ನ್ಯಾಯ ಬೇಡುತಾವೆ

ನ್ಯಾಯ ಬೇಡುತಾವೆ ಬಂದು ನ್ಯಾಯ ಬೇಡುತಾವೆ
ನಾಮುಂದು ನೀಮುಂದು ಒಂದು ಬಿಟ್ಟಿನ್ನೊಂದು
ಎಂದು ಮುಂದುಗಡೆ ಬಂದು ನಿಂದು ತಾವ್                     ||ಪ||

ಒಳಗೆ ಕೊಳೆಯುತಾವೆ ಇಲ್ಲೇ ಕೆಳಗೆ ನರಳುತಾವೆ
ಹೊರಗೆ ಮೇಲೆ ಬಂದೆರಗಲೆಂದು ಕಳವಳದಿ ಕೂಗುತಾವೆ
ನನ್ನ ಪಾಡು ನೀ ಹಾಡು ನೋಡು ಎಂದೆನುತ ತುಡಿಯುತಾವೆ ||೧||

ಹಕ್ಕಿಯಾಗಿದೀವಿ ಪಂಜರದೊಳಗೆ ಸಿಕ್ಕಿದೀವಿ
ರೆಕ್ಕೆಗೆದರಿ ಆಕಾಶದಾಗೆ ನಾವ್
ನಕ್ಕು ಹಾರುತೀವಿ ಬಿಡು ಬಿಡು ನಕ್ಕು ಹಾರುತೀವಿ              ||೨||

ಚಿಕ್ಕಿಯಾಗಿದೀವಿ ಹಗಲಲಿ ಬಿಕ್ಕೆ ಬೇಡುತೀವಿ
ಸೊಕ್ಕಿ ಉರಿವ ಆ ಸೂರ್ಯಗಿಂತ ಬಲು
ಹಕ್ಕು ದೊಡ್ಡದೈತೆ ನಮ್ಮದು ಹಕ್ಕು ದೊಡ್ಡದೈತೆ                ||೩||

ಪ್ರಾಣಿ ಅಂತಿಯಲ್ಲೋ ನರ ನಿನ್ನ ತ್ರಾಣವೇನು ಹೆಚ್ಚೋ
ಜಾಣನಾಗಿ ಏಣಿಯಲಿ ಮ್ಯಾಲೆ ನೀ
ಕೋಣನಾಗಿ ಕುಂತಿ ಶಾಂತಿಯ ಕಾಣದಂತೆ ಸೋತಿ          ||೪||

ಮಣ್ಣು ಕಲ್ಲು ಎಂದು ತುಳಿಯುವಿ ಕಣ್ಣು ಮ್ಯಾಲೆ ಬಂದು
ಮಣ್ಣ ಜೊತೆಗೆ ಆ ಗಾಳಿ ನೀರುಗಳ
ಬಣ್ಣ ಸೇರಿದಾಗ ಮೆರೆಯುವಿ ಮಣ್ಣು ಸೇರೊವರೆಗೆ            ||೫||

ಹೆಣ್ಣು ಸಣ್ಣದೆಂದಿ ಗಂಡಿನ ಉನ್ನತಿಯನೆ ನಡೆಸಿ
ತಣ್ಣ ಸಾಗರದ ಸಣ್ಣ ಕೆಂಡ ಪುಂಡಾಟ ನಡೆಸಿದಂತೆ
ಕರಗುವಿ ಹೆಣ್ಣ ಕಣ್ಣಿನೊಳಗೆ                                     ||೬||

ಬಟ್ಟೆ ಭ್ರಮೆಯ ನೆಚ್ಚಿ ರೊಕ್ಕದ ಹೊಟ್ಟುರವುದೆ ಮುಚ್ಚಿ
ಹೊಟ್ಟೆ ರಟ್ಟೆಗಳ ಕಾಲ ಕೆಳಗೆ ತುಳಿದಿಟ್ಟು ಮೆರೆವ ಮಳ್ಳ ನೀನು
ಸುಟ್ಟು ಹೋಗುತೀಯ ಎಚ್ಚರ ಸುಟ್ಟು ಹೋಗುತೀಯ         ||೭||

ಕಂಡುದನ್ನೆ ನಿಜವು ಅಂತಾ ಉಂಡು ತಿಂದು ಕೊಬ್ಬಿ
ಭಂಡತನದಿ ಉದ್ದಂಡನಾಗಿ ಕಂಡಿರದ ಸತ್ಯ ಬಿಟ್ಟಿ ಬರಿಯ
ತುಂಡು ಬಟ್ಟೆ ಆದೀ ಬರಿಯ ತುಂಡು ಬಟ್ಟೆ ಆದಿ               ||೮||

******************************
೧೯೮೪

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೌದಿ ಪೇಟೆಗಳು
Next post ಐಸ್ ಕ್ರೀಂ ತಂಪಿನ ಬಿಸಿ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

cheap jordans|wholesale air max|wholesale jordans|wholesale jewelry|wholesale jerseys