ಎಲ್ಲಿದೆ ಧರ್ಮ

ಧರ್ಮಾ ಧರ್ಮಾ ಅಂತಾರೋ ಎಲ್ಲಿದೆ ಧರ್ಮಾ ತೋರಿಸರೋ ||ಪ||
ನಮ್ಮದು ಧರ್ಮಾ ನಿಮ್ಮದು ಧರ್ಮಾ ಅವರದು ಧರ್ಮಾ ಅಂತಾರೆ
ಜನಗಳ ನಡುವೆ ಗೋಡೆಗಳೆಬ್ಬಿಸಿ ಆಗಸ ಕಾಣದೆ ನಿಂತಾರೆ ||೧||

ಕೊಂಬಿ ರೆಂಬಿಗಳ ಜೋತು ಬಿದ್ದು ಅವುಗಳೆ ಮರ ಮರ ಅಂತಾರೆ
ಬೊಡ್ಡೆಗೆ ಕೊಡಲಿ ಹಾಕುತಲಿದ್ದು ಕೊಂಬೆ ಚಿಗುರಿದವು ಅಂತಾರೆ ||೨||

ನೆಲದಲಿ ಹುಟ್ಟಿದ ಗಿಡಗಳ ಕಿತ್ತುತ ಅಂತರ ಬೆಂತರ ಬೆಳೆಸ್ಯಾರೆ
ಮಣ್ಣೂ ನೀರೂ ತುಳಿದೂ ಹಳಿದೂ ರೊಕ್ಕದಿ ಗಿಡಗಳ ಇಳಿಸ್ಯಾರೆ ||೩||

ಜೀವನ ಮೂಲದಿ ಹೊಮ್ಮಿದ ನಾದದ ಕೋಗಿಲೆ ಕೊರಳನು ಹಿಚಿಕ್ಯಾರೆ
ಸಮಗ್ರ ಬದುಕಿನ ಸುರ ಸಂಗೀತದ ತಂತು ತಂತುಗಳ ತಿರಿಚ್ಯಾರೆ ||೪||

ಬಯಲು ಆಲಯದ ಹಿಡಿಯದ ಲೀಲೆಯ ಗೂಡುಗಳಲಿ ಹಿಡಿದಿಟ್ಟಾರೆ
ಆಕಾರಿಲ್ಲದ ಅಗಮ್ಯ ಗೂಢಕೆ ತೋಚಿದ ಆಕೃತಿ ಕೊಟ್ಟಾರೆ ||೫||

ಹಾಲೂ ಇಲ್ಲಾ ಬಟ್ಟಲು ಇಲ್ಲಾ ಗೊಟಕ್ಕು ಪೂಜೆಯ ಮಾಡ್ಯಾರೆ
ವೇಷ ಮೋಸಗಳ ಕಳ್ಳ ಬಸಿರುಗಳು ಉಬ್ಬಿದ ಅಬ್ಬರ ಮೆರೆಸ್ಯಾರೆ ||೬||

ಝಣ ಝಣ ರೊಕ್ಕದ ಗಂಟೆ ಭೇರಿಗಳ ನಾದದ ಕೇಳುವ ಧರ್ಮಗಳು
ಹಸಿದ ಕೂಸುಗಳ ನೊಂದ ಜೀವಿಗಳ ಕೂಗು ಕೇಳದಾ ಕಿವುಡುಗಳು ||೭||

ಬಣ್ಣ ಬಟ್ಟೆಗಳು ಮಹಲು ಮೆರಗುಗಳು ಮಾತ್ರ ಕಾಣುವವು ಅವುಗಳಿಗೆ
ಹರಕು ಬಟ್ಟೆಗಳು ದುಡಿವ ರಟ್ಟೆಗಳು ಕಾಣದ ಕುರುಡಿದೆ ಅವುಗಳಿಗೆ ||೮||

***

ನಾಮಾ ವಿಭೂತಿಗಳಲ್ಲಿ ಇರುವುದೇ
ಜನಿವಾರ ಜುಟ್ಟುಗಳಲಿದೆಯೇ?
ಗುಡಿಗೋಪುರದಲಿ ಬಸದಿಯಲಿರುವುದೆ
ಮಸೀದಿ ಗೋಡೆಗಳೊಳಗಿದೆಯೇ? ||೯||

ಗುಡಿಗಳ ಒಳಗಿನ ಕಲ್ಲು ಲೋಹಗಳ
ವಿಧ ವಿಧ ವಿಗ್ರಹಗಳಲಿದೆಯೇ?
ನಾಮ ಪಠಣದಲಿ ಜಪಮಾಲೆಗಳಲಿ
ಯಜ್ಞ ಯಾಗಗಳಲಡಗಿದೆಯೇ? ||೧೦||

ಮಡಿಮೈಲಿಗೆಯಲಿ ವ್ರತನೇಮಗಳಲಿ
ಮೂಡ ಭಕ್ತಿಯಲಿ ಕುಳಿತಿದೆಯೇ?
ಊಹಾ ಮೃಗಜಲ ಪುರಾಣ ಕತೆಗಳ
ಶಾಸ್ತ್ರಗಳಡವಿಗಳೊಳಗಿದೆಯೇ? ||೧೧||

ಮಠಗಳ ಸಿಂಹಾಸನಗಳ ಮೇಲೆ
ಛತ್ರ ಚವರಿಗಳ ತಂಪಿನಲಿ
ಪಲ್ಲಕ್ಕಿಗಳಲಿ ಅಟ್ಟಹಾಸದಲಿ
ಮೆರೆಯುತಲಿದೆಯೇ ಸೊಂಪಿನಲಿ? ||೧೨||

****

ಎಲ್ಲಿದೆ ಧರ್ಮಾ ಯಾವುದು ಧರ್ಮಾ
ಏನದು ಧರ್ಮಾ ತೋರಿಸಿರೊ
ಬೆಳಕನು ಹರಡಲು ಹುಟ್ಟಿದ ಧರ್ಮವು
ಕತ್ತಲೆಯನೆ ಹಬ್ಬಿಸದಿರಲಿ ||೧೩||

ಜ್ಞಾನ ದೀವಿಗೆಯು ಮೌಢ್ಯ ಕಂದಕದಿ
ಉಸಿರು ಕಟ್ಟದೆಯೆ ಬದುಕಿರಲಿ
ಮಾನವರೆಲ್ಲರ ಕೂಡಿಸುವ ಬದಲು
ಭೇದಿಸಿ ಕೊಲ್ಲದ ಹಾಗಿರಲಿ
ಮಾನವತೆಯ ಆ ಮೂಲ ಬೇರಿನಲಿ
ತನ್ನಯ ಸಾರವ ಹೀರಿರಲಿ ||೧೪||
********

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಭಾ ಪ್ರವಾಸ
Next post ಫ್ರಿಜ್ ನ ಒಳ ಹೊರಗು

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys