ನನ್ನೊಳಗ ನಾ ತಿಳಕೊಂಡೆ

ನನ್ನೊಳಗ ನಾ ತಿಳಕೊಂಡೆ
ನನಗ ಬೇಕಾದ ಗಂಡನ್ನ ಮಾಡಿಕೊಂಡೆ   ||ಪ||

ಆಜ್ಞಾಪ್ರಕಾರ ನಡಕೊಂಡೆ
ನಾ ಎಲ್ಲಾರ ಹಂಗೊಂದು ಹರಕೊಂಡೆ      ||ಅ.ಪ.||

ಆರು ಮಕ್ಕಳನಡುವಿಗಟ್ಟಿ
ಮೂರು ಮಕ್ಕಳ ಬಿಟ್ಟಗೊಟ್ಟೆ
ಇವನ ಮೇಲೆ ಮನವಿಟ್ಟೆ
ಎನ್ನ ಬದುಕು ಬಾಳೆವೆಲ್ಲಾ ಬಿಟ್ಟಗೊಟ್ಟೆ   ||೧||

ಒಂದನಾಡಿದರೆ ಕಡಿಮೆಯೆಂದೆ
ಮತ್ತೆರಡನಾಡಿದರೆ ಹೆಚ್ಚೆಂದೆ
ಬೆಡಗ ಮಾತಿದು ನಿಜವೈತೆಂದೆ
ಇದು ಸುಜ್ಞಾನಿಗಳಿಗೇ ತಿಳಿತೆಂದೆ       ||೨||

ಶಿವಶಿವಾಯೆಂಬ ಹಾದಿ ಬೇಡಿಕೊಂಡೆ
ಗುರೂಪದೇಶವ ಪಡಕೊಂಡೆ
ಈ ಭವಕೆ ಬಾರದಂತೆ ಮಾಡಿಕೊಂಡೆ
ಗುರುಗೋವಿಂದನ ಪಾದಾ ಹಿಡಕೊಂಡೆ       ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುಧ್ಯಾನವ ಮಾಡಿದಿ
Next post ಗುರುನಾಥಾ ರಕ್ಷಿಸೋ

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys