ನನ್ನೊಳಗ ನಾ ತಿಳಕೊಂಡೆ

ನನ್ನೊಳಗ ನಾ ತಿಳಕೊಂಡೆ
ನನಗ ಬೇಕಾದ ಗಂಡನ್ನ ಮಾಡಿಕೊಂಡೆ   ||ಪ||

ಆಜ್ಞಾಪ್ರಕಾರ ನಡಕೊಂಡೆ
ನಾ ಎಲ್ಲಾರ ಹಂಗೊಂದು ಹರಕೊಂಡೆ      ||ಅ.ಪ.||

ಆರು ಮಕ್ಕಳನಡುವಿಗಟ್ಟಿ
ಮೂರು ಮಕ್ಕಳ ಬಿಟ್ಟಗೊಟ್ಟೆ
ಇವನ ಮೇಲೆ ಮನವಿಟ್ಟೆ
ಎನ್ನ ಬದುಕು ಬಾಳೆವೆಲ್ಲಾ ಬಿಟ್ಟಗೊಟ್ಟೆ   ||೧||

ಒಂದನಾಡಿದರೆ ಕಡಿಮೆಯೆಂದೆ
ಮತ್ತೆರಡನಾಡಿದರೆ ಹೆಚ್ಚೆಂದೆ
ಬೆಡಗ ಮಾತಿದು ನಿಜವೈತೆಂದೆ
ಇದು ಸುಜ್ಞಾನಿಗಳಿಗೇ ತಿಳಿತೆಂದೆ       ||೨||

ಶಿವಶಿವಾಯೆಂಬ ಹಾದಿ ಬೇಡಿಕೊಂಡೆ
ಗುರೂಪದೇಶವ ಪಡಕೊಂಡೆ
ಈ ಭವಕೆ ಬಾರದಂತೆ ಮಾಡಿಕೊಂಡೆ
ಗುರುಗೋವಿಂದನ ಪಾದಾ ಹಿಡಕೊಂಡೆ       ||೩||

****

Leave a Reply to Anonymous Cancel reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುಧ್ಯಾನವ ಮಾಡಿದಿ
Next post ಗುರುನಾಥಾ ರಕ್ಷಿಸೋ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

cheap jordans|wholesale air max|wholesale jordans|wholesale jewelry|wholesale jerseys