Home / ಕವನ / ಕವಿತೆ / ಹಾಡಬೇಕು

ಹಾಡಬೇಕು

ಹಾಡು ಹಾಡಬೇಕು ಹೀಗೆ ಹಾಡು ಹಾಡಬೇಕು
ಮನಸಿನ ಮೂಸೆಯ ಭಾವದ ಕುದಿಗಳು
ಉಕ್ಕಿ ಹರಿಯಬೇಕು ಹಾಡಿನ ಪಾಡು ಪಡೆಯಬೇಕು      ||ಪ||

ಅಂತರಂಗದಲಿ ರಿಂಗಣಗುಣಿಯುತ
ಒಲವು ಉಲಿಯಬೇಕು ಸಹಜದ ಲಯವು ನಲಿಯಬೇಕು
ಒಳ ತಲ್ಲಣಗಳ ಪಲ್ಲವಿ ನರಳುತ
ಹೂವು ಅರಳಬೇಕು ಸುಗಂಧ ಸುತ್ತ ಹರಡಬೇಕು        ||೧||

ಎಲ್ಲ ದಿಕ್ಕುಗಳ ಎಲೆ ಕಡ್ಡಿಗಳನು
ತಂದು ಹೆಣೆಯಬೇಕು ಕನಸಿನ ಗೂಡು ಕಟ್ಟಬೇಕು
ಆಶೆಯ ಮರಿಗಳ ಹಸಿವು ನೋವುಗಳ
ಅಳುವು ನಿಲ್ಲಬೇಕು ನಗುವಿನ ಹಕ್ಕಿ ಹಾಡಬೇಕು          ||೨||

ಛಿದ್ರ ಭಿದ್ರ ತುಂಡುಗಳ ಜೋಡಿಸುತ
ಕನ್ನಡಿ ನಗಬೇಕು ತಿಳಿವಿನ ಬಿಂಬ ಕಾಣಬೇಕು
ಸಂದು ಗೊಂದುಗಳ ಕಂದಕ ಸೆರೆಗಳ
ತೂರಿ ಚಿಮ್ಮಬೇಕು ಹಾಡಿನ ಹೊಳೆಯು ಹೊಮ್ಮಬೇಕು  ||೩||

ಹರಿದು ಕೊಳೆಯುವೀ ಎಳೆಗಳ ಕಲೆಸುತ
ಬಟ್ಟೆ ನೇಯಬೇಕು ಬಾಳಿಗೆ ಬಟ್ಟೆದೋರಬೇಕು
ಗೊಬ್ಬರ ಕೊಳೆಗಳ ಈ ನೆಲದಿಂದಲೆ
ಗಿಡವು ಮೂಡಬೇಕು ಜೀವನ ರಸಫಲ ಬಿಡಬೇಕು       ||೪||

ದಿನ ದಿನ ಸಾಗುವ ಸಂಜೆ ಬೆಳಗುಗಳ
ಬಣ್ಣ ಬಳಸಬೇಕು ಸಂಧ್ಯಾ ರಾಗ ಹರಿಯಬೇಕು
ಮುದಿ ಸಂಜೆಗೆ ಹಸುಗಂದನ ಎಳೆ ನಗೆ
ಬೆಸುಗೆಯಾಗಬೇಕು ಚೇತನ ಸೆಲೆಯು ಸದಾ ಬೇಕು    ||೫||

ಹೇಡಿತನದ ಹುಳು ಹತ್ತಿದ ಜೀವಕೆ
ಜೀವ ಸತ್ವ ಬೇಕು ಹಾಡಿನ ಶಕ್ತಿ ತುಂಬಬೇಕು
ದೇಶದ ಹೃದಯವು ದುಡಿಯುವ ಕೈಗಳ
ನಾಡಿ ಹಿಡಿಯಬೇಕು, ಜನಮನದಾಳ ಮಿಡಿಯಬೇಕು   ||೬||

ಕಣ್ಣೀರಿನ ಧಾರೆಗಳನು ಒರೆಸುವ
ಕೈಯಿದಾಗಬೇಕು ದುಡಿಯುವ ಕೈಗೆ ಬಾಗಬೇಕು
ಒಣಗಿದ ಮರುಭೂಮಿಗಳೆದೆಯೊಳಗಡೆ
ಒಲವು ಹರಿಯಬೇಕು ಹಿಗ್ಗಿನ ತೋಟವರಳಬೇಕು         ||೭||

ದುಷ್ಟ ಶಕ್ತಿಗಳ ಮುಳ್ಳುಕಳ್ಳಿಗಳ
ಕೊಚ್ಚಿ ಹಾಕಬೇಕು ಹಾಡಿದು ಕತ್ತಿಯಾಗಬೇಕು
ಮೋಸ ವಂಚನೆಯ ಸ್ವಾರ್ಥ ಚಿಂತನೆಯ
ಕಸವ ಸುಡಲು ಬೇಕು ಬೆಂಕಿಯು ಹಾಡಿದಾಗಬೇಕು       ||೮||

ದುರ್ಬಲರಿಗೆ ಬಲವೀಯುತ ಕೊಬ್ಬಿದ
ಖೂಳರೆದೆಗೆ ಬಾಣಾ ಸಾರ್ಥಕ ಹಾಡಿನ ಪರಿ ಕಾಣಾ
ದಿನ ದಿನ ಹೊಸ ಹೊಸ ಚೆಲುವನು ತಾಳುತ
ಹಾಡು ಕುಣಿಯಬೇಕು ಕಾಲದ ಹೆಜ್ಜೆ ಮೇಳಬೇಕು
*****************

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...