Home / ಕವನ / ಕವಿತೆ / ನ್ಯಾಯ ಬೇಡುತಾವೆ

ನ್ಯಾಯ ಬೇಡುತಾವೆ

ನ್ಯಾಯ ಬೇಡುತಾವೆ ಬಂದು ನ್ಯಾಯ ಬೇಡುತಾವೆ
ನಾಮುಂದು ನೀಮುಂದು ಒಂದು ಬಿಟ್ಟಿನ್ನೊಂದು
ಎಂದು ಮುಂದುಗಡೆ ಬಂದು ನಿಂದು ತಾವ್                     ||ಪ||

ಒಳಗೆ ಕೊಳೆಯುತಾವೆ ಇಲ್ಲೇ ಕೆಳಗೆ ನರಳುತಾವೆ
ಹೊರಗೆ ಮೇಲೆ ಬಂದೆರಗಲೆಂದು ಕಳವಳದಿ ಕೂಗುತಾವೆ
ನನ್ನ ಪಾಡು ನೀ ಹಾಡು ನೋಡು ಎಂದೆನುತ ತುಡಿಯುತಾವೆ ||೧||

ಹಕ್ಕಿಯಾಗಿದೀವಿ ಪಂಜರದೊಳಗೆ ಸಿಕ್ಕಿದೀವಿ
ರೆಕ್ಕೆಗೆದರಿ ಆಕಾಶದಾಗೆ ನಾವ್
ನಕ್ಕು ಹಾರುತೀವಿ ಬಿಡು ಬಿಡು ನಕ್ಕು ಹಾರುತೀವಿ              ||೨||

ಚಿಕ್ಕಿಯಾಗಿದೀವಿ ಹಗಲಲಿ ಬಿಕ್ಕೆ ಬೇಡುತೀವಿ
ಸೊಕ್ಕಿ ಉರಿವ ಆ ಸೂರ್ಯಗಿಂತ ಬಲು
ಹಕ್ಕು ದೊಡ್ಡದೈತೆ ನಮ್ಮದು ಹಕ್ಕು ದೊಡ್ಡದೈತೆ                ||೩||

ಪ್ರಾಣಿ ಅಂತಿಯಲ್ಲೋ ನರ ನಿನ್ನ ತ್ರಾಣವೇನು ಹೆಚ್ಚೋ
ಜಾಣನಾಗಿ ಏಣಿಯಲಿ ಮ್ಯಾಲೆ ನೀ
ಕೋಣನಾಗಿ ಕುಂತಿ ಶಾಂತಿಯ ಕಾಣದಂತೆ ಸೋತಿ          ||೪||

ಮಣ್ಣು ಕಲ್ಲು ಎಂದು ತುಳಿಯುವಿ ಕಣ್ಣು ಮ್ಯಾಲೆ ಬಂದು
ಮಣ್ಣ ಜೊತೆಗೆ ಆ ಗಾಳಿ ನೀರುಗಳ
ಬಣ್ಣ ಸೇರಿದಾಗ ಮೆರೆಯುವಿ ಮಣ್ಣು ಸೇರೊವರೆಗೆ            ||೫||

ಹೆಣ್ಣು ಸಣ್ಣದೆಂದಿ ಗಂಡಿನ ಉನ್ನತಿಯನೆ ನಡೆಸಿ
ತಣ್ಣ ಸಾಗರದ ಸಣ್ಣ ಕೆಂಡ ಪುಂಡಾಟ ನಡೆಸಿದಂತೆ
ಕರಗುವಿ ಹೆಣ್ಣ ಕಣ್ಣಿನೊಳಗೆ                                     ||೬||

ಬಟ್ಟೆ ಭ್ರಮೆಯ ನೆಚ್ಚಿ ರೊಕ್ಕದ ಹೊಟ್ಟುರವುದೆ ಮುಚ್ಚಿ
ಹೊಟ್ಟೆ ರಟ್ಟೆಗಳ ಕಾಲ ಕೆಳಗೆ ತುಳಿದಿಟ್ಟು ಮೆರೆವ ಮಳ್ಳ ನೀನು
ಸುಟ್ಟು ಹೋಗುತೀಯ ಎಚ್ಚರ ಸುಟ್ಟು ಹೋಗುತೀಯ         ||೭||

ಕಂಡುದನ್ನೆ ನಿಜವು ಅಂತಾ ಉಂಡು ತಿಂದು ಕೊಬ್ಬಿ
ಭಂಡತನದಿ ಉದ್ದಂಡನಾಗಿ ಕಂಡಿರದ ಸತ್ಯ ಬಿಟ್ಟಿ ಬರಿಯ
ತುಂಡು ಬಟ್ಟೆ ಆದೀ ಬರಿಯ ತುಂಡು ಬಟ್ಟೆ ಆದಿ               ||೮||

******************************
೧೯೮೪

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...