ಪುರುಷೋತ್ತಮ ಯಶವಂತ ಚಿತ್ತಾಲರು ಇನ್ನಿಲ್ಲ. ಇಂದಿನ ಪ್ರಜಾವಣಿಯ ಮುಖಪುಟದಲ್ಲಿ ಅವರ ನಿರ್ಗಮನದ ಸುದ್ದಿಯನ್ನು ಓದಿ ಮನಸ್ಸು ನೆನಪಿನ ಸುರುಳಿ ಬಿಚ್ಚಿ ೨೦೦೬ನೆ ಇಸವಿಯ ಡಿಸೆಂಬರ್ ಮಾಹೆಯ ಒಂದು ಇಳಿಸಂಜೆಯ ಮೆಲುಕು ಹಾಕಲಾರಂಭಿಸಿತು. ಅಂದು ನಾನು ಇಂದು ಇನ್ನಿಲ್ಲವಾಗಿರುವ ಚಿತ್ತಾಲರನ್ನು ಅವರ ಬಾಂದ್ರಾ ನಿವಾಸದಲ್ಲಿ ಭೇಟಿಯಾಗಿದ್ದೆ. ಅವರ ಪ್ರೀತಿಯ ಸಮುದ್ರ ನೋಟವನ್ನು ಸವಿಯುತ್ತ ಅವರೆದಿರಾಗಿ ಕುರ್ಚಿಯಲ್ಲಿ ಕುಳಿತು ಸಾಹಿತ್ಯ, ತಾಂತ್ರಜ್ಞಾನದ ಬಗ್ಗೆ ಅವರ ವಿಚಾರಗಳನ್ನು ಕೇಳಿದ್ದೆ. ಅಂದು ಅವರು ಹೇಳಿದ ಒಂದು ಮಾತು ನನ್ನನ್ನು ಬಹಳವಾಗಿ ಪ್ರಭಾವಿಸಿತು. ದಕ್ಷಿಣ ಅಮೇರಿಕದ ಲೇಖಕನೊಬ್ಬ ಬರೆಯುವಾಗ/ಟೈಪಿಸುವಾಗ ತಪ್ಪಾದಾಗ ಅದು ಬರಿ ಕೈತಪ್ಪಲ್ಲ, ಮನಸ್ಸಿನ ಚಿಂತನೆಯಲ್ಲಿನ ತಪ್ಪು, ಎಂದು ಪರಿಭಾವಿಸಿ ಆ ಪುಟವನ್ನೇ ಹರಿದುಹಾಕಿ ಪುನಃ ಬರವಣಿಗೆಯನ್ನು ಪ್ರಾರಂಭಿಸುತ್ತಿದ್ದನು, ಆ ಬದ್ಧತೆ ನಮ್ಮ ಎಲ್ಲ ಚಿಂತನೆ, ಕೃತಿಯಲ್ಲಿರಬೇಕು ಎಂದಿದ್ದರು. ಅವರು ಅಂದು ನನ್ನಂತಹ ಕಿರಿಯನೊಂದಿಗೂ ತೋರಿದ ಮುಕ್ತ ಮನಸ್ಕತೆ, ಸೌಜನ್ಯವನ್ನು ನಾನೆಂದಿಗೂ ಮರೆಯಲಾರೆ. ಆತ್ಮದ ಕಲ್ಪನೆಯ ಬಗ್ಗೆ ಸಂಶಯಗಳನ್ನು ಹೊಂದಿರುವ ನಾನು ಚಿತ್ತಾಲರಂತಹ ಚೇತನ ನಾಡಿನೆಲ್ಲರನ್ನು ನೂರ್ಕಾಲ ಉದ್ದೀಪಿಸುತ್ತಿರಲಿ ಎಂದು ಹಾರೈಸ ಬಯಸುತ್ತೇನೆ.
Related Post
ಸಣ್ಣ ಕತೆ
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಮನೆ “ಮಗಳು” ಗರ್ಭಿಣಿಯಾದಾಗ
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…