Home / ಕವನ / ಕವಿತೆ / ನಿನ್ನ ಬರುವು

ನಿನ್ನ ಬರುವು

ನಿನ್ನ ಬರವನೇ ಕಾಯ್ದು ಇರುವೆ ಇರವೆಲ್ಲ ಕಾಯ್ವ ಚಿಂತೆ
ಬರದೆ ನೀನು ಬರಡಾದೆ ನಾನು ಬಾಗಿಲನು ತೆರೆದೆ ನಿಂತೆ

ಬಣ್ಣ ಬಣ್ಣ ವೇಷಗಳ ತೊಟ್ಟು ಬಯಲಾಟ ಬೊಂಬೆಯಂತೆ
ಬಣ್ಣಿಸಿದ್ದೆ ನಾ ಹಿಂದೆ ಅಂತೆಯೇ ಎಲ್ಲ ಅಂತೆ ಕಂತೆ

ಜಟೆಕಿರೀಟದಲಿ ನಾಲ್ಕು ಕೈಗಳಲಿ ವಿವಿಧ ಆಯುಧಗಳ
ರೇಷ್ಠ ಬಟ್ಟೆಗಳ ಚಿನ್ನದೊಡವೆಗಳ ಮುತ್ತು ರತ್ನ ಬಹಳ

ತೊಟ್ಟು ಬರುವಿ ನೀ ಬೆಳಕ ತರುವಿ ಝಗ್ಗೆಂದು ಕಣ್ಣ ಕುಕ್ಕಿ
ಎಂಬ ಭ್ರಮೆಯು ಈಗಿಲ್ಲ ತಂದೆ ತಿಳಿದಿಹುದು ತಿಳಿವು ಸಿಕ್ಕಿ

ಬಾ ಬಾರ ದೇವ ಬಂದೀಯ ನೀನು ಗುರುತಿಸಲು ಬಾರದಂತೆ
ಕಣ್ಣ ಮುಂದೆ ಹಗಲಿರುಳು ತಿರುಗಿದರು ನೋಟವರಿಯದಂತೆ

ಸುಕ್ಕುಗಲ್ಲ ಬರಿ ಎಲುಬು ಮೈಯಿ ಒಳಸೇರಿದಂಥ ದಿಟ್ಟಿ
ಭೂಮಿ ಭಾರ ಹೊತ್ತಂತೆ ಬೆನ್ನು ನಸುಬಾಗಿ ಕೋಲು ಕುಟ್ಟಿ

ಬರಿಮೈಯೊ ಏನೊ ಅರಮೈಯೊ ಏನೊ ಮಾನಕ್ಕೆ ಮರೆಯು ಬಟ್ಟೆ
ಬರಿಹೊಟ್ಟೆ ಏನೊ ಅರೆಹೊಟ್ಟೆ ಏನೊ ಬದುಕಿರಲು ನೆವವು ಹೊಟ್ಟೆ

ಮಾತನಾಡಿದರು ಮೂಕನಂತೆ ಮೌನದಲೆ ಎಲ್ಲ ಭಾಷ್ಯ
ಸುಮ್ಮನಿದ್ದರೂ ಮಗುವಿನಂತೆ ಲೀಲೆಯೊಳು ಕೃತಿಯು ವಶ್ಯ

ನೀನು ಬರಲು ಮೆರವಣಿಗೆಯಿಲ್ಲ ತುತ್ತೂರಿ ಕಹಳೆ ಇಲ್ಲ
ಬಾಲ ಹಿಂಬಾಲ ಬೊಗಳು ಹೊಗಳುಗಳು ಯಾರ ತರಲೆ ಇಲ್ಲ
ಗಾಳಿಯಷ್ಟು ಹಗುರಾಗಿ ಬರುವೆ ರವಿಕಿರಣದಂತೆ ನೇರ
ಬೆಳಕಿನಂತೆ ತಿಳಿಯಾಗಿ ಬರುವೆ ಜಲದಂತೆ ತೊಳೆಯ ಬಾರ

ಹಣ್ಣಿಗಿಂತ ಹಣ್ಣಾಗಿ ಬರುವೆ ಅನುಭಾವ ರಸವ ಹನಿಸಿ
ಹೂವಿನಂತೆ ಎದೆ ಅರಳುವಂತೆ ಪರಿಮಳದ ಪ್ರೇಮವೆನಿಸಿ

ತಿರೆಯ ಭ್ರಮಣ ಪರಿಯಂತೆ ಬಿಡುವಿರದ ಕಾಯಕರ್ಮನಿರತ
ಅಮರ ತತ್ವ ತೋರಿಸುವ ಮರಗಳೊಲು ಪ್ರಕೃತಿ ಧರ್ಮ ರಕ್ತ

ಋತು ಋತುವು ಹೊಸದು ಋತ ಸತ್ಯ ನಿತ್ಯ ನಿತ್ಯಾತ್ಮ ಲೀನ ನೀನು
ಇದ್ಧಿಲ್ಲದಂತೆ ಸದ್ದಿಲ್ಲದಂತೆ ಇರದಿರುವ ಯೋಗ ನೀನು
***

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...