Home / ಕವನ / ಕವಿತೆ / ಕಾಲ ಬಂದಿದೆ

ಕಾಲ ಬಂದಿದೆ

ಕಾಲ ಬಂದಿದೇ ಅಣ್ಣ ನಮ್ಮ ಕಾಲ ಬಂದಿದೆ ಅಣ್ಣಾ                           ||ಪ||

ಸಾವಿರ ಸಾವಿರ ವರ್ಷದ ಕತ್ತಲೆ ಸಾವು ನೋವುಗಳ ಕಾಲವು ಹೋಗಿ
ಮೂಡಲ ಕೆಂಪಿನ ಕಂಪಿನ ಗಾಳಿಯ ಬೆಳಕಿನ ಕಾಲವು ಅಣ್ಣಾ           ||೧||

ಬೆಳಕನೆಲ್ಲ ಬಚ್ಚಿಟ್ಟುಕೊಂಡು ಬರಿ ಕೊಳಕ ಕುಡಿಸಿದವರ
ಥಳುಕಿನಿಂದ ಕಂಗಳನು ಕುಕ್ಕಿ ಕುರುಡು ಮಾಡಿದವರ                   ||೨||

ಬಯಲಿಗೆಳೆದು ಬೆತ್ತಲೆಯಗೊಳಿಸಿ ಚಮ್ಮಟಿಗೆಯಿಂದ ಥಳಿಸು
ನಯದ ವಂಚಕರ ಸವರಿ ವರೆಸಿ ಮನೆಯನ್ನು ಸ್ವಚ್ಛಗೊಳಿಸು         ||೩||

ಧರ್ಮ ಧರ್ಮವೆಂದಂಧಕಾರವನೆ ರಾಜ್ಯವಾಳಿಸಿದರು
ಕಾಲು ಕೈಗಳನು ಕಟ್ಟಿದ೦ಥ ಕಟ್ಟುಗಳ ಕಿತ್ತು ಎಸೆವ                     ||೪||

ಮೇಲು ಕೀಳುಗಳ ಮಡಿಯ ಮೈಲಿಯ ಕಟ್ಟುಪಾಡು ಕಸವ
ಕಾಲು ಕೈಗಳನು ಕಟ್ಟಿದಂಥ ಕಟ್ಟುಗಳ ಕಿತ್ತು ಎಸೆವ                      ||೫||

ಹೊಸ ಸೆಲೆಯು ಇಲ್ಲದಿರುವಂಥ ಹಳಸು ನೀರಿರುವ ಮೌಢ್ಯ ಹೊಂಡ
ನಿಶೆಯನ್ನು ಉಸಿರು ನೀರೆಂದು ತಿಳಿವ ಅಜ್ಞಾನವಾಯ್ತು ಹೆಂಡ      ||೬||

ನೀತಿ ಶಾಸ್ತ್ರಗಳು ಕೋತಿ ಶಾಸ್ತ್ರಗಳು ನಮಗೆ ಹೇಳಲಿಕ್ಕೆ
ಮಾತು ಬೋಧೆ ತತ್ವಾರ್ಥವೆಲ್ಲ ನಮ್ಮ ಹೂಳಲಿಕ್ಕೆ                      ||೭||

ಪರಮ ಧರ್ಮ ಅಹಿಂಸೆ ಎಂದು ಒತ್ತಿ ಒತ್ತಿ ಸಾರಿ
ಕೊರಡು ಬಡಿದು ಪೌರುಷಪ ಕೊಂದು ಮಾಡಿದರು ಸವಾರಿ          ||೮||

ದಾಸನಾಗು ನಿನ್ನೆಲ್ಲ ಒಪ್ಪಿಸುತ ಕಾಲ ಕೆಳಗೆ ಹೊರಳು
ಭಕ್ತಿ ಮುಕ್ತಿ ಇದೆ ಎಂದು ಕತ್ತಲಲಿ ಎಳೆದರಲ್ಲ ಉರುಲು                ||೯||

ಸ್ನಾನದಂತೆ ಕುಂಯ್ಗುಡುತ ಕಾಲುಗಳ ನೆಕ್ಕಿದ್ದಿನ್ನು ಸಾಕು
ಆನೆಯಂತೆ ಮದ್ದಾನೆಯಂತೆ ತುಳಿದವರ ತುಳಿದು ನೂಕು           ||೧೦||

ಅಂಜಿ ಅಂಜಿ ಕುರಿ ಮಂದೆಯಂತೆ ಇದ್ದವರು ಸಿಂಹದಂತೆ
ಜೂಲು ಕೇಸರವ ಕೆದರಿ ಗರ್ಜಿಸುವ ಸಿಡಿಲು ಮೊಳಗಿದಂತೆ         ||೧೧||

************************************************
೧೧-೬-೮೭

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...