Home / ಲೇಖನ / ಇತರೆ / ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ ಯಶವಂತ ಚಿತ್ತಾಲರು ಇನ್ನಿಲ್ಲ. ಇಂದಿನ ಪ್ರಜಾವಣಿಯ ಮುಖಪುಟದಲ್ಲಿ ಅವರ ನಿರ್ಗಮನದ ಸುದ್ದಿಯನ್ನು ಓದಿ ಮನಸ್ಸು ನೆನಪಿನ ಸುರುಳಿ ಬಿಚ್ಚಿ ೨೦೦೬ನೆ ಇಸವಿಯ ಡಿಸೆಂಬರ್ ಮಾಹೆಯ ಒಂದು ಇಳಿಸಂಜೆಯ ಮೆಲುಕು ಹಾಕಲಾರಂಭಿಸಿತು. ಅಂದು ನಾನು ಇಂದು ಇನ್ನಿಲ್ಲವಾಗಿರುವ ಚಿತ್ತಾಲರನ್ನು ಅವರ ಬಾಂದ್ರಾ ನಿವಾಸದಲ್ಲಿ ಭೇಟಿಯಾಗಿದ್ದೆ. ಅವರ ಪ್ರೀತಿಯ ಸಮುದ್ರ ನೋಟವನ್ನು ಸವಿಯುತ್ತ ಅವರೆದಿರಾಗಿ ಕುರ್ಚಿಯಲ್ಲಿ ಕುಳಿತು ಸಾಹಿತ್ಯ, ತಾಂತ್ರಜ್ಞಾನದ ಬಗ್ಗೆ ಅವರ ವಿಚಾರಗಳನ್ನು ಕೇಳಿದ್ದೆ. ಅಂದು ಅವರು ಹೇಳಿದ ಒಂದು ಮಾತು ನನ್ನನ್ನು ಬಹಳವಾಗಿ ಪ್ರಭಾವಿಸಿತು. ದಕ್ಷಿಣ ಅಮೇರಿಕದ ಲೇಖಕನೊಬ್ಬ ಬರೆಯುವಾಗ/ಟೈಪಿಸುವಾಗ ತಪ್ಪಾದಾಗ ಅದು ಬರಿ ಕೈತಪ್ಪಲ್ಲ, ಮನಸ್ಸಿನ ಚಿಂತನೆಯಲ್ಲಿನ ತಪ್ಪು, ಎಂದು ಪರಿಭಾವಿಸಿ ಆ ಪುಟವನ್ನೇ ಹರಿದುಹಾಕಿ ಪುನಃ ಬರವಣಿಗೆಯನ್ನು ಪ್ರಾರಂಭಿಸುತ್ತಿದ್ದನು, ಆ ಬದ್ಧತೆ ನಮ್ಮ ಎಲ್ಲ ಚಿಂತನೆ, ಕೃತಿಯಲ್ಲಿರಬೇಕು ಎಂದಿದ್ದರು. ಅವರು ಅಂದು ನನ್ನಂತಹ ಕಿರಿಯನೊಂದಿಗೂ ತೋರಿದ ಮುಕ್ತ ಮನಸ್ಕತೆ, ಸೌಜನ್ಯವನ್ನು ನಾನೆಂದಿಗೂ ಮರೆಯಲಾರೆ. ಆತ್ಮದ ಕಲ್ಪನೆಯ ಬಗ್ಗೆ ಸಂಶಯಗಳನ್ನು ಹೊಂದಿರುವ ನಾನು ಚಿತ್ತಾಲರಂತಹ ಚೇತನ ನಾಡಿನೆಲ್ಲರನ್ನು ನೂರ್ಕಾಲ ಉದ್ದೀಪಿಸುತ್ತಿರಲಿ ಎಂದು ಹಾರೈಸ ಬಯಸುತ್ತೇನೆ.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...