Home / ಕವನ / ಕವಿತೆ / ಶ್ರಮದ ಹಿರಿಮೆ

ಶ್ರಮದ ಹಿರಿಮೆ

ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ

ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ
ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ

ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ
ನಿಸರ್ಗವೆಲ್ಲಾ ಚೆಲುವಿನ ತವರು ಶ್ರಮವೇ ವಿಶ್ವದ ಸತ್ಯಾ

ರಾಜಾಧಿರಾಜರ ಕೋಟೆಕೊತ್ತಲ ಅರಮನೆ ಗುರುಮನೆಗೆಲ್ಲ
ಶ್ರಮಜೀವಿಗಳೇ ಕಾರಣಕರ್ತರು ಚರಿತ್ರೆ ಬುನಾದಿಗೆಲ್ಲ

ಹೊನ್ನರಾಶಿಗಳು ಮುತ್ತು ರತ್ನಗಳು ಬೀದಿಗಳಲ್ಲಿ ಮೆರೆದಿರಲು
ಬೆನ್ನನುಬಗ್ಗಿಸಿ ದುಡಿಯುವ ಅವನ್ನು ತಂದವರೇ ಶ್ರಮ ಜೀವಿಗಳು

ಚರಿತ್ರೆಯನ್ನೇ ಕಟ್ಟಿ ಬೆಳೆಸಿದ ಶ್ರಮಜೀವಿಗಳ ಹೆಸರೆಲ್ಲಿ
ಸಾವಿರ ವರ್ಷದ ಸಂಸ್ಕೃತಿಗಳನ್ನು ಸೃಷ್ಟಿಸಿದವರ ಗುರುತೆಲ್ಲಿ

ದೇಶಕ್ಕೆಲ್ಲ ಅನ್ನವ ಕೊಡುವುದು ದುಡಿಯುವ ರೈತನ ಶ್ರಮವು
ಉಣ್ಣುವ ಉಡುವ ಎಲ್ಲ ವಸ್ತುಗಳ ಮೂಲದಲ್ಲಿದೆ ಶ್ರಮವು

ರಸ್ತೆ ಬೀದಿಗಳ ಮಹಲು ಮನೆಗಳ ಕಟ್ಟುವುದೆಲ್ಲ ಶ್ರಮವೆ
ನಾಗರಿಕತೆಗಳ ವೈಭವಗಳನ್ನು ಬೆಳೆಸಿದೆಲ್ಲ ಶ್ರಮವೆ

ಅಣೆಕಟ್ಟುಗಳ ಕಾರಖಾನೆಗಳ ನಿರ್ಮಿಸಿರುವರು ದುಡಿವವರು
ಬೆವರು ರಕ್ತಗಳ ಹರಿಸಿ ದುಡಿವವರು ಹೆಸರಿಲ್ಲದೆಯೆ ಮಡಿವವರು

ಗುಡ್ಡ ಗಣಿಗಳಲಿ ಕಬ್ಬಿಣ ಅಗೆವರು ಕಬ್ಬಿಣದಂಥಾ ದುಡಿವವರು
ದುಡಿವರ ಬೆನ್ನಿನ ಮೇಲ್ಗಡೆ ಕುಳಿತು ಮೆರೆವವರು ಹಣವುಳ್ಳವರು
ಮಂತ್ರಿ ಶಾಸಕರ ಆರಿಸಿ ಗದ್ದುಗೆಗೇರಿಸಿ ಹೊರುವರು ದುಡಿವವರು
ಸ್ವಾಮಿ ಜಗದ್ಗುರುಗಳ ಪಲ್ಲಕಿಯಲಿ ಮೆರೆಸಿ ಸಾಯುವರು ದುಡಿವವರು

ಶ್ರಮ ಜೀವಿಗಳಿಗೆ ಮೋಸವ ಮಾಡುವ ದೇಶವು ಎಂದೂ ಬೆಳೆಯೊಲ್ಲ
ಶ್ರಮ ಗೌರವವನು ಮರೆತ ಜನಾಂಗಕೆ ಪ್ರಗತಿಯ ಭವಿಷ್ಯ ಉಳಿಯೊಲ್ಲ

ಶ್ರಮ ಜೀವಿಗಿಂತ ಶ್ರೇಷ್ಠನು ಯಾರು ಅವನಿಗೆ ಎಲ್ಲರು ಸಣ್ಣವರು
ಪವಿತ್ರ ತೀರ್ಥವು ಯಾವುದು ಇಲ್ಲ ಅದುವೇ ಶ್ರಮದಾ ಬೆವರು

ಶ್ರಮವೇ ದೇಹಾರೋಗ್ಯಕ್ಕೆ ಮೂಲ ಮನದಾರೋಗ್ಯವು ಕೂಡ
ಜಪತಪ ಪೂಜಾ ಯಜ್ಞಯೋಗಗಳು ಶ್ರಮಕ್ಕೆ ಸಣ್ಣವು ನೋಡ

ಚೆಲುವಿನ ರಹಸ್ಯ ಗೆಲುವಿನ ಗುಟ್ಟು ಶ್ರಮ ಸಾಧನೆಯಲೆ ಅಡಗಿಹುದು
ದೀರ್ಘಾಧಾಯುಷ್ಯ ಶಕ್ತಿ ಸಾಮರ್ಥ್ಯ ಶ್ರಮದಿಂದ ಸಿದ್ದಿಯಾಗುವುದು

ತಲತಲಾಂತರದ ಕರ್ಮಕೌಶಲತೆ ಕಲೆ ಜಾಣ್ಮೆ ಪ್ರತಿಭೆಯೆಲ್ಲ
ಹನಿ ಹನಿ ಕೂಡಿದ ಹೊಳೆಯು ಸಂಸ್ಕೃತಿಯು
ಎಲ್ಲ ಶ್ರಮದ ಕೊಡುಗೆಯಲಾ
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...