Home / ಕವನ / ಕವಿತೆ / ಭಯ ಪುರಾಣ

ಭಯ ಪುರಾಣ

ಭಯಕೆ ನಾನಾ ರೂಪಗಳ ಕೊಟ್ಟು
ಬಂಗಾರ ಬೆರಳುಗಳಿಂದ ಅಲಂಕರಿಸಿ
ಕಳ್ಳರ ಭಯಕ್ಕೆ ಭದ್ರವಾಗಿ ಬೀಗ ಜಡಿದು ಕುಳ್ಳರಿಸಿ
ಮಾರಿ ಕಾಲರಾ ಭಯ, ರೋಗ ರುಜಿನ ಭಯ
ಸಾವು ವೈರಿಗಳ ಭಯ ಮೊದಲಾದ ಅನೇಕ ಭಯಗಳು
ದೂರಾಗಲೆಂದು ಭಯದಿಂದ ಅಡ್ಡ ದಿಡ್ಡ ಬೋರಲು
ಬಿದ್ದು ಬೇಡುತ್ತೇವೆ
ಕತ್ತಲೆಯು ಕತ್ತಲೆಯನ್ನು ಹಡೆದಂತೆ
ಭಯವು ಭಯವನ್ನೇ ಹಡೆಯುತ್ತ ಹಡೆಯುತ್ತ
ದೇಶದಲ್ಲೆಲ್ಲಾ ಭಯದ ಹುಳುಗಳೇ ತುಂಬಿವೆ
ಭಯದ ಕೊಳ ಪಾಚಿಗಟ್ಟಿದೆ
ಅದರಲ್ಲೇ ಶಾಶ್ವತ ಕೊಳೆಯಲು
ಭಯಾನಕ ಅದ್ಭುತ ಗೊಳ್ಳು ಪುರಾಣಗಳು ಸಂಕೀರ್ತನೆಗಳು
ಕೊಳೆ ಹೊಳೆ ನಿರಂತರ ಹರಿದಿವೆ
ಭಯದಿಂದ ಅದನ್ನು ಕೇಳುತ್ತ ಕೇಳುತ್ತ
ಪ್ರಶ್ನೆ ಮಾಡುವ ಶಕ್ತಿ ಸತ್ತು ಹೋಗಿದೆ
ಭಯದ ಪಾಳುಬಾವಿ ಎಂದೆಂದೂ ಬತ್ತದಂತೆ
ವಟಗುಟ್ಟುವ ಕಪ್ಪೆಗಳು ಹೊಟ್ಟೆ ಬೆಳೆಸಿಕೊಳ್ಳುತ್ತವೆ
ಶರಣಾಗಿ ತಲೆಬಾಗದವರನ್ನು
ರಕ್ತ ಕಾರಿಸಿ ಕೊಲ್ಲುತ್ತವೆ
ಅವರ ಮಕ್ಕಳ ಮರಿ ಕಬಳಿಸುತ್ತವೆ
ಎಂದೇನೇನೋ ನಿಗೂಢ ಭಯಗಳು
ರಾಜ ಮರ್ಯಾದೆಯ ಷೋಡಶೋಪಚಾರ ಶೃಂಗಾರಗಳೆಲ್ಲ
ದೇವರೆಂಬ ಗೊಂಬೆಗಳಿಗೆ ಬೇಕು
ಹೆಣ ಸಿಂಗಾರವಲ್ಲದೆ ಬೇರೆ ಫಲವಿಲ್ಲ
ಹೊಗಳಿಕೆಗೆ ಬಾಯಿ ಬಿಡುವ ಅವು
ತೆಗಳುವವರ ಶಿಕ್ಷಸದೆ ಬಿಡುವುದಿಲ್ಲ
ಅವನ್ನು ಒಲಿಸಿಕೊಳ್ಳಲು ಪ್ರಾರ್ಥನೆ ಕೀರ್ತನೆ
ವಾದ್ಯಗಳ ಮೊರೆತ ಬೆಂಕಿಹಾರಾಟ
ಮುಂತಾದ ಭಯಾನಕಗಳು
ಕುರಿ ಕೋಣಗಳ ಬಲಿಯನ್ನು
ಕೆಲವು ಕೇಳುತ್ತವೆ ಶಾಖಾಹಾರಿಗಳು
ಇನ್ನೂ ಕೆಲವು ಸಸ್ಥಾಹಾರಿಗಳು
ಅವಕ್ಕೆ ನವರಸ ಭಕ್ಷ್ಯ ಭೋಜ್ಯಗಳು ಬೇಕು
ದೈವ ಸಾಕ್ಷಾತ್ಕಾರಕ್ಕೆ ತಾವೇ ಪರವಾನಿಗೆದಾರರೆಂದು
ಮೆರೆಯುವ ಬಗೆಬಗೆಯ ಗುರು ಜಗದ್ಗುರುಗಳಿಗೆ
ಬುದ್ದೀ ಸ್ಥಾಮೀ ಎಂದು ಭಯದಿಂದ ಅಡ್ಡ ಬೀಳಬೇಕು
ರಾಜರ ಮೆರೆದಾಟ ವೈಭವಗಳೆಲ್ಲ ಈ ಸನ್ಯಾಸಿಗಳಿಗೂ ಬೇಕು
ಯಾವುದೋ ಪುಣ್ಯಾತ್ಮನ ಹೆಸರಿನಲ್ಲಿ ಮಠಗಳು
ಅವುಗಳಲ್ಲಿ ಗದ್ದುಗೆಯೇರಿದ ಹದ್ದುಗಳು ಮರ್ಕಟಗಳು
ಹೀಗೆ ಗುಡಿ ಮಠ ಜಾತ್ರೆ ಪೂಜೆ ಪುರಾಣಾದಿ
ಕೊಳಚೆಯ ಪ್ರವಾಹದಲ್ಲಿ ಮುಳಿಗೇಳುತ್ತ
ಮತ್ತೆ ಮತ್ತೆ ಮತ್ತೇರಿ ಮುಳುಗಿ
ಹೆಣಗಳಾಗಿ ಹೋಗಿರುವ ನನ್ನ ಜನರೇ
ಸಾಕಿನ್ನು ಭಯಾವಳಿ ಭವಾವಳಿಗಳ
ಬೆಂಡು ಬೆಂಡಾದ ತುಂಡು ತುಂಡಾದ ಬೀಳು ಬಾಳುಗಳು
ಭಯವನ್ನೇ ತುಂಬಿ ಬೆಳಸುತ್ತಾ ಬಂದ
ಪುರಾಣ ಕಂತೆಗಳ ಕಟ್ಟಿಟ್ಟು ಬಿಡಿ
ಇಲ್ಲಾ ತಿಪ್ಪೆಗೆಸೆದು ಬಿಡಿ
ಭಯದ ಕೋಟೆಗಳಂತಿರುವ ಗುಡಿ ಗುಂಡಾರಗಳ
ಮ್ಯೂಜಿಯಮ್ಮುಗಳಾಗಿ ಮಾಡಿ
ಗೊಂಬೆಗಳ ಮಕ್ಕಳಿಗೆ ಕಲೆಗಾಗಿ ತೋರಿಸಿ
ಜನರ ಭಯದ ಆಧಾರದ ಮೇಲೆ ಬೊಚ್ಚು ಬೆಳೆಸಿರುವ
ಮಠಾಧೀಶ್ವರ ಪೂಜಾರಿ ಬಾಬಾಗಳನ್ನಲ್ಲ
ಹೊಲ ಗದ್ದೆ ತೋಟ ಕಟ್ಟಡ ಕಾರ್ಖಾನೆಗಳಿಗೆ
ಎಳೆ ತಂದು ದುಡಿಯ ಹಚ್ಚಿರಿ ನಮ್ಮ ನಿಮ್ಮಂತೆ
ಜಾತ್ರೆ ಪರಿಷೆಗಳನ್ನೆಲ್ಲ ಜನ ಬಾಳಲು ನೆರವಾಗುವ
ಜಾನಪದ ಕುಶಲ ಕಲಾಮೇಳಗಳನ್ನಾಗಿ ಮಾಡಿ
ದೇವರು ಮೈಯಲ್ಲಿ ಬರುವ ಭಕ್ತಿಯಾವೇಶದ ಭ್ರಮಿಷ್ಟರನ್ನು
ಹುಚ್ಚಾಸ್ಪತ್ರೆಗಳಿಗೆ ಸೇರಿಸಿ ತಲೆ ಸರಿಮಾಡಿ
ಮಠಗಳನ್ನೆಲ್ಲಾ ಕಾಯಕ ಕೇಂದ್ರಗಳನ್ನಾಗಿ ಪರಿವರ್ತಿಸಿ
ಮಾನವ, ಮಾನವ ಚೈತನ್ಯ, ಮಾನವತೆಯನ್ನು ಬಿಟ್ಟು
ಬೇರೆ ದೇವರಿಲ್ಲ ಕಾಣಿರೋ .

ಭಯದ ಕೂಸುಗಳಾದ ಚಿಲ್ಲರೆ ದೇವರುಗಳನ್ನು
ಆ ಚಿಲ್ಲರೆಗಳ ಮೇಲೆ ಹೊಟ್ಟೆ ಹೊರೆಯುವ
ಪರೋಪಜೀವಿ ಬುರುಸುಗಳನ್ನು ಕೊಳೆಯನ್ನೆಲ್ಲ
ಸಾರಾಸಗಟಾಗಿ ತೊಳೆಯಿರಿ
ಭಯವಿಲ್ಲದ ಮಾನವರಾಗಿ ಬೆಳೆಯಿರಿ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...