ಕಾಲ ಬಂದಿದೆ

ಕಾಲ ಬಂದಿದೇ ಅಣ್ಣ ನಮ್ಮ ಕಾಲ ಬಂದಿದೆ ಅಣ್ಣಾ                           ||ಪ||

ಸಾವಿರ ಸಾವಿರ ವರ್ಷದ ಕತ್ತಲೆ ಸಾವು ನೋವುಗಳ ಕಾಲವು ಹೋಗಿ
ಮೂಡಲ ಕೆಂಪಿನ ಕಂಪಿನ ಗಾಳಿಯ ಬೆಳಕಿನ ಕಾಲವು ಅಣ್ಣಾ           ||೧||

ಬೆಳಕನೆಲ್ಲ ಬಚ್ಚಿಟ್ಟುಕೊಂಡು ಬರಿ ಕೊಳಕ ಕುಡಿಸಿದವರ
ಥಳುಕಿನಿಂದ ಕಂಗಳನು ಕುಕ್ಕಿ ಕುರುಡು ಮಾಡಿದವರ                   ||೨||

ಬಯಲಿಗೆಳೆದು ಬೆತ್ತಲೆಯಗೊಳಿಸಿ ಚಮ್ಮಟಿಗೆಯಿಂದ ಥಳಿಸು
ನಯದ ವಂಚಕರ ಸವರಿ ವರೆಸಿ ಮನೆಯನ್ನು ಸ್ವಚ್ಛಗೊಳಿಸು         ||೩||

ಧರ್ಮ ಧರ್ಮವೆಂದಂಧಕಾರವನೆ ರಾಜ್ಯವಾಳಿಸಿದರು
ಕಾಲು ಕೈಗಳನು ಕಟ್ಟಿದ೦ಥ ಕಟ್ಟುಗಳ ಕಿತ್ತು ಎಸೆವ                     ||೪||

ಮೇಲು ಕೀಳುಗಳ ಮಡಿಯ ಮೈಲಿಯ ಕಟ್ಟುಪಾಡು ಕಸವ
ಕಾಲು ಕೈಗಳನು ಕಟ್ಟಿದಂಥ ಕಟ್ಟುಗಳ ಕಿತ್ತು ಎಸೆವ                      ||೫||

ಹೊಸ ಸೆಲೆಯು ಇಲ್ಲದಿರುವಂಥ ಹಳಸು ನೀರಿರುವ ಮೌಢ್ಯ ಹೊಂಡ
ನಿಶೆಯನ್ನು ಉಸಿರು ನೀರೆಂದು ತಿಳಿವ ಅಜ್ಞಾನವಾಯ್ತು ಹೆಂಡ      ||೬||

ನೀತಿ ಶಾಸ್ತ್ರಗಳು ಕೋತಿ ಶಾಸ್ತ್ರಗಳು ನಮಗೆ ಹೇಳಲಿಕ್ಕೆ
ಮಾತು ಬೋಧೆ ತತ್ವಾರ್ಥವೆಲ್ಲ ನಮ್ಮ ಹೂಳಲಿಕ್ಕೆ                      ||೭||

ಪರಮ ಧರ್ಮ ಅಹಿಂಸೆ ಎಂದು ಒತ್ತಿ ಒತ್ತಿ ಸಾರಿ
ಕೊರಡು ಬಡಿದು ಪೌರುಷಪ ಕೊಂದು ಮಾಡಿದರು ಸವಾರಿ          ||೮||

ದಾಸನಾಗು ನಿನ್ನೆಲ್ಲ ಒಪ್ಪಿಸುತ ಕಾಲ ಕೆಳಗೆ ಹೊರಳು
ಭಕ್ತಿ ಮುಕ್ತಿ ಇದೆ ಎಂದು ಕತ್ತಲಲಿ ಎಳೆದರಲ್ಲ ಉರುಲು                ||೯||

ಸ್ನಾನದಂತೆ ಕುಂಯ್ಗುಡುತ ಕಾಲುಗಳ ನೆಕ್ಕಿದ್ದಿನ್ನು ಸಾಕು
ಆನೆಯಂತೆ ಮದ್ದಾನೆಯಂತೆ ತುಳಿದವರ ತುಳಿದು ನೂಕು           ||೧೦||

ಅಂಜಿ ಅಂಜಿ ಕುರಿ ಮಂದೆಯಂತೆ ಇದ್ದವರು ಸಿಂಹದಂತೆ
ಜೂಲು ಕೇಸರವ ಕೆದರಿ ಗರ್ಜಿಸುವ ಸಿಡಿಲು ಮೊಳಗಿದಂತೆ         ||೧೧||

************************************************
೧೧-೬-೮೭

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಂಪು ಕಡಲಿನ ರಂಗಿನ ಲೋಕ
Next post ಶೀತಕ್ಕೆ ಔಷಧಿ ಇದೆಯೇ?

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…