Home / ಕವನ / ಕವಿತೆ / ಹಾಡಬೇಕು

ಹಾಡಬೇಕು

ಹಾಡು ಹಾಡಬೇಕು ಹೀಗೆ ಹಾಡು ಹಾಡಬೇಕು
ಮನಸಿನ ಮೂಸೆಯ ಭಾವದ ಕುದಿಗಳು
ಉಕ್ಕಿ ಹರಿಯಬೇಕು ಹಾಡಿನ ಪಾಡು ಪಡೆಯಬೇಕು      ||ಪ||

ಅಂತರಂಗದಲಿ ರಿಂಗಣಗುಣಿಯುತ
ಒಲವು ಉಲಿಯಬೇಕು ಸಹಜದ ಲಯವು ನಲಿಯಬೇಕು
ಒಳ ತಲ್ಲಣಗಳ ಪಲ್ಲವಿ ನರಳುತ
ಹೂವು ಅರಳಬೇಕು ಸುಗಂಧ ಸುತ್ತ ಹರಡಬೇಕು        ||೧||

ಎಲ್ಲ ದಿಕ್ಕುಗಳ ಎಲೆ ಕಡ್ಡಿಗಳನು
ತಂದು ಹೆಣೆಯಬೇಕು ಕನಸಿನ ಗೂಡು ಕಟ್ಟಬೇಕು
ಆಶೆಯ ಮರಿಗಳ ಹಸಿವು ನೋವುಗಳ
ಅಳುವು ನಿಲ್ಲಬೇಕು ನಗುವಿನ ಹಕ್ಕಿ ಹಾಡಬೇಕು          ||೨||

ಛಿದ್ರ ಭಿದ್ರ ತುಂಡುಗಳ ಜೋಡಿಸುತ
ಕನ್ನಡಿ ನಗಬೇಕು ತಿಳಿವಿನ ಬಿಂಬ ಕಾಣಬೇಕು
ಸಂದು ಗೊಂದುಗಳ ಕಂದಕ ಸೆರೆಗಳ
ತೂರಿ ಚಿಮ್ಮಬೇಕು ಹಾಡಿನ ಹೊಳೆಯು ಹೊಮ್ಮಬೇಕು  ||೩||

ಹರಿದು ಕೊಳೆಯುವೀ ಎಳೆಗಳ ಕಲೆಸುತ
ಬಟ್ಟೆ ನೇಯಬೇಕು ಬಾಳಿಗೆ ಬಟ್ಟೆದೋರಬೇಕು
ಗೊಬ್ಬರ ಕೊಳೆಗಳ ಈ ನೆಲದಿಂದಲೆ
ಗಿಡವು ಮೂಡಬೇಕು ಜೀವನ ರಸಫಲ ಬಿಡಬೇಕು       ||೪||

ದಿನ ದಿನ ಸಾಗುವ ಸಂಜೆ ಬೆಳಗುಗಳ
ಬಣ್ಣ ಬಳಸಬೇಕು ಸಂಧ್ಯಾ ರಾಗ ಹರಿಯಬೇಕು
ಮುದಿ ಸಂಜೆಗೆ ಹಸುಗಂದನ ಎಳೆ ನಗೆ
ಬೆಸುಗೆಯಾಗಬೇಕು ಚೇತನ ಸೆಲೆಯು ಸದಾ ಬೇಕು    ||೫||

ಹೇಡಿತನದ ಹುಳು ಹತ್ತಿದ ಜೀವಕೆ
ಜೀವ ಸತ್ವ ಬೇಕು ಹಾಡಿನ ಶಕ್ತಿ ತುಂಬಬೇಕು
ದೇಶದ ಹೃದಯವು ದುಡಿಯುವ ಕೈಗಳ
ನಾಡಿ ಹಿಡಿಯಬೇಕು, ಜನಮನದಾಳ ಮಿಡಿಯಬೇಕು   ||೬||

ಕಣ್ಣೀರಿನ ಧಾರೆಗಳನು ಒರೆಸುವ
ಕೈಯಿದಾಗಬೇಕು ದುಡಿಯುವ ಕೈಗೆ ಬಾಗಬೇಕು
ಒಣಗಿದ ಮರುಭೂಮಿಗಳೆದೆಯೊಳಗಡೆ
ಒಲವು ಹರಿಯಬೇಕು ಹಿಗ್ಗಿನ ತೋಟವರಳಬೇಕು         ||೭||

ದುಷ್ಟ ಶಕ್ತಿಗಳ ಮುಳ್ಳುಕಳ್ಳಿಗಳ
ಕೊಚ್ಚಿ ಹಾಕಬೇಕು ಹಾಡಿದು ಕತ್ತಿಯಾಗಬೇಕು
ಮೋಸ ವಂಚನೆಯ ಸ್ವಾರ್ಥ ಚಿಂತನೆಯ
ಕಸವ ಸುಡಲು ಬೇಕು ಬೆಂಕಿಯು ಹಾಡಿದಾಗಬೇಕು       ||೮||

ದುರ್ಬಲರಿಗೆ ಬಲವೀಯುತ ಕೊಬ್ಬಿದ
ಖೂಳರೆದೆಗೆ ಬಾಣಾ ಸಾರ್ಥಕ ಹಾಡಿನ ಪರಿ ಕಾಣಾ
ದಿನ ದಿನ ಹೊಸ ಹೊಸ ಚೆಲುವನು ತಾಳುತ
ಹಾಡು ಕುಣಿಯಬೇಕು ಕಾಲದ ಹೆಜ್ಜೆ ಮೇಳಬೇಕು
*****************

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...