Home / ಕವನ / ಕವಿತೆ / ಚಂದ್ರ ನೀನೊಬ್ಬನೆ

ಚಂದ್ರ ನೀನೊಬ್ಬನೆ

ಉರಿಯಿಲ್ಲ ಬಿಸಿಯಿಲ್ಲ
ಉರಿಬಿಸಿಲ ಬೇಗೆ ಬವಣೆಗಳಿಲ್ಲ
ಕಿಡಿಸಿಡಿವ ಕೆಂಡದುಂಡೆಯಂತುದಯಕ್ಕೆ
ಅಸ್ತಕ್ಕೆ ರಕ್ತದೋಕುಳಿಯಿಲ್ಲ
ಅವನಂತೆ ನಿಂತಲ್ಲೇ ನಿಂತು ಜಗವೆಲ್ಲ ತನ್ನನ್ನೇ ಸುತ್ತಿ
ಠಳಾಯಿಸಲೆಂಬ ಠೇಂಕಾರದವನಲ್ಲ.
ಏನಾದರೂ ಹೋದರು ಲೆಖ್ಖಿಸಿದೆ ಬೆಳಗು ಬೈಗಿನ ಕಾಲಚಕ್ರದ
ನಿಷ್ಠುರಕ್ಕೆ ನಿಷ್ಠನಾಗಿ ಸದಾ ಹೊತ್ತಿಕೊಂಡುರಿವ ಅಮಾನುಷನಲ್ಲ
ಅಹರ್ನಿಶಿ ನಮ್ಮ ಸುತ್ತ ಪ್ರೀತಿಯಲಿ ಸುತ್ತುತ್ತಲೇ ಇರುವ
ಪರಿವೀಕ್ಷಕ ನಿರಂತರ ಪರಿಕ್ರಮದ ಸಜೀವ ಮಾನುಷ್ಯಕಾಯ
ಈ ಇಳೆಯ ನಿಜಗೆಳೆಯ ಅಜಾತ ಶತ್ರು; ಲಕ್ಷ ನಕ್ಷತ್ರಗಳ
ರಾಜಾಧಿರಾಜ.

ಓ ಮನಃಕಾರಕನೇ
ಮನುಜನೊಳಗಿನ ಮನಸು
ನೂರಾರು ಕನಸು ಪ್ರೀತಿ ಪ್ರೇಮ

ನಿನ್ನದೇ ಸೋಮ, ನಮ್ಮೊಳಗಿನೆಲ್ಲ ಚಿತ್ರ ವಿಚಿತ್ರ ಬಯಕೆ ಕಾಮ.
ಧೀಶಕ್ತಿ, ಚಿತ್ರ ವೃತ್ತಿ, ಅನುರಕ್ತಿ ತೃಪ್ತಿ ಸಂತುಷ್ಟಿ
ಭಾವ ರಾಗ ಅನುರಾಗ ಭಾವಾವೇಶ
ಅನ್ಯೊನ್ಯದನುಬಂಧ, ಆತ್ಮೀಯದೊಲುಮೆ ಮೈತ್ರಿಬಾಂಧವ್ಯ

ಭೂಮಿಯೊಳಗಣ ನೀರು
ಸಸ್ಯ ಔಷಧ ವನಸ್ಪತಿ
ಜ್ಞಾನ, ವಿಜ್ಞಾನ ರಸ ರಸಾಯನ ಋತುಮಾನದಧಿಪತಿ

ಎಂದೆಂದೂ ಆರದಂತಮೃತದೆಣ್ಣೆಯನೆರೆದು
ಬೆಣ್ಣೆಮುದ್ದೆಯ ಒಳಗೆ ಯಾರೋ ಹಚ್ಚಿ ಬಚ್ಚಿಟ್ಟ
ಆಕಾಶದದ್ಭುತ ದೀಪ, ನೀನು ಓ ತಿಂಗಳು
ತಂಗಳು ಕೈತುತ್ತಿನನ್ನಕ್ಕು ಇನ್ನಿರದ ರುಚಿಕೊಡುವ
ನಿನ್ನ ಬೆಳ್ಳಿ ಬೆಳದಿಂಗಳು.

ಮಧು ನಿನ್ನದು; ಮುದ ನಿನ್ನದು
ನಿನ್ನದೇ ಅದು; ಗಂಡು ಹೆಣ್ಣುಗಳ ಹೃದಯ
ಕವಾಟಗಳ ಕದ ತೆಗೆವ ಮಧುಚಂದ್ರ.

ವೃದ್ಧಿ ಕ್ಷಯ, ಭರತ ಕುಸಿತ, ಏರಿಳಿತ
ಎಲ್ಲ ನಮ್ಮಂತೆಯೇ ಅನ್ನು;
ಎಂದಮಾತ್ರಕ್ಕೆ ಓ ಚಗಚ್ಚಕ್ಷುವೇ
ದೇವರಲ್ಲವೆನ್ನುವರುಂಟೇ ನಿನ್ನನ್ನು
ಇರಬಹುದು ಬಿಡು ಸೂರ್ಯ ಅವನೊಬ್ಬನೆ
ಆದರೆ ಓ ಇಂದುವೇ, ಪೃಥ್ವಿಗತಿಸನಿಹದ ಬಂಧುವೇ
ಇಂದು, ಮುಂದು, ಎಂದೆಂದೂ,
ನಮಗೆ ನಮ್ಮ ಪ್ರೀತಿಯ ಚಂದ್ರ ನೀನೊಬ್ಬನೆ
ಚಂದ್ರನೆಂಬುವನೊಬ್ಬನೆ
ಚಂದ್ರ ನೀನೊಬ್ಬನೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...