Home / ಕವನ / ಕವಿತೆ / ಚಂದ್ರ ನೀನೊಬ್ಬನೆ

ಚಂದ್ರ ನೀನೊಬ್ಬನೆ

ಉರಿಯಿಲ್ಲ ಬಿಸಿಯಿಲ್ಲ
ಉರಿಬಿಸಿಲ ಬೇಗೆ ಬವಣೆಗಳಿಲ್ಲ
ಕಿಡಿಸಿಡಿವ ಕೆಂಡದುಂಡೆಯಂತುದಯಕ್ಕೆ
ಅಸ್ತಕ್ಕೆ ರಕ್ತದೋಕುಳಿಯಿಲ್ಲ
ಅವನಂತೆ ನಿಂತಲ್ಲೇ ನಿಂತು ಜಗವೆಲ್ಲ ತನ್ನನ್ನೇ ಸುತ್ತಿ
ಠಳಾಯಿಸಲೆಂಬ ಠೇಂಕಾರದವನಲ್ಲ.
ಏನಾದರೂ ಹೋದರು ಲೆಖ್ಖಿಸಿದೆ ಬೆಳಗು ಬೈಗಿನ ಕಾಲಚಕ್ರದ
ನಿಷ್ಠುರಕ್ಕೆ ನಿಷ್ಠನಾಗಿ ಸದಾ ಹೊತ್ತಿಕೊಂಡುರಿವ ಅಮಾನುಷನಲ್ಲ
ಅಹರ್ನಿಶಿ ನಮ್ಮ ಸುತ್ತ ಪ್ರೀತಿಯಲಿ ಸುತ್ತುತ್ತಲೇ ಇರುವ
ಪರಿವೀಕ್ಷಕ ನಿರಂತರ ಪರಿಕ್ರಮದ ಸಜೀವ ಮಾನುಷ್ಯಕಾಯ
ಈ ಇಳೆಯ ನಿಜಗೆಳೆಯ ಅಜಾತ ಶತ್ರು; ಲಕ್ಷ ನಕ್ಷತ್ರಗಳ
ರಾಜಾಧಿರಾಜ.

ಓ ಮನಃಕಾರಕನೇ
ಮನುಜನೊಳಗಿನ ಮನಸು
ನೂರಾರು ಕನಸು ಪ್ರೀತಿ ಪ್ರೇಮ

ನಿನ್ನದೇ ಸೋಮ, ನಮ್ಮೊಳಗಿನೆಲ್ಲ ಚಿತ್ರ ವಿಚಿತ್ರ ಬಯಕೆ ಕಾಮ.
ಧೀಶಕ್ತಿ, ಚಿತ್ರ ವೃತ್ತಿ, ಅನುರಕ್ತಿ ತೃಪ್ತಿ ಸಂತುಷ್ಟಿ
ಭಾವ ರಾಗ ಅನುರಾಗ ಭಾವಾವೇಶ
ಅನ್ಯೊನ್ಯದನುಬಂಧ, ಆತ್ಮೀಯದೊಲುಮೆ ಮೈತ್ರಿಬಾಂಧವ್ಯ

ಭೂಮಿಯೊಳಗಣ ನೀರು
ಸಸ್ಯ ಔಷಧ ವನಸ್ಪತಿ
ಜ್ಞಾನ, ವಿಜ್ಞಾನ ರಸ ರಸಾಯನ ಋತುಮಾನದಧಿಪತಿ

ಎಂದೆಂದೂ ಆರದಂತಮೃತದೆಣ್ಣೆಯನೆರೆದು
ಬೆಣ್ಣೆಮುದ್ದೆಯ ಒಳಗೆ ಯಾರೋ ಹಚ್ಚಿ ಬಚ್ಚಿಟ್ಟ
ಆಕಾಶದದ್ಭುತ ದೀಪ, ನೀನು ಓ ತಿಂಗಳು
ತಂಗಳು ಕೈತುತ್ತಿನನ್ನಕ್ಕು ಇನ್ನಿರದ ರುಚಿಕೊಡುವ
ನಿನ್ನ ಬೆಳ್ಳಿ ಬೆಳದಿಂಗಳು.

ಮಧು ನಿನ್ನದು; ಮುದ ನಿನ್ನದು
ನಿನ್ನದೇ ಅದು; ಗಂಡು ಹೆಣ್ಣುಗಳ ಹೃದಯ
ಕವಾಟಗಳ ಕದ ತೆಗೆವ ಮಧುಚಂದ್ರ.

ವೃದ್ಧಿ ಕ್ಷಯ, ಭರತ ಕುಸಿತ, ಏರಿಳಿತ
ಎಲ್ಲ ನಮ್ಮಂತೆಯೇ ಅನ್ನು;
ಎಂದಮಾತ್ರಕ್ಕೆ ಓ ಚಗಚ್ಚಕ್ಷುವೇ
ದೇವರಲ್ಲವೆನ್ನುವರುಂಟೇ ನಿನ್ನನ್ನು
ಇರಬಹುದು ಬಿಡು ಸೂರ್ಯ ಅವನೊಬ್ಬನೆ
ಆದರೆ ಓ ಇಂದುವೇ, ಪೃಥ್ವಿಗತಿಸನಿಹದ ಬಂಧುವೇ
ಇಂದು, ಮುಂದು, ಎಂದೆಂದೂ,
ನಮಗೆ ನಮ್ಮ ಪ್ರೀತಿಯ ಚಂದ್ರ ನೀನೊಬ್ಬನೆ
ಚಂದ್ರನೆಂಬುವನೊಬ್ಬನೆ
ಚಂದ್ರ ನೀನೊಬ್ಬನೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...