Home / ಲೇಖನ / ಇತರೆ / ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ’ ಯಶವಂತ ಚಿತ್ತಾಲ

ಪುರುಷೋತ್ತಮ ಯಶವಂತ ಚಿತ್ತಾಲರು ಇನ್ನಿಲ್ಲ. ಇಂದಿನ ಪ್ರಜಾವಣಿಯ ಮುಖಪುಟದಲ್ಲಿ ಅವರ ನಿರ್ಗಮನದ ಸುದ್ದಿಯನ್ನು ಓದಿ ಮನಸ್ಸು ನೆನಪಿನ ಸುರುಳಿ ಬಿಚ್ಚಿ ೨೦೦೬ನೆ ಇಸವಿಯ ಡಿಸೆಂಬರ್ ಮಾಹೆಯ ಒಂದು ಇಳಿಸಂಜೆಯ ಮೆಲುಕು ಹಾಕಲಾರಂಭಿಸಿತು. ಅಂದು ನಾನು ಇಂದು ಇನ್ನಿಲ್ಲವಾಗಿರುವ ಚಿತ್ತಾಲರನ್ನು ಅವರ ಬಾಂದ್ರಾ ನಿವಾಸದಲ್ಲಿ ಭೇಟಿಯಾಗಿದ್ದೆ. ಅವರ ಪ್ರೀತಿಯ ಸಮುದ್ರ ನೋಟವನ್ನು ಸವಿಯುತ್ತ ಅವರೆದಿರಾಗಿ ಕುರ್ಚಿಯಲ್ಲಿ ಕುಳಿತು ಸಾಹಿತ್ಯ, ತಾಂತ್ರಜ್ಞಾನದ ಬಗ್ಗೆ ಅವರ ವಿಚಾರಗಳನ್ನು ಕೇಳಿದ್ದೆ. ಅಂದು ಅವರು ಹೇಳಿದ ಒಂದು ಮಾತು ನನ್ನನ್ನು ಬಹಳವಾಗಿ ಪ್ರಭಾವಿಸಿತು. ದಕ್ಷಿಣ ಅಮೇರಿಕದ ಲೇಖಕನೊಬ್ಬ ಬರೆಯುವಾಗ/ಟೈಪಿಸುವಾಗ ತಪ್ಪಾದಾಗ ಅದು ಬರಿ ಕೈತಪ್ಪಲ್ಲ, ಮನಸ್ಸಿನ ಚಿಂತನೆಯಲ್ಲಿನ ತಪ್ಪು, ಎಂದು ಪರಿಭಾವಿಸಿ ಆ ಪುಟವನ್ನೇ ಹರಿದುಹಾಕಿ ಪುನಃ ಬರವಣಿಗೆಯನ್ನು ಪ್ರಾರಂಭಿಸುತ್ತಿದ್ದನು, ಆ ಬದ್ಧತೆ ನಮ್ಮ ಎಲ್ಲ ಚಿಂತನೆ, ಕೃತಿಯಲ್ಲಿರಬೇಕು ಎಂದಿದ್ದರು. ಅವರು ಅಂದು ನನ್ನಂತಹ ಕಿರಿಯನೊಂದಿಗೂ ತೋರಿದ ಮುಕ್ತ ಮನಸ್ಕತೆ, ಸೌಜನ್ಯವನ್ನು ನಾನೆಂದಿಗೂ ಮರೆಯಲಾರೆ. ಆತ್ಮದ ಕಲ್ಪನೆಯ ಬಗ್ಗೆ ಸಂಶಯಗಳನ್ನು ಹೊಂದಿರುವ ನಾನು ಚಿತ್ತಾಲರಂತಹ ಚೇತನ ನಾಡಿನೆಲ್ಲರನ್ನು ನೂರ್ಕಾಲ ಉದ್ದೀಪಿಸುತ್ತಿರಲಿ ಎಂದು ಹಾರೈಸ ಬಯಸುತ್ತೇನೆ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...