ನ್ಯಾಯ ಬೇಡುತಾವೆ

ನ್ಯಾಯ ಬೇಡುತಾವೆ ಬಂದು ನ್ಯಾಯ ಬೇಡುತಾವೆ
ನಾಮುಂದು ನೀಮುಂದು ಒಂದು ಬಿಟ್ಟಿನ್ನೊಂದು
ಎಂದು ಮುಂದುಗಡೆ ಬಂದು ನಿಂದು ತಾವ್                     ||ಪ||

ಒಳಗೆ ಕೊಳೆಯುತಾವೆ ಇಲ್ಲೇ ಕೆಳಗೆ ನರಳುತಾವೆ
ಹೊರಗೆ ಮೇಲೆ ಬಂದೆರಗಲೆಂದು ಕಳವಳದಿ ಕೂಗುತಾವೆ
ನನ್ನ ಪಾಡು ನೀ ಹಾಡು ನೋಡು ಎಂದೆನುತ ತುಡಿಯುತಾವೆ ||೧||

ಹಕ್ಕಿಯಾಗಿದೀವಿ ಪಂಜರದೊಳಗೆ ಸಿಕ್ಕಿದೀವಿ
ರೆಕ್ಕೆಗೆದರಿ ಆಕಾಶದಾಗೆ ನಾವ್
ನಕ್ಕು ಹಾರುತೀವಿ ಬಿಡು ಬಿಡು ನಕ್ಕು ಹಾರುತೀವಿ              ||೨||

ಚಿಕ್ಕಿಯಾಗಿದೀವಿ ಹಗಲಲಿ ಬಿಕ್ಕೆ ಬೇಡುತೀವಿ
ಸೊಕ್ಕಿ ಉರಿವ ಆ ಸೂರ್ಯಗಿಂತ ಬಲು
ಹಕ್ಕು ದೊಡ್ಡದೈತೆ ನಮ್ಮದು ಹಕ್ಕು ದೊಡ್ಡದೈತೆ                ||೩||

ಪ್ರಾಣಿ ಅಂತಿಯಲ್ಲೋ ನರ ನಿನ್ನ ತ್ರಾಣವೇನು ಹೆಚ್ಚೋ
ಜಾಣನಾಗಿ ಏಣಿಯಲಿ ಮ್ಯಾಲೆ ನೀ
ಕೋಣನಾಗಿ ಕುಂತಿ ಶಾಂತಿಯ ಕಾಣದಂತೆ ಸೋತಿ          ||೪||

ಮಣ್ಣು ಕಲ್ಲು ಎಂದು ತುಳಿಯುವಿ ಕಣ್ಣು ಮ್ಯಾಲೆ ಬಂದು
ಮಣ್ಣ ಜೊತೆಗೆ ಆ ಗಾಳಿ ನೀರುಗಳ
ಬಣ್ಣ ಸೇರಿದಾಗ ಮೆರೆಯುವಿ ಮಣ್ಣು ಸೇರೊವರೆಗೆ            ||೫||

ಹೆಣ್ಣು ಸಣ್ಣದೆಂದಿ ಗಂಡಿನ ಉನ್ನತಿಯನೆ ನಡೆಸಿ
ತಣ್ಣ ಸಾಗರದ ಸಣ್ಣ ಕೆಂಡ ಪುಂಡಾಟ ನಡೆಸಿದಂತೆ
ಕರಗುವಿ ಹೆಣ್ಣ ಕಣ್ಣಿನೊಳಗೆ                                     ||೬||

ಬಟ್ಟೆ ಭ್ರಮೆಯ ನೆಚ್ಚಿ ರೊಕ್ಕದ ಹೊಟ್ಟುರವುದೆ ಮುಚ್ಚಿ
ಹೊಟ್ಟೆ ರಟ್ಟೆಗಳ ಕಾಲ ಕೆಳಗೆ ತುಳಿದಿಟ್ಟು ಮೆರೆವ ಮಳ್ಳ ನೀನು
ಸುಟ್ಟು ಹೋಗುತೀಯ ಎಚ್ಚರ ಸುಟ್ಟು ಹೋಗುತೀಯ         ||೭||

ಕಂಡುದನ್ನೆ ನಿಜವು ಅಂತಾ ಉಂಡು ತಿಂದು ಕೊಬ್ಬಿ
ಭಂಡತನದಿ ಉದ್ದಂಡನಾಗಿ ಕಂಡಿರದ ಸತ್ಯ ಬಿಟ್ಟಿ ಬರಿಯ
ತುಂಡು ಬಟ್ಟೆ ಆದೀ ಬರಿಯ ತುಂಡು ಬಟ್ಟೆ ಆದಿ               ||೮||

******************************
೧೯೮೪

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೌದಿ ಪೇಟೆಗಳು
Next post ಐಸ್ ಕ್ರೀಂ ತಂಪಿನ ಬಿಸಿ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…