Home / ಕವನ / ಕವಿತೆ / ಹೋರಾಟಕೆ

ಹೋರಾಟಕೆ

ಏಳಿ ಏಳಿ ಗೆಳೆಯರೇ ಏಳಿರಿ ಹೋರಾಟಕೆ
ತಾಳಿ ಬಾಳು ಎನುತ ಕೊಳೆತು ಹೋದೆವಲ್ಲ ಹಿಂದಕೆ ||ಪ||

ಗುಬ್ಬಿ ಪಾರಿವಾಳಗಳನು ಹದ್ದಿನಿಂದ ಉಳಿಸಲು
ಜಿಂಕೆ ಮೊಲಗಳನ್ನು ವ್ಯಾಘ್ರ ಬಾಯಿಯಿಂದ ಉಳಿಸಲು
ಮುರುಕು ಗುಡಿಸಲಲ್ಲಿ ದೀಪ ಮಿಣುಕು ಕುಟುಕು ಜೀವಕೆ
ಕಣ್ಣ ನೀರ ತೊಡೆದು ಎಣ್ಣೆ ಹೊಯ್ದು ಜ್ವಾಲೆ ಉರಿಸಲು ||೧||

ಹರಕು ತೇಪೆ ಬಟ್ಟೆಗಳಿಗೆ ರಕ್ಷೆ ಕವಚ ಕೊಡಲಿಕೆ
ಒಡಕು ಗಡಿಗೆ ಗಂಜಿಯಗಳ ಅಕ್ಷಯಾನ್ನ ಮಾಡಲಿಕೆ
ಎಲುಬು ಗೂಡು ಸುಕ್ಕು ಚರ್ಮಗಳಲಿ ಶಕ್ತಿ ತುಂಬಲು
ಮಾಂಸ ಭಕ್ಷಕಾಸುರರನು ಮಸಣ ಮನೆಗೆ ನೂಕಲು ||೨||

ಆಕಳಂತೆ ಮೇಕೆಯಂತೆ ಹುಲಿಯು ತೋಳ ಮೆರೆದಿವೆ
ಮೊಲಗಳನ್ನು ಕಚ್ಚಿತಿಂಬ ಹದ್ದುಗದ್ದುಗೇರಿವೆ
ಮತ ಧರ್ಮದ ಮತ್ತಿನಲ್ಲಿ ಯುಗಯುಗಗಳೆ ಕಳೆದಿವೆ
ಕೊಳೆತ ಬಾವಿ ಹಳಸುನಾತ ಕುಡಿಯುತ ಕಾಲೆಳೆದಿವೆ ||೩||

ನಾಮ ಪಟ್ಟಿದಾರ ಜುಟ್ಟುಗಳನು ಒಗೆದು ಬನ್ನಿರೊ
ಕಾವಿ ಬಟ್ಟೆ ಗೂಗೆಗಳನು ದುಡಿವ ಹೊಲಕೆ ತನ್ನಿರೊ
ಪ್ರಜರ ರಾಜರಾಗಿ ಮೆರೆವ ಹದ್ದು ತೋಳ ಹುಲಿಗಳ
ಬಣ್ಣ ಬಯಲಿಗೆಳೆದು ಹರಕು ಗುಡಿಸಲುಗಳಿಗೆಳೆಯಿರೊ ||೪||

ಗಿಳಿಪಾಠದ ಓದು ಓದಿ ಕೂಚು ಭಟ್ಟರಾದೆವೂ
ಕಾಗದ ಕೈಯಲ್ಲಿ ಹಿಡಿದು ಅಲೆವ ತಿರುಕರಾದೆವೂ
ಕುರ್ಚಿಕಾಲು ಹಣದ ಪಾದ ಹಿಡಿದು ಹೊಟ್ಟೆ ಹೊರೆದೆವೊ
ಗಟ್ಟಿಯಾಗಿ ನಗಲು ಬರದೆ ಬೆದರುಗೊಂಬೆಯಾದೆವೊ ||೫||

ಧಮನಿಗಳಲಿ ಉಚ್ಚೆ ನೀರು ಹರಿವರೆಲ್ಲ ಬಿದ್ದಿರಿ
ಕೆಂಪುರಕ್ತ ನಿಮಗಿದ್ದರೆ ಕ್ರಾಂತಿ ಮಾಡಲೆದ್ದಿರಿ
ಕುಷ್ಠರೋಗದಂಥ ಕೊಳೆತ ಪರಂಪರೆಯ ಒದೆಯಿರಿ
ಸಾಕು ಸಾಕು ಹಣದ ಬದುಕು ಹೋರಾಟಕೆ ಕುದಿಯಿರಿ ||೬||
**********************
೧೧.೧೧.೮೬

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...