Home / ಕವನ / ಕವಿತೆ / ಶವ ಕ್ಷೇತ್ರಗಳು

ಶವ ಕ್ಷೇತ್ರಗಳು

ಜನರ ಲೌಕಿಕಾಶಯಗಳ ತುಳಿದ
ಕಲ್ಲು ಕಲ್ಲುಗಳ ತಳಪಾಯ
ಮೌಢ್ಯತೆಯ ಗೋಡೆ, ಜಡತೆಯ ಕಂಭಗಳು
ಶೋಷಣೆಯ ವೈಭವೀಕರಣದ ನವರಂಗಗಳು
ಅಂತರ ಪಿಶಾಚಿಯಲೆದಾಟದ ವಿಭ್ರಮೆಯ ಗರ್ಭಗುಡಿ
ಮತಾಧಿಕ್ಯತೆಯ ಬೆರಗಿನ ಗೋಪುರ
ಅಜ್ಞಾನಕ್ಕಿಟ್ಟ ಕಳಸುಗಳು
ಮೆರೆದಿವೆ ಭವ್ಯ ಭಾರತದ ಭೂತದ ಹಿರಿಮೆಗಳು
ಕೆಲವರ ಕೀರ್ತಿಯ ಮೆರೆಸಲು
ಅಸಮಾನತೆಯ ಪರಂಪರೆಯ ಆಚಂದ್ರಾರ್ಕವುಳಿಸಲು
ಕೊಳ್ಳೆ ಲೂಟಿಗಳಿಂದ ಜನರ ಸುಲಿಗೆಯಿಂದ
ದುಡಿವವರ ಬೆವರು ರಕ್ತಗಳಿಂದ
ಕಟ್ಟಿಸಿದ ಸುಂದರ ಸುಲಿಗೆಯ ಮಂದಿರಗಳು
ಬದುಕಿಗೆಂದೂ ಬೆಂಬಲವಾಗದ ಕಲ್ಲು ಚಪ್ಪಡಿ ಹಂದರಗಳು
ಇಲ್ಲಿ ಸಿಗಲು ಸಾಧ್ಯವೇ ಇಲ್ಲದ ಇಷ್ಟಾರ್ಥಗಳನ್ನು
ಅಲ್ಲಿ ಕಂಡುಕೊಂಡು ಮೋಕ್ಷ ಪಡೆಯಲು
ಸೊನ್ನೆಯೊಳಗೇ ಸುತ್ತುತ್ತಾ
ಸುತ್ತಿ ಬಂದು ಅಡ್ಡ ಬೀಳಲು
ಇಹದಿಂದ ಪಲಾಯನವನೇ ಜೀವನ ಸಿದ್ದಿಯೆಂದು ತಿಳಿದು
ಮತ್ಯ೯ವ ಜರೆದು ಕುಗ್ಗಿ ಕುಸಿದು
ನೆಲ ಹತ್ತಲು
ನೆಲ ಹತ್ತುವುದೇ ಪರಮಾನಂದವಾಗಲು
ಇಷ್ಟಿಷ್ಟೇ ಇಡೀ ದೇಶದ
ಸಾಮೂಹಿಕ ಹತ್ಯೆ ಸಾಗಿ ಬಂದಿದೆ ನೂರಾರರು ವರ್ಷ
ಆಳುವ ವರ್ಗದ ಕೃಪಾ ಛತ್ರದಡಿಯಲ್ಲಿ
ಕೊಳಕು ಮಂಡಲಗಳಂಥ ಈ ಕ್ಷೇತ್ರಗಳಲ್ಲಿ
ಭಕ್ತಿಯ ಹೆಸರಿನ ಭಯ ಮೌಢ್ಯದ ಬಂಡವಾಳದ ಮೇಲೆ
ನಡೆದು ಬಂದಿದೆ ಭರ್ಜರಿ ಲಾಭೋದ್ಯಮ
ಅಲ್ಲೇ ದೇವರಿದ್ದಾನೆ, ಅಲ್ಲೇ ಪುಣ್ಯ ದೊರೆಯುವುದು
ಎಂದು ನಂಬಿ ಬೋರಲು ಬಿದ್ದ ಮೂರ್ಖರ ಸಂತೆಗಳು
ಜನ ಮರುಳಿನ ಜಾತ್ರೆಗಳು
ಇವು ಶತಮಾನಗಳಿಂದಲೂ ದೇಶದ ದೇಹದ ಮೇಲೆ
ಗಟ್ಟಿಯಾಗಿ ನೆಲೆಯೂರಿರುವ ಕೀವು ಹುಣ್ಣುಗಳು
ಇವುಗಳೂಳಗೆ ಹರಿದಾಡುತಿವೆ ಕ್ಷುದ್ರ ಹುಳುಗಳು
ಮಂತಾಂಧತೆಯು ದದ್ದುಗಟ್ಟಿದ ಗಟ್ಟಿ ಗಣ್ಣುಗಳು

ಭಿಕ್ಷುಕರನ್ನು ಸಾಲು ಸಾಲು ಬೆಳೆಸುವ
ಪಿಳ್ಳೆ ಜುಟ್ಟುಗಳ ಬೊಜ್ಜುಗಳನ್ನುಬ್ಬಿಸುವ
ಸಾಂಕ್ರಮಿಕ ರೋಗಗಳ ಪುಕ್ಕಟ್ಟೆ ಮಾರುವ
ಜನರ ಜೇಬು ತಲೆಗಳ ನುಣ್ಣಗೆ ಬೋಳಿಸುವ
ಮಣ್ಣ ಮಕ್ಕಳ ದೂರವಿಟ್ಟು ಕಣ್ಣು ಕೆಕ್ಕರಿಸಿ
ಅಧರ್ಮಿಗಳೆಂದು ನೋಡುವ
ಇವು
ಪುಣ್ಯ ಕ್ಷೇತ್ರಗಳಲ್ಲ ಪಣ್ಯ ಕ್ಷೇತ್ರಗಳು
ಶಿವ ಕ್ಷೇತ್ರಗಳಲ್ಲ ಶವ ಕ್ಷೇತ್ರಗಳು
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...