ಗುರುವೆ ಬಿನ್ನಪವುದ್ಧರಿಸೋ

ಗುರುವೆ ಬಿನ್ನಪವುದ್ಧರಿಸೋ ಎನ್ನ
ಪರಮ ಸಖನ ಜ್ವರದುರಿ ಪರಿಹರಿಸೋ ||ಪ||

ಇರುತಿರೆ ಆತನ ಘಟಕೆ ರೋಗಬರುವುದಿನ್ನ್ಯಾಕೆ
ಮರಗುವ ಸಂಕಟವ್ಯಾಕೆ
ಮರೆಹೊಕ್ಕೆ ನಿನ್ನಯ ಪದಕೆ
ನಿಮ್ಮ ಸ್ಮರಿಸಲು ಈ ಕರ್ಮ ಸಂಕಟವ್ಯಾಕೆ ||೧||

ದೇಹವೆರಡಾತ್ಮ ಒಂದಾಗಿ
ನಾವು ತಾವು ಗುರುಸೇವೆಗೆ ಅನುಕೂಲವಾಗಿ
ಭವದ ಲಂಪಟ ಕರ್ಮನೀಗಿ
ನಿತ್ಯ ಶಿವಧ್ಯಾನದೊಳು ನಾವು ಇರುತಿರಲಾಗಿ ||೨||

ಬೇಡಿಕೊಂಬುವೆ ಭಕ್ತಿಗಾಗಿ
ದಯಮಾಡಿ ರಕ್ಷಿಸಬೇಕು ಕಲ್ಮಷ ನೀಗಿ
ನೋಡಿ ಕಡಿಯೋ ಭವಬಂಧಾ
ರೂಢಿಪ ಶಿಶುನಾಳಧೀಶನ ಕಂದಾ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬದುಕು ಎಂದರೆ ಇಷ್ಟ
Next post ನೋಡುನು ಬಾ ಗುರುನಾಥನ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys