ಮೋಡಿಕಾರ

ಮೋಡಿಕಾರ ಮುತ್ತಯ್ಯನ ಚೀಲದಿ
ಅಯ್ದೆಂದರೆ ಅಯ್ದೇ ಒಡವೆಗಳು
ಹುಲ್ಲು ಕಡ್ಡಿಗಳ ಕಟ್ಟೊಂದಿಹುದು
ಇನಿತರಿಂದಲೆ ಬೆರಗಿನಾಟವನು ಹೂಡಿಹನು
ವಿಧ ವಿಧದ ರೀತಿಯಲಿ ಅಯ್ದೊಡವೆಗಳ ಬೆರಸಿ
ಚಿನ್ನವನು ಮಾಡಿಹನು ಮಣ್ಣುಗಳ ಮಾಡಿಹನು
ರತ್ನ ವಜ್ರಾದಿಗಳ ತಾಮ್ರ ತವರಿದ್ದಲಿಯ
ಲವಣಾದಿ ಉಪ್ಪುಗಳ ಕಡಲುಕಣಿ ರಚಿಸಿಹನು
ಹುಲ್ಲುಗಳ ಬಗೆಯೇಸು, ಹಣ್ಣುಗಳ ವಿಧವೇಸು?
ಮಣ್ಣುಗಳ ಬಣ್ಣಗಳನೆಣಿಸಲಹುದೇ?
ಕಲ್ಲುಗಳ ಜಾತಿಯನು ಗುಣಿಸಲಹುದೇ?
ಮೂಳೆನರನೆತ್ತರದ ಚೀಲುಗಳ ರಚಿಸಿ
ತನ್ನ ಕಟ್ಟಿನ ಕಡ್ಡಿ ಅದರ ನೆತ್ತಿಗೆ ಚುಚ್ಚಿ
ಮಂತ್ರವನ್ನು ಸುರಿದರೆ ಆ ಗೊಂಬೆಗುಸಿರು
ನುಡಿಯುವದು-ನಲಿಯುವದು-ಕುಣಿಯುವುದು-ಕುಡಿಯುವದು
ಗೊಂಬೆಗಳ ಗುಣಗಣದ ಹೊಲಬನರಿವುದಸಾಧ್ಯ!
ಕೋಟಿರೂಪದ ಕೀಲು ಬೆರಗುಗೊಳಿಸುವ ಒಗಟು !
ನೆತ್ತಿಯಿಂದಾ ಕಡ್ಡಿ ಕಿತ್ತಿ ಕಡೆದೆಗೆದೊಗೆಯೆ
ನಿಂತ ನಿಂತಲ್ಲಿಯೇ ಆ ಗೊಂಬೆ ಬೀಳುವದು
ರಕ್ತಮಾಂಸಗಳೆಲ್ಲ ಅಯ್ದೊಡವೆಯಾಗುವವು
ಮಾಡುವನು ಆಡುವನು ತಾನೋಡಿ ನಲಿಯುವನು
ಆಟ ಸಾಕೆಂದೆನಿಸೆ ಮುರಿದು ಮೊಟ್ಟೆಯಕಟ್ಟಿ
ಮತ್ತೊಂದು ಹೂಡುವನನು

ಇವನೆಂಥ ಮೋಡಿಕಾರನಯ್ಯ!
ಮಂತ್ರಗಳ ಶಕ್ತಿಯೇನು, ತಂತ್ರಗಳಯುಕ್ತಿಯೇನು?
ಆಟ ಹೂಡಿದ ದಿವಸನೆಂದೆಂದೋ ಏನೋ !
ಮುಗಿವ ಮಿತಿ ತಿಳಿವುದೇನೋ?
*****

ಪುಸ್ತಕ: ಸಾಗರ ಸಿಂಪಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂಬಾರ್ದಲಾವಿಗೆ ಶಾಂಭವಿ
Next post ಕಾಗೆ ಸಂಗ ಮಾಡಿ ಗರುಡ ಪಕ್ಸಿ ಹಾಳಾತಂತೆ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…