Home / ಕವನ / ಕವಿತೆ / ಒಬ್ಬೊಬ್ಬ ಸೂರ್ಯನ ಕೊಡಿ

ಒಬ್ಬೊಬ್ಬ ಸೂರ್ಯನ ಕೊಡಿ

ಅಕ್ಕ ತಂಗಿಯರೇ!
ಪ್ರತಿಯೊಬ್ಬರೂ ಒಬ್ಬೊಬ್ಬ ಸೂರ್ಯನನ್ನು ದೇಶಕ್ಕೆ ಕೊಡಿ
ಕನಿಷ್ಟ ಪಕ್ಷ ನಕ್ಷತ್ರವನ್ನಾಗಲೀ ಕೊನೆಗೆ ಹಣತೆಯನ್ನಾಗಲೀ ಕೊಡಿ

ಎರವಲು ಬೆಳಕಿನಿಂದ ಮೆರೆವ
ಗ್ರಹ ಉಪಗ್ರಹಗಳನ್ನೋ
ಉಲ್ಕೆಗಳನ್ನೋ ಕೊಡಬೇಡಿ

ಒಂದರೊಳಗೊಂದು ಸಿಕ್ಕಾ ಸಿಕ್ಕಾಗಿ ಗೋಜಲುಗೊಂಡು
ಒಂದನೊಂದು ಕಿತ್ತು ತಿನ್ನುವ ಕೆಲವು
ಹೆಗ್ಗಣ ಹದ್ದು ನಾಯಿ ನರಿಗಳಿಗಂಜಿ
ಪುತು ಪುತು ತಿಪ್ಪೆ ಸೇರಿಕೊಳ್ಳುವ
ಅಲ್ಲೇ ಕೈಲಾಸ ವೈಕುಂಠಗಳ ತೇಲುಗಣ್ಣಿನಲ್ಲಿ ಕಾಣುವ
ಬರೀ ಹುರುಳಿಲ್ಲದ ನರಳಾಟದ ನರಸತ್ತ
ನರಹುಳಗಳನ್ನು ಮಾತ್ರ ಕೊಡಬೇಡಿ

ತಮ್ಮ ತಮ್ಮೊಳಗೆ ಹೆಣೆದುಕೊಂಡ
ಬೇಲಿಗಳಿಗಾಗಿ ಇರಿದಾಡಿ ಸಾಯುವುದರಲ್ಲೇ
ತಮ್ಮ ಪೌರುಷ ಶೌರ್ಯಗಳನ್ನೆಲ್ಲ ಕಳೆದುಕೊಳ್ಳುತ್ತಿರುವ
ಮೃಗಗಳನ್ನು ಮಾತ್ರ ಕೊಡಬೇಡಿ
ಹೆಗ್ಗಣ ಹದ್ದು ನಾಯಿ ನರಿಗಳೇನಾದರೂ
ನಿಮ್ಮೊಡಲಿಂದ ಹುಟ್ಟಿದರೆ
ಹೆತ್ತವರಿಗೆ ಹೆಗ್ಗಣ ಮುದ್ದೆಂದು ಮುದ್ದಾಡಬೇಡಿ
ಪಾಪ ಎಂದು ಕರುಣೆ ತೋರಿಸಬೇಡಿ
ಬಲಿತಂತೆಲ್ಲ ಅವು ನಿಮ್ಮನ್ನೇ |
ಅಥವಾ ನಿಮ್ಮಂಥ ಎಷ್ಟೋ ತಾಯಿ ಅಕ್ಕ ತಂಗಿಯರನ್ನೇ
ಹರಿದು ಕಿತ್ತು ತಿನ್ನುತ್ತ ಹೋದರೆ
ಅಂಥ ರಕ್ಕಸಗಳ್ಳಿಗಳನ್ನು ಹಡೆದ ನಿಮ್ಮನ್ನು
ದೇಶದ ಹೆತ್ತಮ್ಮ ಕ್ಷಮಿಸಳು
*****
೧೦.೬.೮೬

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...