Home / ಕವನ / ಕವಿತೆ / ಅರವಿಂದ

ಅರವಿಂದ

ಅರವಿಂದ ಅರವಿಂದ ನಂದನದ ಕಂದ
ಎಲ್ಲರೆದೆ ಬೆಳಗಿಸುವ ಹೃದಯಾರವಿಂದ

ಬಾಲ್ಯವನು ಕಳೆದದ್ದು ಬಿಳಿಯ ದೇಶದಲಿ
ಯೌವನವು ಬೆಳಗಿದ್ದು ಭಾರತಕೆ ಮರಳಿ

ಚಿಕ್ಕಂದಿನಿಂದಲೇ ಮೇಧಾವಿತನವು
ಅಚ್ಚರಿಯ ಮೂಡಿಸಿತು ಅಂತಃಚೇತನವು

ತಂದೆ ಬಿಳಿಯರ ರೀತಿ ತಾಯಿ ಭಾರತ ಗರತಿ
ಎರಡು ಸಂಸ್ಕೃತಿಗಳನು ಉಂಡಿತೀ ಜ್ಯೋತಿ

ಕೆಸರಿನಲ್ಲಿದ್ದರೂ ಕಮಲ ಕಮಲವೇ ಹೌದು
ಲಂಡನ್ನಿನಲ್ಲಿಯೇ ತಾಯ್ನಾಡ ಓದು

ಎನಿತೊ ಭಾಷಗಳನ್ನು ಕರಗತವ ಗೈದು
ಸಂಸ್ಕೃತದ ತಿರುಳೆಲ್ಲ ಮೈಗೊಂಡ ಸಾಥು

ಸ್ಥಾತಂತ್ರ್ಯ ಸಂಗ್ರಾಮ ಸೆರೆಮನೆಗೆ ಕಳಿಸಿತ್ತು
ಆತ್ಮಶಕ್ತಿಯ ಪಡೆಯೆ ಗರಡಿ ಮನೆಯಾಯ್ತು

ನಲವತ್ತು ವರ್ಷಗಳ ಏಕಾಂತ ತಪಿಸಿ
ಪೂರ್ಣಯೋಗವ ಕಂಡನಾ ಗುರುಮಹರ್ಷಿ

ದೇಶಸೇವೆಯ ದೀಕ್ಷೆ ತೊಟ್ಟು ಸ್ಥಾತಂತ್ರ್ಯಕ್ಕೆ
ದುಡಿಯುತ್ತ ದಿವ್ಯಾತ್ಮ ಒಳ್ಳೆ ಹಣ್ಣಾಯ್ತು

ಕೊನೆಗೆ ಪಾಂಡೀಚೆರಿಯು ಆತ್ಮಸಂಧಾನಕ್ಕೆ
ಎಲೆಮನೆಯ ಶಾಂತಿಯ ಪುಣ್ಯನೆಲೆಯಾಯ್ತು

ಅನ್ನಮಯ ಪ್ರಾಣಮಯ ಮನೋಮಯ ದಾಟಿ
ವಿಜ್ಜಾನ ಮಯದಿಂದ ಆನಂದ ಗುರಿಗೆ

ಮಾನವನು ದೇವಮಾನವನಾಗುವ ವಿಕಾಸ
ಪ್ರೇಮ ಶಕ್ತಿ ಜ್ಞಾನ ಬಾಳ ಮುಪ್ಪರಿಗೆ

ಎಂಬ ತತ್ವವ ಸಾರಿ ಆಧ್ಯಾತ್ಮ ಸಿರಿಯ
ಜಗಕೆಲ್ಲ ಬೀರಿದರು, ಭಾರತವ ಬೆಳಗಿ

ಆರೊವಿಲ್ಲಾಗಿರುವ ವಿಶ್ವಚೇತನ ಕೇಂದ್ರ
ಮಾನವರ ನಡೆಸುತಿದೆ ಹೊಸ ತೂರ್ಯ ಮೊಳಗಿ
***

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...