ಮುದಿಕ್ಯಾಗಿ ಮುರುಕ ಇನ್ನ್ಯಾಕ

ಮುದಿಕ್ಯಾಗಿ ಮುರುಕ ಇನ್ನ್ಯಾಕ
ಎದುರಿಗೆ ನೀರಗಿಗಳ್ ಒದೆಯುವದು ಸಾಕೆ ||ಪ||

ಮೊದಲಿಗೆ ಮೂವರು ಕೂಡಿ ಮಾಯ
ಮದನ ಮಂದಿರದೊಳು ಮುದದಿ ಮಾತಾಡಿ
ಹದಗೆಟ್ಟು ಹಾದರ ಮಾಡಿ ಮುಂದೆ
ಬದುಕಿನ ಎಚ್ಚರ ನಿನಗಿಲ್ಲ ಖೋಡಿ ||೧||

ಏಳೆಂಟು ಗೆಳತೇರು ಜತ್ತು ಹಳ್ಳಿ ಹಳ್ಳಿ
ಸೂಳೇರ ತೆರದಲ್ಲಿ ತಿರುಗುತಿ ಎತ್ತ
ಕಾಳ ಕತ್ತಲದೊಳು ಗೊತ್ತು
ಹಾಳು ಗುಡಿಯೊಳು ಬಂದು ಬೀಳುದು ಕತ್ತೆ ||೨||

ನೆರೆ ಹಾಯ್ತು ತೆಲಿ ಬೆಳ್ಳಗಾಯ್ತು ಬುದ್ಧಿ
ಬರಲಿಲ್ಲ ಹಿರಿ ಕಿರಿಯರು ಹೇಳಲಾಗಿ ಜನ
ಹರಲಿಗೆ ಗುರಿಯಾಗಿ ನೀನು
ಶಿಶುನಾಳೇಶಗ ಜೋಡು ಕಾಯಿ ವಡಿಸವ್ವಾ ಮುದಿಕಿ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುವಿಗೆ ಮರುಳು ಮಾಡುವರೇನೆ ಮಾನಿನಿ
Next post ನಡಿ ನಡಿಯುತ ಗಂಡ ನಡಮುರಿದೊದೆದೆನ್ನ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys