ಹೋರಾಟಕೆ

ಏಳಿ ಏಳಿ ಗೆಳೆಯರೇ ಏಳಿರಿ ಹೋರಾಟಕೆ
ತಾಳಿ ಬಾಳು ಎನುತ ಕೊಳೆತು ಹೋದೆವಲ್ಲ ಹಿಂದಕೆ ||ಪ||

ಗುಬ್ಬಿ ಪಾರಿವಾಳಗಳನು ಹದ್ದಿನಿಂದ ಉಳಿಸಲು
ಜಿಂಕೆ ಮೊಲಗಳನ್ನು ವ್ಯಾಘ್ರ ಬಾಯಿಯಿಂದ ಉಳಿಸಲು
ಮುರುಕು ಗುಡಿಸಲಲ್ಲಿ ದೀಪ ಮಿಣುಕು ಕುಟುಕು ಜೀವಕೆ
ಕಣ್ಣ ನೀರ ತೊಡೆದು ಎಣ್ಣೆ ಹೊಯ್ದು ಜ್ವಾಲೆ ಉರಿಸಲು ||೧||

ಹರಕು ತೇಪೆ ಬಟ್ಟೆಗಳಿಗೆ ರಕ್ಷೆ ಕವಚ ಕೊಡಲಿಕೆ
ಒಡಕು ಗಡಿಗೆ ಗಂಜಿಯಗಳ ಅಕ್ಷಯಾನ್ನ ಮಾಡಲಿಕೆ
ಎಲುಬು ಗೂಡು ಸುಕ್ಕು ಚರ್ಮಗಳಲಿ ಶಕ್ತಿ ತುಂಬಲು
ಮಾಂಸ ಭಕ್ಷಕಾಸುರರನು ಮಸಣ ಮನೆಗೆ ನೂಕಲು ||೨||

ಆಕಳಂತೆ ಮೇಕೆಯಂತೆ ಹುಲಿಯು ತೋಳ ಮೆರೆದಿವೆ
ಮೊಲಗಳನ್ನು ಕಚ್ಚಿತಿಂಬ ಹದ್ದುಗದ್ದುಗೇರಿವೆ
ಮತ ಧರ್ಮದ ಮತ್ತಿನಲ್ಲಿ ಯುಗಯುಗಗಳೆ ಕಳೆದಿವೆ
ಕೊಳೆತ ಬಾವಿ ಹಳಸುನಾತ ಕುಡಿಯುತ ಕಾಲೆಳೆದಿವೆ ||೩||

ನಾಮ ಪಟ್ಟಿದಾರ ಜುಟ್ಟುಗಳನು ಒಗೆದು ಬನ್ನಿರೊ
ಕಾವಿ ಬಟ್ಟೆ ಗೂಗೆಗಳನು ದುಡಿವ ಹೊಲಕೆ ತನ್ನಿರೊ
ಪ್ರಜರ ರಾಜರಾಗಿ ಮೆರೆವ ಹದ್ದು ತೋಳ ಹುಲಿಗಳ
ಬಣ್ಣ ಬಯಲಿಗೆಳೆದು ಹರಕು ಗುಡಿಸಲುಗಳಿಗೆಳೆಯಿರೊ ||೪||

ಗಿಳಿಪಾಠದ ಓದು ಓದಿ ಕೂಚು ಭಟ್ಟರಾದೆವೂ
ಕಾಗದ ಕೈಯಲ್ಲಿ ಹಿಡಿದು ಅಲೆವ ತಿರುಕರಾದೆವೂ
ಕುರ್ಚಿಕಾಲು ಹಣದ ಪಾದ ಹಿಡಿದು ಹೊಟ್ಟೆ ಹೊರೆದೆವೊ
ಗಟ್ಟಿಯಾಗಿ ನಗಲು ಬರದೆ ಬೆದರುಗೊಂಬೆಯಾದೆವೊ ||೫||

ಧಮನಿಗಳಲಿ ಉಚ್ಚೆ ನೀರು ಹರಿವರೆಲ್ಲ ಬಿದ್ದಿರಿ
ಕೆಂಪುರಕ್ತ ನಿಮಗಿದ್ದರೆ ಕ್ರಾಂತಿ ಮಾಡಲೆದ್ದಿರಿ
ಕುಷ್ಠರೋಗದಂಥ ಕೊಳೆತ ಪರಂಪರೆಯ ಒದೆಯಿರಿ
ಸಾಕು ಸಾಕು ಹಣದ ಬದುಕು ಹೋರಾಟಕೆ ಕುದಿಯಿರಿ ||೬||
**********************
೧೧.೧೧.೮೬

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಬ್ಬಗಳು
Next post ಸದ್ದು : ಕಿವಿಗೆ ಗುದ್ದು

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys