Home / ಕವನ / ಕವಿತೆ / ಕಾಲ ಬಂದಿದೆ

ಕಾಲ ಬಂದಿದೆ

ಕಾಲ ಬಂದಿದೇ ಅಣ್ಣ ನಮ್ಮ ಕಾಲ ಬಂದಿದೆ ಅಣ್ಣಾ                           ||ಪ||

ಸಾವಿರ ಸಾವಿರ ವರ್ಷದ ಕತ್ತಲೆ ಸಾವು ನೋವುಗಳ ಕಾಲವು ಹೋಗಿ
ಮೂಡಲ ಕೆಂಪಿನ ಕಂಪಿನ ಗಾಳಿಯ ಬೆಳಕಿನ ಕಾಲವು ಅಣ್ಣಾ           ||೧||

ಬೆಳಕನೆಲ್ಲ ಬಚ್ಚಿಟ್ಟುಕೊಂಡು ಬರಿ ಕೊಳಕ ಕುಡಿಸಿದವರ
ಥಳುಕಿನಿಂದ ಕಂಗಳನು ಕುಕ್ಕಿ ಕುರುಡು ಮಾಡಿದವರ                   ||೨||

ಬಯಲಿಗೆಳೆದು ಬೆತ್ತಲೆಯಗೊಳಿಸಿ ಚಮ್ಮಟಿಗೆಯಿಂದ ಥಳಿಸು
ನಯದ ವಂಚಕರ ಸವರಿ ವರೆಸಿ ಮನೆಯನ್ನು ಸ್ವಚ್ಛಗೊಳಿಸು         ||೩||

ಧರ್ಮ ಧರ್ಮವೆಂದಂಧಕಾರವನೆ ರಾಜ್ಯವಾಳಿಸಿದರು
ಕಾಲು ಕೈಗಳನು ಕಟ್ಟಿದ೦ಥ ಕಟ್ಟುಗಳ ಕಿತ್ತು ಎಸೆವ                     ||೪||

ಮೇಲು ಕೀಳುಗಳ ಮಡಿಯ ಮೈಲಿಯ ಕಟ್ಟುಪಾಡು ಕಸವ
ಕಾಲು ಕೈಗಳನು ಕಟ್ಟಿದಂಥ ಕಟ್ಟುಗಳ ಕಿತ್ತು ಎಸೆವ                      ||೫||

ಹೊಸ ಸೆಲೆಯು ಇಲ್ಲದಿರುವಂಥ ಹಳಸು ನೀರಿರುವ ಮೌಢ್ಯ ಹೊಂಡ
ನಿಶೆಯನ್ನು ಉಸಿರು ನೀರೆಂದು ತಿಳಿವ ಅಜ್ಞಾನವಾಯ್ತು ಹೆಂಡ      ||೬||

ನೀತಿ ಶಾಸ್ತ್ರಗಳು ಕೋತಿ ಶಾಸ್ತ್ರಗಳು ನಮಗೆ ಹೇಳಲಿಕ್ಕೆ
ಮಾತು ಬೋಧೆ ತತ್ವಾರ್ಥವೆಲ್ಲ ನಮ್ಮ ಹೂಳಲಿಕ್ಕೆ                      ||೭||

ಪರಮ ಧರ್ಮ ಅಹಿಂಸೆ ಎಂದು ಒತ್ತಿ ಒತ್ತಿ ಸಾರಿ
ಕೊರಡು ಬಡಿದು ಪೌರುಷಪ ಕೊಂದು ಮಾಡಿದರು ಸವಾರಿ          ||೮||

ದಾಸನಾಗು ನಿನ್ನೆಲ್ಲ ಒಪ್ಪಿಸುತ ಕಾಲ ಕೆಳಗೆ ಹೊರಳು
ಭಕ್ತಿ ಮುಕ್ತಿ ಇದೆ ಎಂದು ಕತ್ತಲಲಿ ಎಳೆದರಲ್ಲ ಉರುಲು                ||೯||

ಸ್ನಾನದಂತೆ ಕುಂಯ್ಗುಡುತ ಕಾಲುಗಳ ನೆಕ್ಕಿದ್ದಿನ್ನು ಸಾಕು
ಆನೆಯಂತೆ ಮದ್ದಾನೆಯಂತೆ ತುಳಿದವರ ತುಳಿದು ನೂಕು           ||೧೦||

ಅಂಜಿ ಅಂಜಿ ಕುರಿ ಮಂದೆಯಂತೆ ಇದ್ದವರು ಸಿಂಹದಂತೆ
ಜೂಲು ಕೇಸರವ ಕೆದರಿ ಗರ್ಜಿಸುವ ಸಿಡಿಲು ಮೊಳಗಿದಂತೆ         ||೧೧||

************************************************
೧೧-೬-೮೭

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...