Home / ಕವನ / ಕವಿತೆ / ಅರವಿಂದ

ಅರವಿಂದ

ಅರವಿಂದ ಅರವಿಂದ ನಂದನದ ಕಂದ
ಎಲ್ಲರೆದೆ ಬೆಳಗಿಸುವ ಹೃದಯಾರವಿಂದ

ಬಾಲ್ಯವನು ಕಳೆದದ್ದು ಬಿಳಿಯ ದೇಶದಲಿ
ಯೌವನವು ಬೆಳಗಿದ್ದು ಭಾರತಕೆ ಮರಳಿ

ಚಿಕ್ಕಂದಿನಿಂದಲೇ ಮೇಧಾವಿತನವು
ಅಚ್ಚರಿಯ ಮೂಡಿಸಿತು ಅಂತಃಚೇತನವು

ತಂದೆ ಬಿಳಿಯರ ರೀತಿ ತಾಯಿ ಭಾರತ ಗರತಿ
ಎರಡು ಸಂಸ್ಕೃತಿಗಳನು ಉಂಡಿತೀ ಜ್ಯೋತಿ

ಕೆಸರಿನಲ್ಲಿದ್ದರೂ ಕಮಲ ಕಮಲವೇ ಹೌದು
ಲಂಡನ್ನಿನಲ್ಲಿಯೇ ತಾಯ್ನಾಡ ಓದು

ಎನಿತೊ ಭಾಷಗಳನ್ನು ಕರಗತವ ಗೈದು
ಸಂಸ್ಕೃತದ ತಿರುಳೆಲ್ಲ ಮೈಗೊಂಡ ಸಾಥು

ಸ್ಥಾತಂತ್ರ್ಯ ಸಂಗ್ರಾಮ ಸೆರೆಮನೆಗೆ ಕಳಿಸಿತ್ತು
ಆತ್ಮಶಕ್ತಿಯ ಪಡೆಯೆ ಗರಡಿ ಮನೆಯಾಯ್ತು

ನಲವತ್ತು ವರ್ಷಗಳ ಏಕಾಂತ ತಪಿಸಿ
ಪೂರ್ಣಯೋಗವ ಕಂಡನಾ ಗುರುಮಹರ್ಷಿ

ದೇಶಸೇವೆಯ ದೀಕ್ಷೆ ತೊಟ್ಟು ಸ್ಥಾತಂತ್ರ್ಯಕ್ಕೆ
ದುಡಿಯುತ್ತ ದಿವ್ಯಾತ್ಮ ಒಳ್ಳೆ ಹಣ್ಣಾಯ್ತು

ಕೊನೆಗೆ ಪಾಂಡೀಚೆರಿಯು ಆತ್ಮಸಂಧಾನಕ್ಕೆ
ಎಲೆಮನೆಯ ಶಾಂತಿಯ ಪುಣ್ಯನೆಲೆಯಾಯ್ತು

ಅನ್ನಮಯ ಪ್ರಾಣಮಯ ಮನೋಮಯ ದಾಟಿ
ವಿಜ್ಜಾನ ಮಯದಿಂದ ಆನಂದ ಗುರಿಗೆ

ಮಾನವನು ದೇವಮಾನವನಾಗುವ ವಿಕಾಸ
ಪ್ರೇಮ ಶಕ್ತಿ ಜ್ಞಾನ ಬಾಳ ಮುಪ್ಪರಿಗೆ

ಎಂಬ ತತ್ವವ ಸಾರಿ ಆಧ್ಯಾತ್ಮ ಸಿರಿಯ
ಜಗಕೆಲ್ಲ ಬೀರಿದರು, ಭಾರತವ ಬೆಳಗಿ

ಆರೊವಿಲ್ಲಾಗಿರುವ ವಿಶ್ವಚೇತನ ಕೇಂದ್ರ
ಮಾನವರ ನಡೆಸುತಿದೆ ಹೊಸ ತೂರ್ಯ ಮೊಳಗಿ
***

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...