ಭಾವ ಜೀವ

ಭೋರ್ಗರೆದು ಬರಸೆಳೆದು ಬಿರುಸಿನಲಿ ಚಿಮ್ಮೆಸೆದು
ಗಿರಗಿರನೆ ಸುರುಳಿಯಲಿ ಸೊರಗಿಸುವ ಸುಳಿಗಳಲಿ
ಸಿಕ್ಕಿದಂತೊಮ್ಮೊಮ್ಮೆ ಹೃದಯ ಬಲು ತಪಿಸುವುದು!
ನಭಕೇರಿ ಕೆಳಗುರುಳಿ ಭಾವಗಳ ಕಡಲಿನಲಿ
ಮಿಂದು ಮೈ ಬೆಂಡಾಗಿ ಬಸವಳಿದು ಬೀಳುವುದು!
ಮರು ನಿಮಿಷ ಮೆಲ್ಲೆಲರು ಮೃದು ಮಧುರ ನುಡಿಗಳಲಿ
ಮೆಲ್ಲಮೆಲ್ಲನೆ ಕರೆದು ಬೇರೊಂದ ತೋರುವುದು!
ಶಾಂತಿಯುಂಟೇನಿಲ್ಲಿ ಬರಿ ಭಾವ ಜೀವದಲಿ?

ಮೀನಮೇಷಗಳೆಣಿಸಿ, ಕಾಲಕಾರ್ಯವ ಗುಣಿಸಿ
ಕಾರ್ಖಾನೆಯಚ್ಚಂತೆ ಮಾಡಿ ಜೀವನವೆಲ್ಲ
ಕಾಣದಂತೆಯೆ ಮತ್ತೆ ಸಾಗಿಹೋಗುವರೆಲ್ಲ!
ಹೊಸತಿಲ್ಲ-ಹಳತಿಲ್ಲ-ಜೀವ ನಿತ್ಯದ ದಿನಸಿ!
ಇಂಥ ಬಾಳದು ಬಾಳೆ?-ಭಾವಜೀವವೆ ಮೇಲು!
ಕಹಿಸಿಹಿಗಳೆಲ್ಲವಿದೆ! ಅದಕಿಂತ ಬೇರೇನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)
Next post ಚಿಂತೆಗೆ ಕಣ್ಣತೆತ್ತವಳೆ!!

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys