ಚೈತನ್ಯ ಚಿಮ್ಮಿದಾಗ

ಎಲ್ಲಿಂದ ಬರ್ತೀಯೊ ಯಾವ ಗಳಿಗೆ ಬರ್ತೀಯೊ
ಯಾವ್ಮಾತ್ನಾಗೆ ಹೊಳಿತಿಯೊ ತಿಳಿಯದಲ್ಲಾ
ಹೊರಗೆಲ್ಲ ಹುಡುಕಿದ್ದೆ ಹುಡುಹುಡುಕಿ ದಣಿದಿದ್ದೆ
ಯಾವಾಗ್ಲೋ ಒಳಬಂದು ಕುಂತಿಯಲ್ಲಾ ||೧||

ಹೆಣದಾಗೆ ಚೈತನ್ಯ ಮೈತುಂಬಿ ನಿಂತಂಗೆ
ತುಂಬ್ಕೊಂಡೆ ಬಂದಿತ್ತು ಯಾವ್ದೋ ಶಕ್ತಿ
ಬರಡಾದ ಭೂಮಿಗೆ ಸ್ವರ್ಗಾನೆ ಇಳಿದಿತ್ತು
ಮಂತ್ರ ಹಾಕಿದಂತೆ ಯಾವ್ದೋ ಯುಕ್ತಿ ||೨ ||

ಮರುಭೂಮ್ಯಾಗೆ ಚಿಲುಮೆದ್ದು ಚಿಮ್ದಂಗೆ ಮ್ಯಾಲಕ್ಕೆ
ಎಲ್ಲಿತ್ತೊ ಒಳಸೆಲೆ ಕಾಣ್ಲೆ ಇಲ್ಲ
ಒಣಗಿದ್ದ ಮರದಾಗೆ ಒಮ್ಮಿಂದೊಮ್ಗೆ ಹಸಿರು
ಉಸಿರಾಡಿ ಉಡಿಯಾಗೆ ತುಂಬಿತಲ್ಲ ||೩||

ಆಲಸ್ಯ ಅಡಗ್ಹೋತು ಭಯವೆಲ್ಲ ಕಡೆಗಾಯ್ತು
ಕೋಪ ತಾಪವೆಲ್ಲ ತಣ್ಣಗಾಯ್ತು
ನಿದ್ದೆಲ್ಲ ಎಚ್ರಾತು ಎಚ್ರಾನೆ ಮುದ್ದಾಯ್ತು
ಕಲ್ಲಾಗೆ ಕಣ್ಣೀರು ಬಂದಂಗಾಯ್ತು ||೪||

ಒಬ್ಬನೆ ಇದ್ದವಗೆ ನೂರ್ ಜನ ಬಲಬಂತು
ನಾನೊಬ್ನೆ ಅಲ್ಲಂತ ಧೈರ್ಯ ಬಂತು
ರಾತ್ರೆಲ್ಲ ಬೆಳಕಾತು ಹಗಲೆಲ್ಲ ಬಯಲಾತು
ಹುಚ್ಚೆದ್ದು ಕುಣಿವಂಥ ಸ್ಫೂರ್ತಿ ಬಂತು ||೫||

ನೆಲದಲ್ಲಿ ನಿಂತವ್ಗೆ ಗಗನದ್ಹೂ ಸಿಕ್ಕಿತ್ತು
ಆಳಕ್ಕೆ ಬೇರುಗಳು ಹಬ್ಬಿದ್ದವು
ಒಳಗೆಲ್ಲಾ ಬೆಳೆದಂತೆ ಕೊಂಬೆಗಳು ಬೆಳೆದಿದ್ದು
ವಿಶ್ವಾನೆ ಹಬ್ಬಿದಂತೆ ಚಾಚಿದ್ದವು ||೬||

ಕಷ್ಟಗಳ ಗುಡ್ಡಗಳು ಬಿಳಿ ಮೋಡಗಳಾದವು
ಚಿಂತೆಲ್ಲ ಸಂತೆಲ್ಲ ಬಯಲಾಯಿತು
ದುಃಖಾದ ನೀರಲ್ಲು ಸುಖ ತುಂಬಿ ಕಣ್ಣೀರು
ಸಂಕಟದ ನೋವೆಲ್ಲ ಸಯವಾಯಿತು ||೭||

ನಂಗೊತ್ತು ಈ ಸೊಗಸು ಒಂದೇ ಕ್ಷಣಂಬೋದು
ಜೀವಾ ಹಿಡಿಯಾಕೊಂದೆ ಬೊಗಸೆ ಸಾಕು
ವಿಷಯ ಸಾಗರದಾಗ ಈಜಾಡ್ತಾ ಸಾಗಿದ್ರು
ಒಂದೆ ಹನಿ ಅಮೃತಾವು ಸಾಕೆ ಸಾಕು ||೮||

ಭೂಮಿ ಸೀಮೀ ಬಿಟ್ಟು ಬರಿ ಬಾನು ಬೇಕಿಲ್ಲ
ಬಾನ್ನ್ಯಾಗೆ ಸ್ವರ್ಗಾನೆ ಇರವೊಲ್ದ್ಯಾಕೆ
ಆಕಾಶ್ದಾಗ ಹಾರ್ವಂಥ ಹಕ್ಕೀನೆ ಆಗ್ಬೇಕೆ
ಮಣ್ಣಾಗಿನ ಮಣಿಯಾಗಿ ಇರಬಾರ್ದ್ಯೇಕೆ ||೯||
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾನವತಾವಾದಿ ಡಾ||ಅಂಬೇಡ್ಕರ್
Next post ಜನಸೇವೆ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys