ಹೋರಾಟಕೆ

ಏಳಿ ಏಳಿ ಗೆಳೆಯರೇ ಏಳಿರಿ ಹೋರಾಟಕೆ
ತಾಳಿ ಬಾಳು ಎನುತ ಕೊಳೆತು ಹೋದೆವಲ್ಲ ಹಿಂದಕೆ ||ಪ||

ಗುಬ್ಬಿ ಪಾರಿವಾಳಗಳನು ಹದ್ದಿನಿಂದ ಉಳಿಸಲು
ಜಿಂಕೆ ಮೊಲಗಳನ್ನು ವ್ಯಾಘ್ರ ಬಾಯಿಯಿಂದ ಉಳಿಸಲು
ಮುರುಕು ಗುಡಿಸಲಲ್ಲಿ ದೀಪ ಮಿಣುಕು ಕುಟುಕು ಜೀವಕೆ
ಕಣ್ಣ ನೀರ ತೊಡೆದು ಎಣ್ಣೆ ಹೊಯ್ದು ಜ್ವಾಲೆ ಉರಿಸಲು ||೧||

ಹರಕು ತೇಪೆ ಬಟ್ಟೆಗಳಿಗೆ ರಕ್ಷೆ ಕವಚ ಕೊಡಲಿಕೆ
ಒಡಕು ಗಡಿಗೆ ಗಂಜಿಯಗಳ ಅಕ್ಷಯಾನ್ನ ಮಾಡಲಿಕೆ
ಎಲುಬು ಗೂಡು ಸುಕ್ಕು ಚರ್ಮಗಳಲಿ ಶಕ್ತಿ ತುಂಬಲು
ಮಾಂಸ ಭಕ್ಷಕಾಸುರರನು ಮಸಣ ಮನೆಗೆ ನೂಕಲು ||೨||

ಆಕಳಂತೆ ಮೇಕೆಯಂತೆ ಹುಲಿಯು ತೋಳ ಮೆರೆದಿವೆ
ಮೊಲಗಳನ್ನು ಕಚ್ಚಿತಿಂಬ ಹದ್ದುಗದ್ದುಗೇರಿವೆ
ಮತ ಧರ್ಮದ ಮತ್ತಿನಲ್ಲಿ ಯುಗಯುಗಗಳೆ ಕಳೆದಿವೆ
ಕೊಳೆತ ಬಾವಿ ಹಳಸುನಾತ ಕುಡಿಯುತ ಕಾಲೆಳೆದಿವೆ ||೩||

ನಾಮ ಪಟ್ಟಿದಾರ ಜುಟ್ಟುಗಳನು ಒಗೆದು ಬನ್ನಿರೊ
ಕಾವಿ ಬಟ್ಟೆ ಗೂಗೆಗಳನು ದುಡಿವ ಹೊಲಕೆ ತನ್ನಿರೊ
ಪ್ರಜರ ರಾಜರಾಗಿ ಮೆರೆವ ಹದ್ದು ತೋಳ ಹುಲಿಗಳ
ಬಣ್ಣ ಬಯಲಿಗೆಳೆದು ಹರಕು ಗುಡಿಸಲುಗಳಿಗೆಳೆಯಿರೊ ||೪||

ಗಿಳಿಪಾಠದ ಓದು ಓದಿ ಕೂಚು ಭಟ್ಟರಾದೆವೂ
ಕಾಗದ ಕೈಯಲ್ಲಿ ಹಿಡಿದು ಅಲೆವ ತಿರುಕರಾದೆವೂ
ಕುರ್ಚಿಕಾಲು ಹಣದ ಪಾದ ಹಿಡಿದು ಹೊಟ್ಟೆ ಹೊರೆದೆವೊ
ಗಟ್ಟಿಯಾಗಿ ನಗಲು ಬರದೆ ಬೆದರುಗೊಂಬೆಯಾದೆವೊ ||೫||

ಧಮನಿಗಳಲಿ ಉಚ್ಚೆ ನೀರು ಹರಿವರೆಲ್ಲ ಬಿದ್ದಿರಿ
ಕೆಂಪುರಕ್ತ ನಿಮಗಿದ್ದರೆ ಕ್ರಾಂತಿ ಮಾಡಲೆದ್ದಿರಿ
ಕುಷ್ಠರೋಗದಂಥ ಕೊಳೆತ ಪರಂಪರೆಯ ಒದೆಯಿರಿ
ಸಾಕು ಸಾಕು ಹಣದ ಬದುಕು ಹೋರಾಟಕೆ ಕುದಿಯಿರಿ ||೬||
**********************
೧೧.೧೧.೮೬

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಬ್ಬಗಳು
Next post ಸದ್ದು : ಕಿವಿಗೆ ಗುದ್ದು

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…