Home / ಕವನ / ಕವಿತೆ / ಹೋರಾಟಕೆ

ಹೋರಾಟಕೆ

ಏಳಿ ಏಳಿ ಗೆಳೆಯರೇ ಏಳಿರಿ ಹೋರಾಟಕೆ
ತಾಳಿ ಬಾಳು ಎನುತ ಕೊಳೆತು ಹೋದೆವಲ್ಲ ಹಿಂದಕೆ ||ಪ||

ಗುಬ್ಬಿ ಪಾರಿವಾಳಗಳನು ಹದ್ದಿನಿಂದ ಉಳಿಸಲು
ಜಿಂಕೆ ಮೊಲಗಳನ್ನು ವ್ಯಾಘ್ರ ಬಾಯಿಯಿಂದ ಉಳಿಸಲು
ಮುರುಕು ಗುಡಿಸಲಲ್ಲಿ ದೀಪ ಮಿಣುಕು ಕುಟುಕು ಜೀವಕೆ
ಕಣ್ಣ ನೀರ ತೊಡೆದು ಎಣ್ಣೆ ಹೊಯ್ದು ಜ್ವಾಲೆ ಉರಿಸಲು ||೧||

ಹರಕು ತೇಪೆ ಬಟ್ಟೆಗಳಿಗೆ ರಕ್ಷೆ ಕವಚ ಕೊಡಲಿಕೆ
ಒಡಕು ಗಡಿಗೆ ಗಂಜಿಯಗಳ ಅಕ್ಷಯಾನ್ನ ಮಾಡಲಿಕೆ
ಎಲುಬು ಗೂಡು ಸುಕ್ಕು ಚರ್ಮಗಳಲಿ ಶಕ್ತಿ ತುಂಬಲು
ಮಾಂಸ ಭಕ್ಷಕಾಸುರರನು ಮಸಣ ಮನೆಗೆ ನೂಕಲು ||೨||

ಆಕಳಂತೆ ಮೇಕೆಯಂತೆ ಹುಲಿಯು ತೋಳ ಮೆರೆದಿವೆ
ಮೊಲಗಳನ್ನು ಕಚ್ಚಿತಿಂಬ ಹದ್ದುಗದ್ದುಗೇರಿವೆ
ಮತ ಧರ್ಮದ ಮತ್ತಿನಲ್ಲಿ ಯುಗಯುಗಗಳೆ ಕಳೆದಿವೆ
ಕೊಳೆತ ಬಾವಿ ಹಳಸುನಾತ ಕುಡಿಯುತ ಕಾಲೆಳೆದಿವೆ ||೩||

ನಾಮ ಪಟ್ಟಿದಾರ ಜುಟ್ಟುಗಳನು ಒಗೆದು ಬನ್ನಿರೊ
ಕಾವಿ ಬಟ್ಟೆ ಗೂಗೆಗಳನು ದುಡಿವ ಹೊಲಕೆ ತನ್ನಿರೊ
ಪ್ರಜರ ರಾಜರಾಗಿ ಮೆರೆವ ಹದ್ದು ತೋಳ ಹುಲಿಗಳ
ಬಣ್ಣ ಬಯಲಿಗೆಳೆದು ಹರಕು ಗುಡಿಸಲುಗಳಿಗೆಳೆಯಿರೊ ||೪||

ಗಿಳಿಪಾಠದ ಓದು ಓದಿ ಕೂಚು ಭಟ್ಟರಾದೆವೂ
ಕಾಗದ ಕೈಯಲ್ಲಿ ಹಿಡಿದು ಅಲೆವ ತಿರುಕರಾದೆವೂ
ಕುರ್ಚಿಕಾಲು ಹಣದ ಪಾದ ಹಿಡಿದು ಹೊಟ್ಟೆ ಹೊರೆದೆವೊ
ಗಟ್ಟಿಯಾಗಿ ನಗಲು ಬರದೆ ಬೆದರುಗೊಂಬೆಯಾದೆವೊ ||೫||

ಧಮನಿಗಳಲಿ ಉಚ್ಚೆ ನೀರು ಹರಿವರೆಲ್ಲ ಬಿದ್ದಿರಿ
ಕೆಂಪುರಕ್ತ ನಿಮಗಿದ್ದರೆ ಕ್ರಾಂತಿ ಮಾಡಲೆದ್ದಿರಿ
ಕುಷ್ಠರೋಗದಂಥ ಕೊಳೆತ ಪರಂಪರೆಯ ಒದೆಯಿರಿ
ಸಾಕು ಸಾಕು ಹಣದ ಬದುಕು ಹೋರಾಟಕೆ ಕುದಿಯಿರಿ ||೬||
**********************
೧೧.೧೧.೮೬

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...