ಡೊಳ್ಳನ ಪದ

ಗುರುವೇ ನಮ್ಮಾಯ ದೇವಾರ್ ಬಂದಾವ ಬನ್ನಿರೂ
ಹರನೇ ನಮ್ಮಾಯ್ ದೇವರಿಗೆ ಶರಣೆನ್ನಿರೋ
ಸ್ವಾಮಿ ನಮ್ಮಾಯ್ ದೇವಾರ್ ಬಂದಾವ ಬನ್ನಿರೋ ||ಪ||

ದೇವರು ಊರಿಗೆ ಬಂದಾವೇ ಅಕ್ಷರ ವರವಾ ತಂದಾವೆ
ಸಾವಿರದಂಥ ನೋವಿರದಂಥ ವಿದ್ಯೆಯ ಅಮೃತ ತಂದಾವೆ ||೧||

ವಿದ್ಯೆಯ ಕಲಿಯಿರಿ ಬುದ್ದಿಯ ಬೆಳೆಸಿರಿ ಅದುವೇ ಸಂಪತ್ತು ಅಂದಾವೆ
ನಿಮ್ಮ ಉದ್ದಾರ ನಿಮ್ಮ್ಮ ಕೈಯಾಗೆ ಎನ್ನುತ ಕತ್ತಲೆ ಕೊಂದಾವೆ ||೨||

ಹೆಬ್ಬಟ್ಟು ಗುರುತು ನರನಿಗೆ ಶಾಪಾ
ಶಾಪವ ಬಿಡಿಸಾಕೆ ಬಂದಾವೆ
ದೇವರ ಲೋಕದ ಒಳಗಡೆ ಪರವೇಶ
ಅಂಥಾವ್ರಿಗಿಲ್ಲಂತ ಸಾರ್ಯಾವೆ ||೩||

ಇಲ್ಲಿಯವರೆಗೆಲ್ಲ ಓದಿದ್ದ ತಲೆಗಳು
ನಮ್ಮನ್ನ ಕಾಲಾಗೆ ತುಳಿದಾವೆ
ಕೆಳಗೆ ಬಿದ್ದವರೆಲ್ಲ ಮ್ಯಾಲೆದ್ದು ನಿಲ್ಲಾಕ
ಆಸರೆ ಒಂದಾ ತಂದಾವೆ ||೪||

ಮಕ್ಕಳು ಭಾಳಾ ದೇಶಕೆ ಭಾರಾ
ಭಾರತ ಮಾತೆಯ ಕೊಂದಾವೆ
ಒಂದೊಂದು ಮನಿಯಾಗೆ ಇಬ್ಬರು ಮಕ್ಕಳು
ಸಾಕೇ ಸಾಕು ಅಂದಾವೆ ||೫||

ಆರೋಗ್ಯ ಜೀವನ ಸ್ವಚ್ಛತೆ ಜೀವನ
ಅದುವೇ ಸ್ವರ್ಗಾ ಅಂದಾವೆ
ಕಾಯಿಲೆಗಳಿಗೆಲ್ಲ ದೇವರ ಗುರಿ ಮಾಡಿ
ಮೂಢರಾಗಬೇಡಿ ಅಂದಾವೆ ||೬||

ಹೆಣ್ಣು ಗಂಡೂ ಒಲವಿನ ಬಾಳಿಗೆ
ಸರಳ ವಿವಾಹವೆ ಸರಿ ನೋಡ್ರಿ
ಅದ್ದೂರಿ ಗದ್ದಲ ವೈಭವದ ಮದುವೆಯ
ಮಾಡುತ ಸಾಲದಿ ಕೊಳಿಬ್ಯಾಡ್ರಿ ||೭||

ಗಂಡೂ ಹೆಣ್ಣೂ ಎರಡೂ ಕಣ್ಣು
ದೇವರ ಲೀಲ್ಯಾಗ ಅಂದಾವೆ
ಹೆಣ್ಣನು ತುಳಿಯುತ ಬದುಕುವ ಗಂಡು
ಗಂಡಲ್ಲ ಭಂಡಾ ಅಂದಾವೆ ||೮||

ಪುರಾಣ ಕತೆಗಳ ಕತೆಯಂತೆ ನೋಡಿರಿ
ನೂರಕ್ಕೆ ನೂರು ನಿಜವಲ್ಲ
ಧರ್ಮದ ಮರ್ಮವ ಸರಿಯಾಗಿ ತಿಳಿಯಿರಿ
ಧರ್ರ್ಮಾಂಧತೆಯಿಂದ ಉಳಿವಿಲ್ಲ ||೯||

ಮಾನವರೆಲ್ಲ ಒಂದೇ ಎನ್ನಿರಿ
ಭೇದವ ಮಾಡೋದು ಮಹಾಪಾಪ
ಮೇಲು ಕೀಳೆನ್ನುತ ಮೆರೆಯುವ ಮೂರ್ಖರಿಗೆ
ದೇವರು ಕೊಡತಾವ ಹಿಡಿಶಾಪ ||೧೦||

ಎಲ್ಲರು ಕೂಡುತ ದುಡಿಯುತ ಹಾಡುತ
ಬಾಳಿರಿ ಎನ್ನುತ ಹರಸ್ಯಾವೆ
ಎಲ್ಲರಿಗಾಗಿಯೆ ಎಲ್ಲರು ಇದುವೇ
ಮಾನವ ಧರ್ಮೆಂದು ಸಾರ್ಯಾವೆ ||೧೧||

******

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಷ್ಯಾ
Next post ಮನೆ ವಿಮೆ : ಏನು? ಹೇಗೆ?

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…