ಗುರುನಾಥಾ ರಕ್ಷಿಸೋ ಹೇ
ಕರುಣಾಸಾಗರಾ ||ಪ||

ನರಜೀವಿಗೆ ಈ ದುರಿತ ಭವದ ಭಯ
ಪರಿಹರಿಸೆನುತಲಿ ಮರೆಹೊಕ್ಕೆನು ||೧||

ಪಾಪಾಂಬುಧಿಯನು ಪಾರುಮಾಡೆನುತಲಿ
ಶ್ರೀಪಾದಾಂಬುಜ ನಂಬಿಕೊಂಡೆ ಪರಮಾತ್ಮಾ ||೨||

ವಸುಧಿಯೊಳು ಶಿಶುನಾಳಧೀಶನ ಸೇವಕನ
ವ್ಯಸನಗಳಿದು ಸಂತೋಷದಿ ಸಲಹೋ ||೩||

****