Home / ಕವನ / ಕವಿತೆ / ಶ್ರಮದ ಹಿರಿಮೆ

ಶ್ರಮದ ಹಿರಿಮೆ

ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ

ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ
ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ

ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ
ನಿಸರ್ಗವೆಲ್ಲಾ ಚೆಲುವಿನ ತವರು ಶ್ರಮವೇ ವಿಶ್ವದ ಸತ್ಯಾ

ರಾಜಾಧಿರಾಜರ ಕೋಟೆಕೊತ್ತಲ ಅರಮನೆ ಗುರುಮನೆಗೆಲ್ಲ
ಶ್ರಮಜೀವಿಗಳೇ ಕಾರಣಕರ್ತರು ಚರಿತ್ರೆ ಬುನಾದಿಗೆಲ್ಲ

ಹೊನ್ನರಾಶಿಗಳು ಮುತ್ತು ರತ್ನಗಳು ಬೀದಿಗಳಲ್ಲಿ ಮೆರೆದಿರಲು
ಬೆನ್ನನುಬಗ್ಗಿಸಿ ದುಡಿಯುವ ಅವನ್ನು ತಂದವರೇ ಶ್ರಮ ಜೀವಿಗಳು

ಚರಿತ್ರೆಯನ್ನೇ ಕಟ್ಟಿ ಬೆಳೆಸಿದ ಶ್ರಮಜೀವಿಗಳ ಹೆಸರೆಲ್ಲಿ
ಸಾವಿರ ವರ್ಷದ ಸಂಸ್ಕೃತಿಗಳನ್ನು ಸೃಷ್ಟಿಸಿದವರ ಗುರುತೆಲ್ಲಿ

ದೇಶಕ್ಕೆಲ್ಲ ಅನ್ನವ ಕೊಡುವುದು ದುಡಿಯುವ ರೈತನ ಶ್ರಮವು
ಉಣ್ಣುವ ಉಡುವ ಎಲ್ಲ ವಸ್ತುಗಳ ಮೂಲದಲ್ಲಿದೆ ಶ್ರಮವು

ರಸ್ತೆ ಬೀದಿಗಳ ಮಹಲು ಮನೆಗಳ ಕಟ್ಟುವುದೆಲ್ಲ ಶ್ರಮವೆ
ನಾಗರಿಕತೆಗಳ ವೈಭವಗಳನ್ನು ಬೆಳೆಸಿದೆಲ್ಲ ಶ್ರಮವೆ

ಅಣೆಕಟ್ಟುಗಳ ಕಾರಖಾನೆಗಳ ನಿರ್ಮಿಸಿರುವರು ದುಡಿವವರು
ಬೆವರು ರಕ್ತಗಳ ಹರಿಸಿ ದುಡಿವವರು ಹೆಸರಿಲ್ಲದೆಯೆ ಮಡಿವವರು

ಗುಡ್ಡ ಗಣಿಗಳಲಿ ಕಬ್ಬಿಣ ಅಗೆವರು ಕಬ್ಬಿಣದಂಥಾ ದುಡಿವವರು
ದುಡಿವರ ಬೆನ್ನಿನ ಮೇಲ್ಗಡೆ ಕುಳಿತು ಮೆರೆವವರು ಹಣವುಳ್ಳವರು
ಮಂತ್ರಿ ಶಾಸಕರ ಆರಿಸಿ ಗದ್ದುಗೆಗೇರಿಸಿ ಹೊರುವರು ದುಡಿವವರು
ಸ್ವಾಮಿ ಜಗದ್ಗುರುಗಳ ಪಲ್ಲಕಿಯಲಿ ಮೆರೆಸಿ ಸಾಯುವರು ದುಡಿವವರು

ಶ್ರಮ ಜೀವಿಗಳಿಗೆ ಮೋಸವ ಮಾಡುವ ದೇಶವು ಎಂದೂ ಬೆಳೆಯೊಲ್ಲ
ಶ್ರಮ ಗೌರವವನು ಮರೆತ ಜನಾಂಗಕೆ ಪ್ರಗತಿಯ ಭವಿಷ್ಯ ಉಳಿಯೊಲ್ಲ

ಶ್ರಮ ಜೀವಿಗಿಂತ ಶ್ರೇಷ್ಠನು ಯಾರು ಅವನಿಗೆ ಎಲ್ಲರು ಸಣ್ಣವರು
ಪವಿತ್ರ ತೀರ್ಥವು ಯಾವುದು ಇಲ್ಲ ಅದುವೇ ಶ್ರಮದಾ ಬೆವರು

ಶ್ರಮವೇ ದೇಹಾರೋಗ್ಯಕ್ಕೆ ಮೂಲ ಮನದಾರೋಗ್ಯವು ಕೂಡ
ಜಪತಪ ಪೂಜಾ ಯಜ್ಞಯೋಗಗಳು ಶ್ರಮಕ್ಕೆ ಸಣ್ಣವು ನೋಡ

ಚೆಲುವಿನ ರಹಸ್ಯ ಗೆಲುವಿನ ಗುಟ್ಟು ಶ್ರಮ ಸಾಧನೆಯಲೆ ಅಡಗಿಹುದು
ದೀರ್ಘಾಧಾಯುಷ್ಯ ಶಕ್ತಿ ಸಾಮರ್ಥ್ಯ ಶ್ರಮದಿಂದ ಸಿದ್ದಿಯಾಗುವುದು

ತಲತಲಾಂತರದ ಕರ್ಮಕೌಶಲತೆ ಕಲೆ ಜಾಣ್ಮೆ ಪ್ರತಿಭೆಯೆಲ್ಲ
ಹನಿ ಹನಿ ಕೂಡಿದ ಹೊಳೆಯು ಸಂಸ್ಕೃತಿಯು
ಎಲ್ಲ ಶ್ರಮದ ಕೊಡುಗೆಯಲಾ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...