಂ’ ಅಂದರೆ ಏನು ಎಂದು ವಿವರಿಸಿ ನನ್ನವಳಿಗೆ ನಾನೇ ಹೇಳಬೇಕಾಯಿತು.
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...