Home / ಕವನ / ಕವಿತೆ / ಚೈತನ್ಯ ಚಿಮ್ಮಿದಾಗ

ಚೈತನ್ಯ ಚಿಮ್ಮಿದಾಗ

ಎಲ್ಲಿಂದ ಬರ್ತೀಯೊ ಯಾವ ಗಳಿಗೆ ಬರ್ತೀಯೊ
ಯಾವ್ಮಾತ್ನಾಗೆ ಹೊಳಿತಿಯೊ ತಿಳಿಯದಲ್ಲಾ
ಹೊರಗೆಲ್ಲ ಹುಡುಕಿದ್ದೆ ಹುಡುಹುಡುಕಿ ದಣಿದಿದ್ದೆ
ಯಾವಾಗ್ಲೋ ಒಳಬಂದು ಕುಂತಿಯಲ್ಲಾ ||೧||

ಹೆಣದಾಗೆ ಚೈತನ್ಯ ಮೈತುಂಬಿ ನಿಂತಂಗೆ
ತುಂಬ್ಕೊಂಡೆ ಬಂದಿತ್ತು ಯಾವ್ದೋ ಶಕ್ತಿ
ಬರಡಾದ ಭೂಮಿಗೆ ಸ್ವರ್ಗಾನೆ ಇಳಿದಿತ್ತು
ಮಂತ್ರ ಹಾಕಿದಂತೆ ಯಾವ್ದೋ ಯುಕ್ತಿ ||೨ ||

ಮರುಭೂಮ್ಯಾಗೆ ಚಿಲುಮೆದ್ದು ಚಿಮ್ದಂಗೆ ಮ್ಯಾಲಕ್ಕೆ
ಎಲ್ಲಿತ್ತೊ ಒಳಸೆಲೆ ಕಾಣ್ಲೆ ಇಲ್ಲ
ಒಣಗಿದ್ದ ಮರದಾಗೆ ಒಮ್ಮಿಂದೊಮ್ಗೆ ಹಸಿರು
ಉಸಿರಾಡಿ ಉಡಿಯಾಗೆ ತುಂಬಿತಲ್ಲ ||೩||

ಆಲಸ್ಯ ಅಡಗ್ಹೋತು ಭಯವೆಲ್ಲ ಕಡೆಗಾಯ್ತು
ಕೋಪ ತಾಪವೆಲ್ಲ ತಣ್ಣಗಾಯ್ತು
ನಿದ್ದೆಲ್ಲ ಎಚ್ರಾತು ಎಚ್ರಾನೆ ಮುದ್ದಾಯ್ತು
ಕಲ್ಲಾಗೆ ಕಣ್ಣೀರು ಬಂದಂಗಾಯ್ತು ||೪||

ಒಬ್ಬನೆ ಇದ್ದವಗೆ ನೂರ್ ಜನ ಬಲಬಂತು
ನಾನೊಬ್ನೆ ಅಲ್ಲಂತ ಧೈರ್ಯ ಬಂತು
ರಾತ್ರೆಲ್ಲ ಬೆಳಕಾತು ಹಗಲೆಲ್ಲ ಬಯಲಾತು
ಹುಚ್ಚೆದ್ದು ಕುಣಿವಂಥ ಸ್ಫೂರ್ತಿ ಬಂತು ||೫||

ನೆಲದಲ್ಲಿ ನಿಂತವ್ಗೆ ಗಗನದ್ಹೂ ಸಿಕ್ಕಿತ್ತು
ಆಳಕ್ಕೆ ಬೇರುಗಳು ಹಬ್ಬಿದ್ದವು
ಒಳಗೆಲ್ಲಾ ಬೆಳೆದಂತೆ ಕೊಂಬೆಗಳು ಬೆಳೆದಿದ್ದು
ವಿಶ್ವಾನೆ ಹಬ್ಬಿದಂತೆ ಚಾಚಿದ್ದವು ||೬||

ಕಷ್ಟಗಳ ಗುಡ್ಡಗಳು ಬಿಳಿ ಮೋಡಗಳಾದವು
ಚಿಂತೆಲ್ಲ ಸಂತೆಲ್ಲ ಬಯಲಾಯಿತು
ದುಃಖಾದ ನೀರಲ್ಲು ಸುಖ ತುಂಬಿ ಕಣ್ಣೀರು
ಸಂಕಟದ ನೋವೆಲ್ಲ ಸಯವಾಯಿತು ||೭||

ನಂಗೊತ್ತು ಈ ಸೊಗಸು ಒಂದೇ ಕ್ಷಣಂಬೋದು
ಜೀವಾ ಹಿಡಿಯಾಕೊಂದೆ ಬೊಗಸೆ ಸಾಕು
ವಿಷಯ ಸಾಗರದಾಗ ಈಜಾಡ್ತಾ ಸಾಗಿದ್ರು
ಒಂದೆ ಹನಿ ಅಮೃತಾವು ಸಾಕೆ ಸಾಕು ||೮||

ಭೂಮಿ ಸೀಮೀ ಬಿಟ್ಟು ಬರಿ ಬಾನು ಬೇಕಿಲ್ಲ
ಬಾನ್ನ್ಯಾಗೆ ಸ್ವರ್ಗಾನೆ ಇರವೊಲ್ದ್ಯಾಕೆ
ಆಕಾಶ್ದಾಗ ಹಾರ್ವಂಥ ಹಕ್ಕೀನೆ ಆಗ್ಬೇಕೆ
ಮಣ್ಣಾಗಿನ ಮಣಿಯಾಗಿ ಇರಬಾರ್ದ್ಯೇಕೆ ||೯||
***

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...