ಹಾಕಿದ ಜನಿವಾರವಾ ಸದ್ಗುರುನಾಥಾ

ಹಾಕಿದ ಜನಿವಾರವಾ ಸದ್ಗುರುನಾಥಾ
ಹಾಕಿದ ಜನಿವಾರವಾ || ಪ ||

ಹಾಕಿದ ಜನಿವಾರ ನೂಕಿದ ಭವಭಾರ
ಬೇಕೆನುತಲಿ ಬ್ರಹ್ಮಜ್ಞಾನ ಉಚ್ಚರಿಸೆಂದು || ಅ. ಪ.||

ಸಂದ್ಯಾವಂದನೆ ಕಲಿಸಿ ಆ-
ನಂದದೀವ ಬಿಂದು ವರ್ಗದಿ ನಿಲಿಸಿ
ಹೊಂದಿಸಿ ಯಮುನಾತೀರದ ಮಧ್ಯದಲಿನಿಂದು
ಎಂದೆಂದಿಗೂ ಯಮದಂದುಗನವಳಿಯೆಂದು || ೧ ||

ಶಿಶುನಾಳಧೀಶನಲ್ಲೇ ಹುಣ್ಣಿವಿನೂಲು
ಹೊಸತಾಗಿ ಹೊಸಿಯುತಲಿ
ಮುಸುಕಿರ್ದವ್ಯಸನದ ಕಸರನು ಕಳಿಯೆಂದು
ಹಸನಾಗಿ ಮೂಲಮಂತ್ರದ ಮನಿಯೊಳುನಿಂದು || ೨ ||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೋಡುನು ಬಾ ಗುರುನಾಥನ
Next post ಗುರುಧ್ಯಾನವ ಮಾಡಿದಿ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…