Home / ಲೇಖನ / ಇತರೆ / ಉಭಯ ಸಂಕಟ

ಉಭಯ ಸಂಕಟ

ಪ್ರಿಯ ಸಖಿ,

ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು
ಹೇಳದಿರೆ ತಾಳಲಾರನೋ ಕವಿಯು!

ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’

ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ಕಷ್ಟದ ಕೆಲಸ! ಆ ಕಷ್ಟ ಕವಿಯೊಬ್ಬಗೇ ಗೊತ್ತು! ಅನುಭವದ ಸವಿಯನ್ನು ಎಂತಾ ತಕ್ಕ ಪದಗಳಿಂದಲೂ ವರ್ಣಿಸಲು ಅಸಾಧ್ಯ. ಇದು ಭಾಷೆಯ ಸೋಲೋ? ಕವಿಯ ಸೋಲೋ? ಯಾವುದೇ ವ್ಯಕ್ತ ಭಾವಗಳೂ ಅವು ಅವ್ಯಕ್ತವಾಗಿದ್ದಾಗಲೆ ಸುಂದರವಾಗಿತ್ತು ಎನ್ನಿಸಿದರೆ ಅಂದೊಂದು ಸೋಲೇ ತಾನೇ? ಬಹುಶಃ ಕವಿಯೊಬ್ಬನ ಮಿತಿಯೂ ಇದೇ ಏನೋ?

ಆದರೆ ಹೇಳದಿದ್ದರೆ ತಾಳಲಾಗುವುದೂ ಇಲ್ಲವೆಂಬ ತುಡಿತ ಕವಿಗೆ ಮೂಡಿದಾಗ ಆತ ಏನು ಮಾಡಬೇಕು ? ಎದೆಯೊಳಗಿಂದಾ ಭಾವಗಳು ಒತ್ತಿ ಬಂದಾಗ ಆತ ಬರೆಯದೆಯೂ ಉಳಿಯಲಾರ! ಸಮರ್ಥ ಕವಿಯೊಬ್ಬ ತನ್ನ ಅಮೂರ್ತ ಭಾವಗಳಿಗೆ ತನ್ನ ಮಿತಿಯಲ್ಲೆ ಸಮರ್ಥ ಮೂರ್ತರೂಪ ಕೊಡಬಲ್ಲನಲ್ಲವೇ?

ಆದರೆ ಇಂಥಾ ಯಾವ ಒತ್ತಡಗಳೂ ಇಲ್ಲದೇ ಬಲವಂತವಾಗಿ ಹುಟ್ಟಿಸಿದ ಕವನ, ಕಷ್ಟಪಟ್ಟು ಪದ ಪದಗಳನ್ನು ಜೋಡಿಸಿ ಮಾಡಿದ ಜಾಳು ಪದ್ಯ. ಇತ್ತ ಭಾವಗಳ ಸಮರ್ಥ ಅಭಿವ್ಯಕ್ತಿಯೂ ಆಗುವುದಿಲ್ಲ. ಅತ್ತ ಸುಂದರ ಕವನ ಎನ್ನಿಸಿಕೊಳ್ಳುವುದೂ ಇಲ್ಲ.

ಹೇಳಿಬಿಟ್ಟಿರೆ ಅನುಭವದ ಸವಿ ಹಾಳಾಗಿ ಬಿಟ್ಟೀತೆಂಬ ಚಡಪಡಿಕೆ ಹೇಳದೇ ಉಳಿದರೆ ತಾಳಲಾಗದಂತಹ ಒತ್ತಡ, ಇಂತಹ ಉಭಯಸಂಕಟದ ಮೂಸೆಯಲ್ಲಿ ಪ್ರತಿಯೊಬ್ಬ ಕವಿಯೂ ಹದವಾಗಿ ಬೇಯಬೇಕು. ಆಗಲೇ ಉತ್ತಮ ಕವನ, ಸಮರ್ಥ ಅಭಿವ್ಯಕ್ತಿ ಹೊರಬೀಳಬಹುದಲ್ಲವೇ? ನೀನೇನನ್ನುತ್ತೀ ಸಖಿ?
*****

ಪುಸ್ತಕ: ಲಹರಿ

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...