ಚಂದ್ರ ನೀನೊಬ್ಬನೆ

ಉರಿಯಿಲ್ಲ ಬಿಸಿಯಿಲ್ಲ
ಉರಿಬಿಸಿಲ ಬೇಗೆ ಬವಣೆಗಳಿಲ್ಲ
ಕಿಡಿಸಿಡಿವ ಕೆಂಡದುಂಡೆಯಂತುದಯಕ್ಕೆ
ಅಸ್ತಕ್ಕೆ ರಕ್ತದೋಕುಳಿಯಿಲ್ಲ
ಅವನಂತೆ ನಿಂತಲ್ಲೇ ನಿಂತು ಜಗವೆಲ್ಲ ತನ್ನನ್ನೇ ಸುತ್ತಿ
ಠಳಾಯಿಸಲೆಂಬ ಠೇಂಕಾರದವನಲ್ಲ.
ಏನಾದರೂ ಹೋದರು ಲೆಖ್ಖಿಸಿದೆ ಬೆಳಗು ಬೈಗಿನ ಕಾಲಚಕ್ರದ
ನಿಷ್ಠುರಕ್ಕೆ ನಿಷ್ಠನಾಗಿ ಸದಾ ಹೊತ್ತಿಕೊಂಡುರಿವ ಅಮಾನುಷನಲ್ಲ
ಅಹರ್ನಿಶಿ ನಮ್ಮ ಸುತ್ತ ಪ್ರೀತಿಯಲಿ ಸುತ್ತುತ್ತಲೇ ಇರುವ
ಪರಿವೀಕ್ಷಕ ನಿರಂತರ ಪರಿಕ್ರಮದ ಸಜೀವ ಮಾನುಷ್ಯಕಾಯ
ಈ ಇಳೆಯ ನಿಜಗೆಳೆಯ ಅಜಾತ ಶತ್ರು; ಲಕ್ಷ ನಕ್ಷತ್ರಗಳ
ರಾಜಾಧಿರಾಜ.

ಓ ಮನಃಕಾರಕನೇ
ಮನುಜನೊಳಗಿನ ಮನಸು
ನೂರಾರು ಕನಸು ಪ್ರೀತಿ ಪ್ರೇಮ

ನಿನ್ನದೇ ಸೋಮ, ನಮ್ಮೊಳಗಿನೆಲ್ಲ ಚಿತ್ರ ವಿಚಿತ್ರ ಬಯಕೆ ಕಾಮ.
ಧೀಶಕ್ತಿ, ಚಿತ್ರ ವೃತ್ತಿ, ಅನುರಕ್ತಿ ತೃಪ್ತಿ ಸಂತುಷ್ಟಿ
ಭಾವ ರಾಗ ಅನುರಾಗ ಭಾವಾವೇಶ
ಅನ್ಯೊನ್ಯದನುಬಂಧ, ಆತ್ಮೀಯದೊಲುಮೆ ಮೈತ್ರಿಬಾಂಧವ್ಯ

ಭೂಮಿಯೊಳಗಣ ನೀರು
ಸಸ್ಯ ಔಷಧ ವನಸ್ಪತಿ
ಜ್ಞಾನ, ವಿಜ್ಞಾನ ರಸ ರಸಾಯನ ಋತುಮಾನದಧಿಪತಿ

ಎಂದೆಂದೂ ಆರದಂತಮೃತದೆಣ್ಣೆಯನೆರೆದು
ಬೆಣ್ಣೆಮುದ್ದೆಯ ಒಳಗೆ ಯಾರೋ ಹಚ್ಚಿ ಬಚ್ಚಿಟ್ಟ
ಆಕಾಶದದ್ಭುತ ದೀಪ, ನೀನು ಓ ತಿಂಗಳು
ತಂಗಳು ಕೈತುತ್ತಿನನ್ನಕ್ಕು ಇನ್ನಿರದ ರುಚಿಕೊಡುವ
ನಿನ್ನ ಬೆಳ್ಳಿ ಬೆಳದಿಂಗಳು.

ಮಧು ನಿನ್ನದು; ಮುದ ನಿನ್ನದು
ನಿನ್ನದೇ ಅದು; ಗಂಡು ಹೆಣ್ಣುಗಳ ಹೃದಯ
ಕವಾಟಗಳ ಕದ ತೆಗೆವ ಮಧುಚಂದ್ರ.

ವೃದ್ಧಿ ಕ್ಷಯ, ಭರತ ಕುಸಿತ, ಏರಿಳಿತ
ಎಲ್ಲ ನಮ್ಮಂತೆಯೇ ಅನ್ನು;
ಎಂದಮಾತ್ರಕ್ಕೆ ಓ ಚಗಚ್ಚಕ್ಷುವೇ
ದೇವರಲ್ಲವೆನ್ನುವರುಂಟೇ ನಿನ್ನನ್ನು
ಇರಬಹುದು ಬಿಡು ಸೂರ್ಯ ಅವನೊಬ್ಬನೆ
ಆದರೆ ಓ ಇಂದುವೇ, ಪೃಥ್ವಿಗತಿಸನಿಹದ ಬಂಧುವೇ
ಇಂದು, ಮುಂದು, ಎಂದೆಂದೂ,
ನಮಗೆ ನಮ್ಮ ಪ್ರೀತಿಯ ಚಂದ್ರ ನೀನೊಬ್ಬನೆ
ಚಂದ್ರನೆಂಬುವನೊಬ್ಬನೆ
ಚಂದ್ರ ನೀನೊಬ್ಬನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಮ್ಮನ ಮುನಿಸು
Next post ನಟ್ಟಿರುಳಿನಲ್ಲೊಂದು ಸಂವಾದ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys